ಬಂಟ್ವಾಳ

ಹದಿನಾರು ದಿನಗಳ ಅವಧಿಯಲ್ಲಿ ಒಂದೇ ಕುಟುಂಬದ ನಾಲ್ವರ ಮೃತ್ಯು

ಹದಿನಾರು ದಿನಗಳ ಅವಧಿಯಲ್ಲಿ ಒಂದೇ ಕುಟುಂಬದ ನಾಲ್ವರು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಬಂಟ್ವಾಳ ತಾಲೂಕಿನ ಸಜೀಪನಡು ಗ್ರಾಮ ನಿವಾಸಿ ಮಯ್ಯದ್ದಿ ಅಕ್ಟೋಬರ್ 1ರಂದು ಜ್ವರಪೀಡಿತರಾಗಿ ಆಸ್ಪತ್ರೆಗೆ ದಾಖಲಾಗಿ ಮೃತಪಟ್ಟಿದ್ದರೆ, ಅವರ ಪತ್ನಿ ಅವ್ವಮ್ಮ ಅವರು ಎಚ್1ಎನ್1 ಜ್ವರ ಬಾಧಿತರಾಗಿ ಅ.10ರಂದು ಅಸು ನೀಗಿದರು. ಮಯ್ಯದ್ದಿ-ಅವ್ವಮ್ಮ ದಂಪತಿ ಪುತ್ರಿ ಝುಬೀನಾ ಹೆರಿಗೆಗೆ ಎಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟು ಮಗುವಿಗೆ ಜನ್ಮ ನೀಡಿದ್ದು, ಆರು ದಿನಗಳಲ್ಲಿ ಆ ಮಗುವೂ ಮೃತಪಟ್ಟಿತು. (ಅ.4ರಂದು ಮಗು ಸಾವನ್ನಪ್ಪಿದೆ). ಇದೇ ವೇಳೆ ಝುಬೀನಾ ಅವರೂ ಜ್ವರಪೀಡಿತರಾಗಿ ಆಸ್ಪತ್ರೆಗೆ ದಾಖಲಾಗಿದ್ದು ಅವರೂ ಎಚ್1ಎನ್1 ಜ್ವರಪೀಡಿತರಾಗಿ ಮಂಗಳವಾರ ನಸುಕಿನ ವೇಳೆಗೆ ಇಹಲೋಕ ತ್ಯಜಿಸಿದ್ದಾರೆ.

ಜಾಹೀರಾತು

ಮೃತಪಟ್ಟವರಲ್ಲಿ ಇಬ್ಬರಿಗೆ ಎಚ್1ಎನ್1 ಬಂದಿರುವುದು ದೃಢಪಟ್ಟಿದ್ದು, ಒಟ್ಟು ಒಂದೇ ಕುಟುಂಬದದ ನಾಲ್ವರು ಸಾವನ್ನಪ್ಪಿರುವುದು ಕುಟುಂಬಕ್ಕಷ್ಟೇ ಅಲ್ಲ, ಇಡೀ ಊರಿಗೇ ಆಘಾತ ತಂದಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ