ಬಂಟ್ವಾಳ

ರೋಟರಿಯಿಂದ ಮಗುಸ್ನೇಹಿ ದೀಪಾವಳಿ ಸಂಕಲ್ಪ

ಹಬ್ಬಗಳು ಎಂದರೆ ಮಕ್ಕಳಿಗೆ ಸಂತೋಷ ಗೊಳಿಸುವುದು .ಶ್ರಮದ ಹಣದಲ್ಲಿ ಮಕ್ಕಳಿಗೆ ಬೇಕಾದ ಪಟಾಕಿ ಸಿಡಿಸಿ ಅವರ ಬಾಳು ಬೆಳಗಿಸುವ ಬದಲು ನಂದಿಸುವ ಘಟನೆ ನಡೆಯುತ್ತದೆ. ಪರಿಸರ, ಗಾಳಿ, ಮಣ್ಣು, ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಪಟಾಕಿ ಸಿಡಿಸುವ ಬದಲು ಹಣತೆಯ ಮೂಲಕ ದೀಪಗಳ ಹಬ್ಬ ದೀಪಾವಳಿ ಮಕ್ಕಳ ಬದುಕನ್ನು ಬೆಳಗಲಿ ಎಂದು ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ಅಧ್ಯಕ್ಷ ರಾದ ಉಮೇಶ್ ನಿರ್ಮಲ್ ಹೇಳಿದರು.

ಜಾಹೀರಾತು

ರೋಟರಿ ಕ್ಲಬ್ ಬಂಟ್ವಾಳ ಟೌನ್ ವತಿಯಿಂದ  ಮಂಗಳವಾರ  ನಡೆದ  ದೀಪಾವಳಿ ಆಚರಣೆ ಮಗುಸ್ನೇಹಿ ಸಂಕಲ್ಪ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ರೋಟರಿ ವಲಯ 4ರ ಸೇನಾನಿ ಸಂಜೀವ ಪೂಜಾರಿ ಗುರುಕೃಪ, ಕಾರ್ಯದರ್ಶಿ ನಾರಾಯಣ ಹೆಗ್ಡೆ,ಉಪಸ್ತಿತರಿದ್ದರು.  ಆನ್ಸ್ ಕ್ಲಬ್ ಅಧ್ಯಕ್ಷರಾದ ಆಶಾಮಣಿ ಡಿ ರೈ ನೇತೃತ್ವದಲ್ಲಿ ಪದಾಧಿಕಾರಿಗಳು ಹಣತೆ ಬೆಳಗಿಸಿ ದೀಪಾವಳಿ ಹಬ್ಬದ ಸಂಭ್ರಮ ಆಚರಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts