ಡಿ. 1 ರಿಂದ ಆಸ್ತಿ ವ್ಯವಹಾರಗಳಿಗೆ ನಗರ ಪ್ರದೇಶದಲ್ಲಿ ಯುಪಿಒಆರ್ ಕಾರ್ಡ್ ಕಡ್ಡಾಯ

ಡಿಸೆಂಬರ್ ಒಂದನೇ ತಾರೀಕಿನಿಂದ ಎಲ್ಲ ರೀತಿಯ ಆಸ್ತಿಯ ವ್ಯವಹಾರಗಳಿಗೆ ನಗರ ಪ್ರದೇಶ ವ್ಯಾಪ್ತಿಯಲ್ಲಿ ಯುಪಿಒಆರ್ ಕಾರ್ಡ್ ಕಡ್ಡಾಯ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳಿದರು.

ಜಾಹೀರಾತು

ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರ ಆಸ್ತಿ ಮಾಲೀಕತ್ವ ಯೋಜನೆ ಪ್ರಮಾಣ ಪತ್ರಗಳು ನಗರ ಪ್ರದೇಶದ ಎಲ್ಲ ವ್ಯವಹಾರಗಳಿಗೆ ಕಡ್ಡಾಯವಾಗಿದ್ದು, ಕಂದಾಯ ಇಲಾಖೆ ಕಾರ್ಡ್ ನೀಡಿಕೆಗೆ ಸಂಬಂಧ ಸೂಕ್ತ ವ್ಯವಸ್ಥೆಗಳೊಂದಿಗೆ ಸನ್ನದ್ದವಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಯುಪಿಒಆರ್ ಕಾರ್ಡ್‍ನಿಂದಾಗಿ ಅಕ್ರಮಗಳ ತಡೆ, ಪಾರದರ್ಶಕ ಮತ್ತು ಆನ್‍ಲೈನ್ ನಲ್ಲಿ ಆಸ್ತಿಗೆ ಸಂಬಂಧಿಸಿದ ಮಾಹಿತಿ ಲಭ್ಯವಾಗಲಿದೆ. ಸಮೀಕ್ಷೆಗೆ ಸಂಬಂಧಿಸಿದಂತೆ 12 ಹೊಸ ಸರ್ವೇಯರ್‍ಗಳನ್ನೊಳಗೊಂಡಂತೆ ಒಟ್ಟು 20 ಜನರಿದ್ದು, ಇನ್ನೂ ಐದು ಸರ್ವೇಯರ್‍ಗಾಗಿ ಬೇಡಿಕೆ ಮಂಡಿಸಲಾಗಿದೆ. ಈ ಸಂಬಂಧ ಯಾವುದೇ ಸವಾಲು ಹಾಗೂ ಸಮಸ್ಯೆಗಳನ್ನೆದುರಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕಾನ್ಪಿಲ್ಕಿಟ್ ರೆಸುಲ್ಯೂಷನ್ ಸಮಿತಿಯನ್ನು ವಾರಕ್ಕೆ ಎರಡು ಸಾರಿ ಕರೆಯಲಾಗುವುದು. ಯುಪಿಆರ್‍ಕಾರ್ಡ್‍ಗೆ ಸಂಬಂಧಿಸಿದ ಎಲ್ಲ ವಿಷಯಗಳ ಕುರಿತು ಚರ್ಚಿಸಲಾಗುವುದು ಎಂದರು.

upormagaluru.com ಹೆಲ್ಪ್‍ಲೈನ್ ಸಹ ಲಭ್ಯವಿದ್ದು, ಮನೆಯಿಂದಲೇ ಮಾಹಿತಿ ಅಪ್‍ಲೋಡ್ ಮಾಡಲು ಅವಕಾಶ ಕಲ್ಪಿಸಲಾಗುವುದು ಎಂದರು. ಈಗಾಗಲೇ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ 32 ಕಂದಾಯ ಗ್ರಾಮಗಳನ್ನು 6 ವಲಯಗಳನ್ನಾಗಿ ಮತ್ತು 30 ಸೆಕ್ಟರ್‍ಗಳಾಗಿ ವಿಂಗಡಿಸಿ ಈ ವ್ಯಾಪ್ತಿಯೊಳಗಿನ ಸುಮಾರು 1,50,635 ಆಸ್ತಿಗಳ ಅಳತೆ ಕಾರ್ಯವನ್ನು ಪೂರ್ಣ ಗೊಳಿಸಲಾಗಿದೆ. 77306 ಆಸ್ತಿಗಳ ದಾಖಲೆಗಳನ್ನು ಸಂಗ್ರಹಿಸಲಾಗಿದೆ. 31883 ಕರಡು ಪಿ ಆರ್ ಕಾರ್ಡ್‍ಗಳನ್ನು ತಯಾರಿಸಲಾಗಿದೆ. 26393 ಕರಡು ಪಿ ಆರ್ ಕಾರ್ಡ್‍ಗಳನ್ನು ವಿತರಿಸಲಾಗಿದೆ. 23569 ಅಂತಿಮವಾಗಿ ಪಿ ಆರ್ ಕಾರ್ಡ್‍ಗಳನ್ನು ಅನುಮೋದಿಸಲಾಗಿದೆ. ಅಂತಿಮವಾಗಿ 18491 ಪಿ ಆರ್ ಕಾರ್ಡ್‍ಗಳನ್ನು ವಿತರಿಸಲಾಗಿದೆ. ಕರಡು ಪಿ ಆರ್ ಕಾರ್ಡ್ ತಯಾರಿಸಿ ಆಸ್ತಿದಾರರಿಗೆ ಜಾರಿಯಾದ ದಿನಾಂಕದಿಂದ 30 ದಿನಗಳ ಅವಧಿಯ ಒಳಗೆ ಆಕ್ಷೇಪಣೆ ಸಲ್ಲಿಸಲು ನಿಯಮಾನುಸಾರ ಅವಕಾಶವಿದೆ ಎಂದರು. ಭೂದಾಖಲೆಗಳ ಉಪನಿರ್ದೇಶಕರಾದ ಕುಸುಮಾಧರ, ಅಪರ ಜಿಲ್ಲಾಧಿಕಾರಿ ಕುಮಾರ್ ಪತ್ರಿಕಾಗೋಷ್ಠಿಯಲ್ಲಿದ್ದರು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಡಿ. 1 ರಿಂದ ಆಸ್ತಿ ವ್ಯವಹಾರಗಳಿಗೆ ನಗರ ಪ್ರದೇಶದಲ್ಲಿ ಯುಪಿಒಆರ್ ಕಾರ್ಡ್ ಕಡ್ಡಾಯ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*