ಬಂಟ್ವಾಳ

ಒಂದು ತಿಂಗಳೊಳಗೆ 94ಸಿ ಹಕ್ಕುಪತ್ರ ವಿತರಣೆಗೆ ಕ್ರಮ: ಅಧಿಕಾರಿಗಳಿಗೆ ಸೂಚನೆ

ಒಂದು ತಿಂಗಳೊಳಗಾಗಿ 94ಸಿ ಯೋಜನೆಯಡಿ ಫಲಾನುಭವಿಗಳ ಅರ್ಜಿ ಯನ್ನು ವಿಲೇಮಾಡಿ ಹಕ್ಕುಪತ್ರ ವಿತರಿಸಲು ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಬಂಟ್ವಾಳ ಶಾಸಕ ಯು.ರಾಜೇಶ್ ನಾಯ್ಕ್ ತಿಳಿಸಿದ್ದಾರೆ.


ಬಂಟ್ವಾಳ ತಾಲೂಕು ಆಡಳಿತ ವತಿಯಿಂದ ಮೆಲ್ಲಾರ್ ನಲ್ಲಿ ಶನಿವಾರ ಮೆಲ್ಕಾರ್ ನಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಕ್ಕುಪತ್ರ ವಿತರಣೆಗಾಗಿ ಶಾಸಕರ ಸಹಿತ ಜನಪ್ರತಿನಿಧಿಗಳನ್ನು ಕಾಯಬೇಕಾಗಿಲ್ಲ,ಅಧಿಕಾರಿಗಳ ಮಟ್ಟದಲ್ಲೇ ವಿತರಿಸುವಂತೆ ಸಲಹೆ ನೀಡಿದರು. ಆರ್ಹ ಫಲಾನುಭವಿಗಳಿಗೆ ಸರಕಾರದ ಸವಲತ್ತು ಸಹಿತ ಹಕ್ಕುಪತ್ರ ಕೊಡುವುದಷ್ಟೆ ಮುಖ್ಯವಾಗಿದ್ದು ,ಅದನ್ನು ಯಾರು ವಿತರಿಸಬೇಕೆಂಬುದು ಇಲ್ಲಿ ಮುಖ್ಯವಲ್ಲ, ತಾನು ಶಾಸಕನಾದ ಬಳಿಕ ಸವಲತ್ತುಗಳನ್ನು ಫಲಾನುಭವಿಗಳಿಗೆ ವಿತರಿಸುವಲ್ಲಿ ಪಕ್ಷ ಭೇದ ಮಾಡಿಲ್ಲ, ಆರ್ಹರನ್ನು ಗುರುತಿಸಿ ಸರಕಾರದ ಸವಲತ್ತುನೀಡುವಂತೆ ಅಧಿಕಾರಿಗಳಿಗೆ ತಿಳಿಸಿದ್ದೇನೆ ಹೊರತು ಕೊಡದಂತೆ ಸೂಚಿಸಿಲ್ಲ ಎಂದು ಸ್ಪಷ್ಟ ಪಡಿಸಿದರು.

ಜಾಹೀರಾತು

ಜಿಲ್ಲೆಯನ್ನು ಕಾಡುತ್ತಿರುವ ಮರಳು ಸಮಸ್ಯೆಯನ್ನು ತಕ್ಷಣ ಬಗೆಹರಿಸಿ,ಕಡಿಮೆ ದರದಲ್ಲಿ ಸಿಗುವಂತಾಗಬೇಕು ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಯವರನ್ನು ಒತ್ತಾಯಿಸಿದ ಶಾಸಕರು ಕಾನೂನಾತ್ಮಕವಾಗಿ ,ಭೂ ಪರಿವರ್ತನೆ, 9/11 ಸಮಸ್ಯೆ, ಅಡಕೆ ಕೊಳೆರೋಗ ಬಾಧಿತರಿಗೆ ಇನ್ನು ಪರಿಹಾರ ಸಿಗದಿರುವುದು, ಸರಕಾರದ ಅನುದಾನ ತಾಲೂಕುವಾರು ವಿಂಗಡಣೆ,ಅತಿಥಿ ಶಿಕ್ಷಕರಿಗೆ ಸಿಗುವ ವೇತನದಲ್ಲಿ ಆಗುತ್ತಿರುವ ತಾಂತ್ರಿಕ ತೊಂದರೆಯನ್ನು ಇತ್ಯರ್ಥ ಪಡಿಸಲು ಕ್ರಮಕೈಗೊಳ್ಳುವಂತೆಯು ಜಿಲ್ಲಾಧಿಕಾರಿಯವರನ್ನು ಕೋರಿದರು.

ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಅಧ್ಯಕ್ಷತೆ ವಹಿಸಿದರು. ಬಂಟ್ವಾಳ ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ,ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ತಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮಿ ಎಂ ಬಂಗೇರ, ಜಿ .ಪಂ .ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್, ಎಂ.ಎಸ್.ಮಹಮ್ಮದ್, ತುಂಗಪ್ಪ ಬಂಗೇರ,ಮಮತಾ ಗಟ್ಟಿರವೀಂದ್ರ ಕಂಬಳಿ, ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸೇಲ್ವಮನಿ,ಮಂಗಳೂರು ಸಹಾಯಕ ಕಮಿಷನರ್ ರವಿಚಂದ್ರ ನಾಯಕ್,ಬಂಟ್ವಾಳ ಉಪವಿಭಾಗದ ಎಎಸ್ಪಿ ಹೃಷಿಕೇಶ್ ಮೊದಲಾದವರು ವೇದಿಕೆಯಲ್ಲಿದ್ದರು.

ಈ ಮೊದಲು ತಾಲೂಕು ಕಚೇರಿಯಲ್ಲಿ ಸ್ವೀಕರಿಸಲಾದ ಸೇರಿದಂತೆ ಒಟ್ಟು 72 ಅರ್ಜಿಗಳ ಪೈಕಿ 26 ಅರ್ಜಿಯನ್ನು ಸಭೆಯಲ್ಲಿ ವಿಲೇ ಮಾಡಲಾಯಿತು.ಹಾಗೆಯೇ ಉಳಿದ ಅರ್ಜಿಗಳನ್ನು ವಿಲೇಗೆ ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟ ವಿವಿಧ ಇಲಾಖೆಗೆ ಕಳುಹಿಸಲಾಯಿತು.ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಹಾಜರಿದ್ದರು. ತಹಶೀಲ್ದಾರ್ ಪುರಂದರ ಹೆಗ್ಡೆ ಸ್ವಾಗತಿಸಿದರು. ಶಿಕ್ಷಕ ರಾಮಚಂದ್ರ ರಾವ್ ನಿರೂಪಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts