www.bantwalnews.com Report.
Editor: Harish Mambady
ಸ್ವಾತಂತ್ರ್ಯಪೂರ್ವದಲ್ಲಿ ಬ್ರಿಟಿಷರು ಮುಸ್ಲಿಂ, ಹಿಂದುಗಳನ್ನು ಮತ್ತು ಹಿಂದುಗಳಲ್ಲಿ ಜಾತಿ ತಾರತಮ್ಯ ಮಾಡಿದರು. ಸ್ವಾತಂತ್ರ್ಯಾನಂತರವೂ ಅದನ್ನೇ ಮುಂದುವರಿಸಲಾಯಿತು. ರಾಷ್ಟ್ರೀಯತೆಯನ್ನು, ಭಾರತೀಯ ಸಂಸ್ಕೃತಿಯನ್ನು ಅದರ ಮೌಲ್ಯಗಳನ್ನು ಪ್ರತಿಪಾದಿಸುವವರನ್ನು ಕಂಡರೆ ದ್ವೇಷ. ಅದಕ್ಕಾಗಿಯೇ ಕಲ್ಲಡ್ಕದಲ್ಲಿ ಬಿಸಿಯೂಟ ಕೊಡುಗೆ ನಿಲ್ಲಿಸಿದರು ಎಂದು ಹಿರಿಯ ಲೇಖಕ, ಸರಸ್ವತಿ ಸಮ್ಮಾನ್ ಪುರಸ್ಕೃತ, ಪದ್ಮಶ್ರೀ ಡಾ. ಎಸ್.ಎಲ್. ಭೈರಪ್ಪ ಹೇಳಿದರು.
ಶನಿವಾರ ಮಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಭೇಟಿ ನೀಡಿದ ಡಾ. ಭೈರಪ್ಪ, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರೊಂದಿಗೆ ವಿದ್ಯಾಸಂಸ್ಥೆ ಕುರಿತು ಮಾಹಿತಿ ಪಡೆದುಕೊಂಡರು. ಬಳಿಕ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ ಭೈರಪ್ಪ ಬಾಷಣದ ಮುಖ್ಯಾಂಶಗಳು ಇವು.
ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಸ್ವಾಗತಿಸಿದರು. ಶಾಲಾ ಸಂಚಾಲಕ ವಸಂತ ಮಾಧವ, ಸಹ ಸಂಚಾಲಕ ರಮೇಶ್, ವಿದ್ಯಾಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿ ವೇದಿಕೆಯಲ್ಲಿದ್ದರು. ಉಪನ್ಯಾಸಕ ಕೃಷ್ಣ ಪ್ರಸಾದ್ ಕಾಯರ್ ಕಟ್ಟೆ ನಿರೂಪಿಸಿ ವಂದಿಸಿದರು.