ಬಂಟ್ವಾಳ

ಭಗವದ್ಭಕ್ತರ ಕಣ್ಮನ ಸೆಳೆದ ವಿಶ್ವರೂಪ ದರ್ಶನ

ವಟಪುರ ಕ್ಷೇತ್ರ ಬಂಟ್ವಾಳ ಶ್ರೀ ತಿರುಮಲ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಭಾನುವಾರ ಮುಂಜಾನೆ ನಡೆದ ದೇವರ ವಿಶ್ವರೂಪ ದರ್ಶನ ಸೇವೆ ಭಗವದ್ಬಕ್ತರ ಕಣ್ಮನ ಸೆಳೆಯಿತು.

ಮುಂಜಾನೆಯ ಹಕ್ಕಿಗಳ ಚಿಲಿಪಿಲಿ ಕಲರವ, ಜೀವ ನದಿ ನೇತ್ರಾವತಿ ಜುಳು ಜುಳು ನಿನಾದದೊಂದಿಗೆ ಭಕ್ತರ ಸಾಲು ಹಣತೆಗಳಿಂದ ಬೆಳಗಿಸಲ್ಪಟ್ಟ ವಿಶ್ವರೂಪ ದರ್ಶನ ಬೆಳಕಿನ ಲೋಕವನ್ನೇ ಸೃಷ್ಟಿಸಿತು.

ಜಾಹೀರಾತು

ಜಾಹೀರಾತು

ಮುಂಜಾನೆಯ ಬ್ರಾಹ್ಮೀ ಮುಹೂರ್ತದಲ್ಲಿ ಭಜಕರು ದೇವಳದ ಸುತ್ತ ಅಳವಡಿಸಿದ ಹಣತೆಯನ್ನು ಬೆಳಗಿಸಿದರು. ದೇವಳದ ಒಳಾಂಗಣವನ್ನು ಹಾಗೂ ಮಲ್ಲಿಗೆ ಪ್ರಿಯ ಶ್ರೀ ವೆಂಕಟರಮಣ ದೇವರನ್ನು ಸಿಂಗರಿಸಿದ್ದರೆ ವೀಕ್ಷಿಸಲು ಊರಪರವೂರಿನ ಭಕ್ತರು ಮತ್ತು ಮಕ್ಕಳು ಆಗಮಿಸಿದ್ದರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮತ್ತು ಮಾಜಿ ಸಚಿವ ಬಿ.ರಮಾನಾಥ ರೈ ಕ್ಷೇತ್ರಕ್ಕೆ ಆಗಮಿಸಿ ದೇವರ ದರ್ಶನ ಪಡೆದರು.

ದೇವಳದ ಹೊರಾಂಗಣದಲ್ಲಿ ಶಂಖ, ಚಕ್ರ, ಗದಾ, ಪದ್ಮ, ಕೊಡಲಿ, ತಾವರೆ, ತ್ರಿಶೂಲ ಮೊದಲಾದ ಚಿತ್ರ ಚಿತ್ತಾರಗಳು ಹಣತೆಗಳಿಂದ ರೂಪ ಪಡೆದವು. ಶಬರಿಮಲೆಯ ಚಿತ್ರ ಗಮನ ಸೆಳೆಯಿತು. ದೇವಳದ ಆಡಳಿತ ಮೊಕ್ತೇಸರರು, ಮೊಕ್ತೇಸರರು ಸೇರಿದಂತೆ ಗಣ್ಯರು ಭಾಗವಹಿಸಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ