ಪಾಣೆಮಂಗಳೂರು ಗ್ರಾಮ ಬೊಂಡಾಲ 27ನೇ ವಾರ್ಡ್ ಶಾಂತಿಗುಡ್ಡೆ ಗುಂಡೂರು ಮಹಮ್ಮಾಯಿ ರಸ್ತೆಗೆ ಮಾಜಿ ಸಚಿವ ಬಿ.ರಮಾನಾಥ ರೈ ಅ. 22ರಂದು ತೆಂಗಿನಕಾಯಿ ಒಡೆಯುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು.
ಬಂಟ್ವಾಳ ವಿಧಾನ ಸಭಾ ಚುನಾವಣೆ ಪೂರ್ವದಲ್ಲಿ ನಗರೋತ್ಥಾನ ಯೋಜನೆಯಡಿ 20ಲಕ್ಷ ರೂ. ಅನುದಾನ ಮಂಜೂರಾಗಿದ್ದು ಕಾಮಗಾರಿಯು ವಿವಿಧ ಕಾರಣಕ್ಕೆ ಚಾಲನೆ ಆಗಿರಲಿಲ್ಲ. ತನ್ನ ಅಧಿಕಾರದ ಅವಧಿಯಲ್ಲಿ ಈ ಕಾಮಗಾರಿಗೆ ಅನುದಾನ ಮಂಜೂರಾಗಿತ್ತು. ಅಂದು ಚುನಾವಣೆ ನೀತಿ ಸಂಹಿತೆ ಕಾರಣಕ್ಕೆ ಕಾಮಗಾರಿ ನಡೆದಿರಲಿಲ್ಲ. ಪ್ರಸ್ತುತ ನಾನು ಮಾಜಿ ಆದರೂ ಅಂದು ಮಂಜೂರಾತಿ ಆಗಿರುವ ಅಭಿವೃದ್ದಿ ಕಾಮಗಾರಿಯನ್ನು ಮುಂದುವರಿಸಿ ಕ್ರಮ ಕೈಗೊಂಡಿದ್ದಾಗಿ ಸ್ಥಳದಲ್ಲಿ ಇದ್ದ ಊರಿನ ಜನರಲ್ಲಿ ತಿಳಿಸಿದರು.
ಕಾಮಗಾರಿ ಚಾಲನೆ ಸಂದರ್ಭ ಯುವ ಕಾಂಗ್ರೆಸ್ ಉಪಾಧ್ಯಕ್ಷ ಬೊಂಡಾಲ ಚಿತ್ತರಂಜನ್ ಶೆಟ್ಟಿ, ಪುರಸಭಾ ಸದಸ್ಯ ಅಬೂಬಕ್ಕರ್ ಸಿದ್ದಿಕ್ , ವೆಂಕಪ್ಪ ಪೂಜಾರಿ, ಗುತ್ತಿಗೆದಾರ ದೀರಜ್ ನಾಕ್ ಮತ್ತು ಸ್ಥಳೀಯರು ಉಪಸ್ಥಿತರಿದ್ದರು.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…