ಪ್ರಮುಖ ಸುದ್ದಿಗಳು

ಪುತ್ತೂರು ಪೋಳ್ಯ ಸಮೀಪ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ವಶಕ್ಕೆ

ಪುತ್ತೂರು ಪೋಳ್ಯದಲ್ಲಿ ಮನೆಯಲ್ಲಿ ನಾಡಬಾಂಬ್ ಸ್ಪೋಟಿಸಿದ ಪ್ರಕರಣದ ಆರೋಪಿಯನ್ನು ಪುತ್ತೂರು ಪೊಲೀಸರು ಕೇರಳದ ಎರ್ನಾಕುಳಂ ನಿಂದ ಬಂಧಿಸಿದ್ದಾರೆ. ಬಾಬು ಯಾನೆ ಬಾಲನ್ ಯಾನ್ ಬಾಲ ಚೇಟನ್ ಮೂಲತ: ಕೇರಳದವನು.

ಜಾಹೀರಾತು

ಅ.15ರಂದು ಪುತ್ತೂರು ಸಮೀಪ ಪೋಳ್ಯದ ನಾರಾಯಣ ಪ್ರಸಾದ್ ಎಂಬವರ ಮನೆಯಲ್ಲಿ ಈ ಘಟನೆ ಸಂಭವಿಸಿತ್ತು. ರಾತ್ರಿ 2 ಗಂಟೆಗೆ ಹೊರಗೆ ಸದ್ದು ಕೇಳಿದಾಗ ನಾರಾಯಣ ಪ್ರಸಾದ್, ಶಾಲಿನಿ ದಂಪತಿಗೆ ಎಚ್ಚರವಾಗಿತ್ತು. ಮನೆಯ ಸಿಟೌಟ್ ಗೆ ಕಾಲಿಡುವಷ್ಟರಲ್ಲಿ ಕಾಲ ಬುಡದಲ್ಲೇ ನಾಡ ಬಾಂಬ್ ಸ್ಫೋಟಿಸಿತ್ತು.  ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮುಂಜಾನೆ ಪೊಲೀಸರು ಬಂದು ತನಿಖೆ ನಡೆಸಿದಾಗ ಮನೆಯ ಸುತ್ತ ಎರಡು ಜೀವಂತ ಬಾಂಬ್ ಪತ್ತೆಯಾಗಿತ್ತು.

ಸ್ಫೋಟ ನಡೆದ ಸಂದರ್ಭ, ನಾರಾಯಣ ಪ್ರಸಾದ್ ರವರ ಮನೆಯಲ್ಲಿ ಸುಮಾರು 3 ತಿಂಗಳ ಹಿಂದೆ ಕೆಲಸಕ್ಕೆ ಇದ್ದ ಬಾಬು ಯಾನೆ ಬಾಲು ಎಂಬಾತನನ್ನು ಕೆಲಸದಿಂದ  ತೆಗೆದು ಹಾಕಿದ ದ್ವೇಷದಿಂದ ಈ ಕೃತ್ಯವನ್ನು ಎಸಗಿರುವ ಬಗ್ಗೆ ಶಂಕೆಯಿದ್ದು ಪರಾರಿಯಾಗಿರುವ ಆರೋಪಿಯ ಪತ್ತೆಯ ಬಗ್ಗೆ ತಂಡ ರಚಿಸಲಾಗಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿಕಾಂತೇಗೌಡ ತಿಳಿಸಿದ್ದರು.

ಹಿಂದೆ ಕೆಲಸಕ್ಕೆ ಹಾಗೂ ಮನೆಯಲ್ಲಿ ವಾಸವಾಗಿದ್ದ ಬಾಬು ಯಾನೆ ಬಾಲನ್ ನನ್ನು ತೆಗೆದು ಹಾಕಿದ ಹಿನ್ನೆಲೆಯಲ್ಲಿ ಮನೆಯವರ ಕುರಿತು ದ್ವೇಷ ಮೂಡಿ ಈ ಕೃತ್ಯ ಎಸಗಿದನೇ ಎಂಬುದು ಇನ್ನಷ್ಟೇ ತನಿಖೆಯಿಂದ ತಿಳಿದುಬರಬೇಕಾಗಿದೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.