5 ಲಕ್ಷದವರೆಗಿನ ಕಾಮಗಾರಿಗಳ ತುಂಡು ಗುತ್ತಿಗೆ ಕರಾರು ಮುಂದುವರೆಸಲು ಮನವಿ

5 ಲಕ್ಷದವರೆಗಿನ ಕಾಮಗಾರಿಗಳ ತುಂಡು ಗುತ್ತಿಗೆ ಕರಾರು ಮುಂದುವರೆಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಿಗೆ ತಾಪಂ ಸದಸ್ಯ ಪ್ರಭಾಕರ ಪ್ರಭು ಮನವಿ ಮಾಡಿದ್ದಾರೆ.

ಜಾಹೀರಾತು

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖಾ ವತಿಯಿಂದ ಇಂಜಿನಿಯರಿಂಗ್ ವಿಭಾಗದಿಂದ ಅನುಷ್ಠಾನಗೊಳ್ಳುತ್ತಿರುವ ಶಾಸಕರ ಮತ್ತು ಲೋಕ ಸಬಾ ಸದಸ್ಯರ ಪ್ರದೇಶಾಭಿವೃದ್ದಿ ಅನುದಾನ ಸೇರಿದಂತೆ ಜಿಲಾ ಪಂಚಾಯತ್ , ತಾಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಗಳ ವಿವಿಧ ಯೋಜನೆಗಳಲ್ಲಿ ರೂ.೫ ಲಕ್ಷ ವರೆಗಿನ ಕಾಮಗಾರಿಗಳನ್ನು ತುಂಡು ಗುತ್ತಿಗೆ ಕರಾರಿನಡಿ ನಿರ್ವಹಿಸಲಾಗುತ್ತಿದ್ದು ಸರಕಾರದ ಯೋಜನೆಗಳ ಕಾಮಗಾರಿಗಳು ಶೀಘ್ರವಾಗಿ ಅನುಷ್ಠಾನಗೊಂಡು ಪ್ರಗತಿಗೊಳ್ಳಲು ಸಾಧ್ಯವಾಗುತ್ತದೆ. ಇಂತಹ ತುಂಡು ಗುತ್ತಿಗೆ ಕರಾರು ನಿರ್ವಹಣೆ ಲೋಕೋಪಯೋಗಿ ಇಲಾಖೆಯಲ್ಲಿ ಆಗುತ್ತಿಲ್ಲ. ಅಂದರೆ  ಜಿಲ್ಲಾಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಗಳಲ್ಲಿ ಮಾತ್ರ ಸಣ್ಣ ಸಣ್ಣ ಮೊತ್ತದ  ಕಾಮಗಾರಿಗಳು ಇರುವುದರಿಂದ ತುಂಡು ಗುತ್ತಿಗೆ ಕರಾರು ಯಶಸ್ವಿಯಾಗಿ ಪ್ರಗತಿ ಕಾಣಲು ಸಾದ್ಯವಾಗುತ್ತಿತ್ತು.  ಆದರೆ ಲೋಕೋಪಯೋಗಿ ಇಲಾಖೆಯಲ್ಲಿ ತುಂಡು ಗುತ್ತಿಗೆ ಕರಾರು ಇಲ್ಲದನ್ನು ಮನಗಂಡು ಸರಕಾರದ ಹಣಕಾಸು ಇಲಾಖೆ ಲೋಕೋಪಯೋಗಿ ಮತ್ತು ಪಂಚಾಯತ್ ರಾಜ್       ಇಂಜಿನಿಯರಿಂಗ್ ಇಲಾಖೆಗೆ ಎರಡಕ್ಕೂ ಒಂದೇ ರೀತಿಯಲ್ಲಿ ನೀಡಿದ ನಿರ್ದೇಶನದಂತೆ ಆದೇಶ ಹೊರಡಿಸಿ ತುಂಡು ಗುತ್ತಿಗೆ ಕರಾರು  ರದ್ದು ಪಡಿಸಿದೆ.  ರೂ. ೧೦ ಲಕ್ಷ ವರೆಗಿನ  ಕಾಮಗಾರಿಗಳಿಗೆ ಉಪವಿಭಾಗ ವ್ಯಾಪ್ತಿಯಲ್ಲಿಯೇ ಟೆಂಡರ್ ಗುತ್ತಿಗೆ  ಕರಾರು ಮಾಡಲು ಅವಕಾಶ ಮಾಡಿಕೊಡಲಾಗಿದೆ. ರಾಜ್ಯದ ಎಲ್ಲಾ  ಗ್ರಾಮ ಪಂಚಾಯತ್ ಗಳಲ್ಲಿ,  ತಾಲೂಕು ಪಂಚಾಯತ್ ಗಳಲ್ಲಿ,  ಜಿಲ್ಲಾ ಪಂಚಾಯತ್ ಗಳಲ್ಲಿ ತುಂಡು ಗುತ್ತಿಗೆ ಕರಾರು ಪತ್ರದ  ಆದಾರದಲ್ಲಿ ಕಾಮಗಾರಿಗಳು ಈಗಾಗಲೇ ಅನುಷ್ಠಾನಗೊಂಡಿವೆ. ಹಾಗೂ ಟೆಂಡರ್ ಪ್ರಕ್ರಿಯೆಗೆ ತುಂಬಾ ಕಾಲವಕಾಶ ಬೇಕಾಗಿರುವುದರಿಂದ ಕಾಮಗಾರಿ ಪ್ರಗತಿ ಕುಂಠಿತವಾಗಿದೆ. ಇದರಿಂದ ತ್ರಿಸ್ಥರದ ಪಂಚಾತಯತ್ ವ್ಯವಸ್ಥೆಗಳ ಅಭಿವೃದ್ದಿಗೆ ತೊಡಕಾಗಿರುತ್ತದೆ. ಆದುದರಿಂದ ಈ ಹಿಂದಿನಂತೆ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯಿಂದ ಅನುಷ್ಠಾನವಾಗುತ್ತಿರುವ ರೂ. ೫ ಲಕ್ಷ ವರೆಗಿನ  ಕಾಮಗಾರಿಗಳಿಗೆ ತುಂಡು ಗುತ್ತಿಗೆ ಕರಾರಿನಂತೆ ನಿರ್ವಹಿಸಲು ಪರಿಷ್ಕೃತ ಆದೇಶ ಹೊರಡಿಸಬೇಕು ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ.

 

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "5 ಲಕ್ಷದವರೆಗಿನ ಕಾಮಗಾರಿಗಳ ತುಂಡು ಗುತ್ತಿಗೆ ಕರಾರು ಮುಂದುವರೆಸಲು ಮನವಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*