ವಿದ್ಯುತ್ ಕಂಬದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಇಬ್ಬರು ಕಾರ್ಮಿಕರು ಗಂಭೀರ ಗಾಯಗೊಂಡ ಘಟನೆ ಕೊಳ್ನಾಡು ಗ್ರಾಮದ ಕುಡ್ತಮುಗೇರು ಎಂಬಲ್ಲಿ ಮಂಗಳವಾರ ನಡೆದಿದೆ.
Internet Photo
ಕಂಬಳಬೆಟ್ಟು ನೂಜಿ ನಿವಾಸಿ ಜಗದೀಶ ಹಾಗೂ ಕೊಳ್ನಾಡು ಗ್ರಾಮದ ಕೋಜಿಗುರಿ ನಿವಾಸಿ ಪ್ರವೀಣ್ ಗಾಯಗೊಂಡ ಕಾರ್ಮಿಕರು. ಕೊಳ್ನಾಡು ಗ್ರಾಮದ ಪಡಾರು ಕುಡ್ತಿಕಲ್ಲು ಎಂಬಲ್ಲಿ ಹಳೆಯ ತಂತಿಗಳನ್ನು ಬದಲಾಯಿಸುತ್ತಿದ್ದ ವೇಳೆ ವಿದ್ಯುತ್ ಪ್ರವೇಶಿಸಿ ಕಂಬದಲ್ಲಿದ್ದ ಇಬ್ಬರು ಕೆಳಗಡೆ ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾಮಗಾರಿ ಹಿನ್ನೆಲೆಯಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…