ಬಂಟ್ವಾಳ

ವಲಯ ಸ್ಪರ್ಧೆಯಲ್ಲಿ ಬಂಟ್ವಾಳ ರೋಟರಿ ಕ್ಲಬ್ ಗೆ 10 ಬಹುಮಾನ

ಬೆಳ್ತಂಗಡಿ ರೋಟರೀ ಕ್ಲಬ್ ನ ಆತಿಥ್ಯದಲ್ಲಿ ಭಾನುವಾರ  ಉಜಿರೆಯ ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನ ಕಾಲೇಜಿನ ಸಭಾಭವನದಲ್ಲಿ ನಡೆದ ರೋಟರಿ ಜಿಲ್ಲೆ 3181,ರೋಟರಿ ವಲಯ 4ರ ಸಾಂಸ್ಕೃತಿಕ ಸ್ಪರ್ಧೇಯಲ್ಲಿ ಬಂಟ್ವಾಳ ರೋಟರಿ ಕ್ಲಬ್ 10 ಬಹುಮಾನಗಳನ್ನು ಗಳಿಸುವುದರ ಮೂಲಕ ಪ್ರಥಮ ರನ್ನರ್‍ಸ್ ಅಪ್ ಆಗಿ ಮೂಡಿಬಂದಿದೆ.

ಜಾಹೀರಾತು

11 ವಿಭಾಗಗಳಲ್ಲಿ ನಡೆದ ಸ್ಪರ್ಧೆಗಳಲ್ಲಿ 10 ಬಹುಮಾನಗಳನ್ನು ಪಡೆದುಕೊಂಡಿದ್ದು, ತನ್ನ 50ನೇ ವರ್ಷಾಚರಣೆಯ ಸಂಭ್ರಮಕ್ಕೆ ಮತ್ತಷ್ಟು ಮೆರುಗು ತಂದುಕೊಂಡಿದೆ. ರೊಟೇರಿಯನ್ ಗಾಯನ ಸ್ಪರ್ಧೆಯಲ್ಲಿ ಬಸ್ತಿ ಮಾಧವ ಶೆಣೈ ತೃತೀಯ ಬಹುಮಾನ, ಆನ್ಸ್ ವಿಭಾಗದ ಹಾಡುಗಾರಿಕೆಯಲ್ಲಿ ಪ್ರೇಮಲತಾ ರಾವ್ ದ್ವಿತೀಯ ಬಹುಮಾನ, 14 ವರ್ಷದ ಮೇಲ್ಪಟ್ಟ ಆನೆಟ್ಸ್ ಗಾಯನ ಸ್ಪರ್ಧೆಯಲ್ಲಿ ಅಶ್ವಿನಿ ಬಾಳಿಗಾ ಪ್ರಥಮ ಬಹುಮಾನ, 14 ವರ್ಷಕ್ಕಿಂತ ಕೆಳಗಿನ ಆನೆಟ್ಸ್ ವಿಭಾಗದ ಗಾಯನ ಸ್ಪರ್ಧೆಯಲ್ಲಿ ಪ್ರಣಮ್ಯ ರಾವ್ ತೃತೀಯ ಬಹುಮಾನ, ಯುಗಳ ಗೀತೆ ಸ್ಪರ್ಧೆಯಲ್ಲಿ ಬಸ್ತಿ ಮಾಧವ ಶೆಣೈ ಹಾಗೂ ಮಹಿಮಾ ತೃತೀಯ ಬಹುಮಾನ ಪಡೆದುಕೊಂಡಿದ್ದಾರೆ. 14 ವರ್ಷದ ಮೇಲ್ಪಟ್ಟ ಆನೆಟ್ಸ್ ವಿಭಾಗದ ನೃತ್ಯ ಸ್ಪರ್ಧೆಯಲ್ಲಿ ಅಶ್ವಿನಿ ಬಾಳಿಗಾ ತೃತೀಯ ಬಹುಮಾನ, 14 ವರ್ಷಕ್ಕಿಂತ ಕೆಳಗಿನ ಆನೆಟ್ಸ್ ವಿಭಾಗದ ನೃತ್ಯಸ್ಪರ್ಧೆಯಲ್ಲಿ  ಪ್ರಣಮ್ಯ ರಾವ್ ಪ್ರಥಮ ಸ್ಥಾನಗಳಿಸಿದ್ದಾರೆ. ಸಮೂಹ ಗಾನ ಸ್ಪರ್ಧೆಯಲ್ಲಿ ಬಂಟ್ವಾಳ ರೋಟರೀ ಕ್ಲಬ್ ದ್ವಿತೀಯ ಬಹುಮಾನ ಹಾಗೂ ಮೂಕಾಭಿನಯದಲ್ಲಿ ತೃತೀಯ ಸ್ಥಾನ ಗಳಿಸಿದೆ. ಪ್ರಹಸನ ವಿಭಾಗದಲ್ಲಿ ಬಂಟ್ವಾಳ ರೋಟರೀ ಕ್ಲಬ್ ಪ್ರಸ್ತುತ ಪಡಿಸಿದ “ಅಯ್ಯೋ ನೇತ್ರಾವತಿ” ಪ್ರಥಮ ಸ್ಥಾನಗಳಿಸಿ , ಸೋಮವಾರ ಪೇಟೆಯಲ್ಲಿ ನಡೆಯಲಿರುವ ರೋಟರೀ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ. ಬಂಟ್ವಾಳ ರೋಟರೀಕ್ಲಬ್ ಅಧ್ಯಕ್ಷ ಮಂಜುನಾಥ ಆಚಾರ್ಯ, ಕಾರ್ಯದರ್ಶಿ ಶಿವಾನಿಬಾಳಿಗಾ  ನೇತೃತ್ವದಲ್ಲಿ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಬಂಟ್ವಾಳ ರೋಟರೀಕ್ಲಬ್ ನ 30ಕ್ಕೂ ಅಧಿಕ ಸದಸ್ಯರು ಭಾಗವಹಿಸಿದ್ದರು. ವಲಯ 4ರ ಉಪರಾಜ್ಯಪಾಲ ಪ್ರಕಾಶ್ ಕಾರಂತ್, ಬಂಟ್ವಾಳ ರೋಟರಿ ಆನ್ಸ್ ಅಧ್ಯಕ್ಷೆ ವಿದ್ಯಾ ಎ.ರೈ  ಕೂಡ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಾಥ್ ನೀಡಿ ಸದಸ್ಯರಿಗೆ ಹುರುಪು ತುಂಬಿದರು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಬಿ.ಯಶೋವರ್ಮ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿದರು.

ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಜಗದೀಶ್ ಪ್ರಸಾದ್, ವಲಯ ಕೋ ಆರ್ಡಿನೇಟರ್ ಶ್ರೀಕಾಂತ್ ಕಾಮತ್, ವಲಯ ಲೆಫ್ಟಿನೆಂಟ್ ಡಾ.ಸುಧೀರ್ ಪ್ರಭು ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ