ಬಂಟ್ವಾಳ

ಕುಲಾಲ ಸಮುದಾಯ ಭವನದಲ್ಲಿ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ

ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ (ರಿ) ವತಿಯಿಂದ 2018 ನೇ ಸಾಲಿನ ಪ್ರತಿಭಾ ಪುರಸ್ಕಾರ ಮತ್ತು ನಿರಂತರ ವಿದ್ಯಾರ್ಥಿ ವೇತನ ಹಾಗೂ ಅಭಿನಂದನಾ ಕಾರ್ಯಕ್ರಮವು ಬಂಟ್ವಾಳ ತಾಲೂಕು ಕುಲಾಲ ಸಮುದಾಯ ಭವನದಲ್ಲಿ ಜರಗಿತು

ಜಾಹೀರಾತು

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಿಂಗಪ್ಪ ಮಾಸ್ತರ್ ಕೈಕುಂಜೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸುಜೀರ್ ಶ್ರೀದರ್ ಕುಡುಪು , ಡಾ. ರಮೇಶ್‌ , ಸುಂದರೇಶ್ , ಮುರುಳಿದಾಸ್ ಕುಲಾಲ್ , ಪ್ರಸಾದ್ ಕುಮಾರ್ ಮಾರ್ನಬೈಲು , ರಶ್ಮಿ ಅಮ್ಮೆಂಬಳ ಭಾಗವಹಿಸಿದ್ದರು.

ಬಂಟ್ವಾಳ ಪುರಸಭೆ ಗೆ ಆಯ್ಕೆಯಾದ ಜಯಂತಿ ಬಂಗೇರ, ಶೋಭಾ ಹರಿಶ್ಚಂದ್ರ, ಹರಿಪ್ರಸಾದ್ ಅವರನ್ನು ಅಭಿನಂದಿಸಲಾಯಿತು. ಕಾರ್ಯದರ್ಶಿ ಜಯಂತಿ ಟೀಚರ್ ಸ್ವಾಗತಿಸಿದರು.ಮಾಜಿ ಅಧ್ಯಕ್ಷ ಸತೀಶ್ ಕುಲಾಲ್ ವಂದಿಸಿದರು. ಕೇಶವ ಮಾಸ್ತರ್ ಮಾರ್ನಬೈಲು ಕಾರ್ಯಕ್ರಮ ನಿರೂಪಿಸಿದರು. ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನ ಪತ್ರವನ್ನು ಮಹಿಳಾ ಘಟಕದ ಅಧ್ಯಕ್ಷೆ ನಮಿತ, ಸೇವಾದಳಪತಿ ಹರಿಪ್ರಸಾದ್, ಕೋಶಾಧಿಕಾರಿ ನಾರಾಯಣ ಪೆರ್ನೆ, ಸಮಿತಿ ಸದಸ್ಯರಾದ ದಾಮೋದರ್ ಮಾಸ್ತರ್, ಜಲಜಾಕ್ಷಿ ಕುಲಾಲ್, ಸುಕುಮಾರ್ ಬಂಟ್ವಾಳ್ ವಾಚಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ