ಹದಿನಾರು ದಿನಗಳ ಅವಧಿಯಲ್ಲಿ ಒಂದೇ ಕುಟುಂಬದ ನಾಲ್ವರು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಬಂಟ್ವಾಳ ತಾಲೂಕಿನ ಸಜೀಪನಡು ಗ್ರಾಮ ನಿವಾಸಿ ಮಯ್ಯದ್ದಿ ಅಕ್ಟೋಬರ್ 1ರಂದು ಜ್ವರಪೀಡಿತರಾಗಿ ಆಸ್ಪತ್ರೆಗೆ ದಾಖಲಾಗಿ ಮೃತಪಟ್ಟಿದ್ದರೆ, ಅವರ ಪತ್ನಿ ಅವ್ವಮ್ಮ ಅವರು ಎಚ್1ಎನ್1 ಜ್ವರ ಬಾಧಿತರಾಗಿ ಅ.10ರಂದು ಅಸು ನೀಗಿದರು. ಮಯ್ಯದ್ದಿ-ಅವ್ವಮ್ಮ ದಂಪತಿ ಪುತ್ರಿ ಝುಬೀನಾ ಹೆರಿಗೆಗೆ ಎಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟು ಮಗುವಿಗೆ ಜನ್ಮ ನೀಡಿದ್ದು, ಆರು ದಿನಗಳಲ್ಲಿ ಆ ಮಗುವೂ ಮೃತಪಟ್ಟಿತು. (ಅ.4ರಂದು ಮಗು ಸಾವನ್ನಪ್ಪಿದೆ). ಇದೇ ವೇಳೆ ಝುಬೀನಾ ಅವರೂ ಜ್ವರಪೀಡಿತರಾಗಿ ಆಸ್ಪತ್ರೆಗೆ ದಾಖಲಾಗಿದ್ದು ಅವರೂ ಎಚ್1ಎನ್1 ಜ್ವರಪೀಡಿತರಾಗಿ ಮಂಗಳವಾರ ನಸುಕಿನ ವೇಳೆಗೆ ಇಹಲೋಕ ತ್ಯಜಿಸಿದ್ದಾರೆ.
ಜಾಹೀರಾತು
ಮೃತಪಟ್ಟವರಲ್ಲಿ ಇಬ್ಬರಿಗೆ ಎಚ್1ಎನ್1 ಬಂದಿರುವುದು ದೃಢಪಟ್ಟಿದ್ದು, ಒಟ್ಟು ಒಂದೇ ಕುಟುಂಬದದ ನಾಲ್ವರು ಸಾವನ್ನಪ್ಪಿರುವುದು ಕುಟುಂಬಕ್ಕಷ್ಟೇ ಅಲ್ಲ, ಇಡೀ ಊರಿಗೇ ಆಘಾತ ತಂದಿದೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಹದಿನಾರು ದಿನಗಳ ಅವಧಿಯಲ್ಲಿ ಒಂದೇ ಕುಟುಂಬದ ನಾಲ್ವರ ಮೃತ್ಯು"
Be the first to comment on "ಹದಿನಾರು ದಿನಗಳ ಅವಧಿಯಲ್ಲಿ ಒಂದೇ ಕುಟುಂಬದ ನಾಲ್ವರ ಮೃತ್ಯು"