ಬಂಟ್ವಾಳ

ಶತಮಾನೋತ್ಸವ ಶಾಲೆಯ ಭೋಜನಶಾಲೆಗೆ ಶಿಲಾನ್ಯಾಸ

ಶತಮಾನೋತ್ಸವ ಸಂಭ್ರಮದಲ್ಲಿರುವ ಚೆನ್ನೈತ್ತೋಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶತಮಾನೋತ್ಸವ ಯೋಜನೆಯ ಅಂಗವಾಗಿ ನಿರ್ಮಾಣಗೊಳ್ಳಲಿರುವ ಅನ್ನಪೂರ್ಣ ಭೋಜನ ಶಾಲೆಗೆ ಶಿಲಾನ್ಯಾಸ ನೆರವೇರಿತು.

ಜಾಹೀರಾತು

ಗಂಗಾಧರ ಕಕೃಣ್ಣಾಯ ಅವರ ಪೌರೋಹಿತ್ಯದಲ್ಲಿ ನಿವೃತ್ತ ಶಿಕ್ಷಕ ಸಂದರ ಶೆಟ್ಟಿ ಬಜೆ ಶಿಲಾನ್ಯಾಸ ನೆರವೇರಿಸಿದರು. ಶತಮಾನೋತ್ಸವ ಸಮಿತಿ ಅಧ್ಯಕ್ಷ ಹಂಝ ಎ.ಬಸ್ತಿಕೋಡಿ ಅಧ್ಯಕ್ಷತೆಯಲ್ಲಿ ಸಭಾ ಕಾರ್‍ಯಕ್ರಮ ನಡೆಯಿತು. ಡಿ.22ರಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ, ಗುರುವಂದನೆ, ಸಾಂಸ್ಕೃತಿಕ ವೈಭವ ಮತ್ತಿತರ ಕಾರ್‍ಯಕ್ರಮಗಳೊಂದಿಗೆ ಶತಮಾನೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವ ಬಗ್ಗೆ ಚರ್ಚಿಸಲಾಯಿತು. ಇದೇ ಸಂದರ್ಭ ಶತಮಾನೋತ್ಸವದ ಯಶಸ್ವಿಗಾಗಿ ವಿವಿಧ ಉಪಸಮಿತಿಗಳನ್ನು ರಚಿಸಲಾಯಿತು.

ಶಿಕ್ಷಣ ತರಬೇತುದಾರ ಗೋಪಾಲ ಅಂಚನ್ ಸಮಿತಿ ರಚನೆ ಮತ್ತು ಜವಾಬ್ಧಾರಿಗಳು ವಿಷಯದಲ್ಲಿ ಮಾಹಿತಿ ನೀಡಿದರು. ತಾಲೂಕು ಪಂಚಾಯತು ಸದಸ್ಯೆ ರತ್ನಾವತಿ ಶೆಟ್ಟಿ, ಗ್ರಾಮ ಪಂಚಾಯತು ಅಧ್ಯಕ್ಷ ಯತೀಶ್ ಶೆಟ್ಟಿ, ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಹರಿಣಾಕ್ಷಿ ರೈ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಕುಂಡೋಳಿಗುತ್ತು, ಶತಮಾನೋತ್ಸವ ಸಮಿತಿ ಸಂಚಾಲಕ ನಾರಾಯಣ ಶೆಟ್ಟಿ ಪರಾರಿ, ಪ್ರಧಾನ ಕಾರ್‍ಯದರ್ಶಿ ಡೇನಿಸ್ ಫೆರ್ನಾಂಡೀಸ್, ಕೋಶಾಧಿಕಾರಿ ಅನಂತ ಪೈ, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಪಪ್ರಮೀಳ, ಪ್ರಮುಖರಾದ ಶ್ರೀಧರ ಪೈ, ನವೀನ್‌ಚಂದ್ರ ಶೆಟ್ಟಿ, ಮೋಹನದಾಸ ಗಟ್ಟಿ, ಪುರುಷೋತ್ತಮ ಶೆಟ್ಟಿ ಬಾರೆಕ್ಕಿನಡೆ, ಚಂದ್ರಶೇಖರ ಶೆಟ್ಟಿ, ಕಮಲ್ ಶೆಟ್ಟಿ, ನಾಗರಾಜ ಶೆಟ್ಟಿ, ಪ್ರಕಾಶ್ ಗಟ್ಟಿ, ಗುಣವತಿ, ಶೌಕತ್ ಅಲಿ, ಮಾಧವ, ಸತೀಶ್ ಶೆಟ್ಟಿ, ಸತೀಶ್ ಅಂತರಗುತ್ತು, ಯಶೋಧರ ಸಪಲ್ಯ, ಮುಖ್ಯ ಶಿಕ್ಷಕಿ ಜಾನೆಟ್ ಮೊದಲಾದವರಿದ್ದರು. ಶಿಕ್ಷಕ ಸಂತೋಷ್ ಕುಮಾರ್ ಸ್ವಾಗತಿಸಿದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ