ಬಂಟ್ವಾಳ

ಬಂಟ್ವಾಳದಲ್ಲಿ ಪಕ್ಷ ಸಂಘಟನೆಯಲ್ಲಿ ಸಂಚಲನ ಮೂಡಿಸಿದ್ದ ಅನಂತ್: ಜಿ.ಆನಂದ

ಕೇಂದ್ರ ಸಚಿವ ಅನಂತಕುಮಾರ್ ಹಿಂದೆ 1983ರಲ್ಲಿ ವಿದ್ಯಾರ್ಥಿ ಪರಿಷತ್ ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆಯಾದ ಸಂದರ್ಭ ಬಂಟ್ವಾಳಕ್ಕೆ ಆಗಮಿಸಿದಾಗ ಸಂಘಟನೆಯನ್ನು ಬಲಪಡಿಸುವುದರ ಮೂಲಕ ಸಂಚಲನ ಮೂಡಿಸಿದ್ದರು ಎಂದು ಅಂದು ಅನಂತ್ ಒಡನಾಡಿಯಾಗಿದ್ದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಿ.ಆನಂದ ಹೇಳಿದರು.

ಜಾಹೀರಾತು

ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಕ್ಷೇತ್ರ ಸಮಿತಿ ವತಿಯಿಂದ ನಡೆದ ಅನಂತ್ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಅವರು, ಇವರ ಅಕಾಲಿಕ ಮರಣ ಪಕ್ಷಕ್ಕೆ ತುಂಬಲಾರದ ನಷ್ಟ ವಾಗಿದೆ. ನನಗೆ ಅತೀವ ನೋವುಂಟು ಮಾಡಿದೆ  1986 ರಲ್ಲಿ  ರಾಜ್ಯ ಯುವ ಮೋರ್ಚಾ ಅಧ್ಯಕ್ಷರಾಗಿ ಆಯ್ಕೆಯಾದಗಲೂ ಬಂಟ್ವಾಳಕ್ಕೆ ಆಗಮಿಸಿ ಬಂಟ್ವಾಳ ಕ್ಷೇತ್ರದ್ಯಾದಂತ ಸಂಚರಿಸಿದ್ದರು. ಬಂಟ್ವಾಳಕ್ಕೆ ಪ್ರತಿ ಬಾರಿ ಬಂದಾಗಲೂ ತನ್ನನ್ನು ಮಾತನಾಡಿಸದೆ ಹೋಗುತ್ತಿರಲಿಲ್ಲ ಎಂದು ಜ್ಞಾಪಿಸಿಕೊಂಡರು.

ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ರಾಮದಾಸ ಬಂಟ್ವಾಳ ನುಡಿನಮನ ಸಲ್ಲಿಸಿದರು.

ಜಿಲ್ಲಾ ಬಿ.ಜೆ.ಪಿ ಕಾರ್ಯದರ್ಶಿ ಸುಗುಣ ಕಿಣಿ, ಕ್ಷೇತ್ರದ ಪ್ರ.ಕಾರ್ಯದರ್ಶಿ ಮೋನಪ್ಪ ದೇವಸ್ಯ, ಗೋವಿಂದ ಪ್ರಭುಜಿಲ್ಲಾ ಪಂ.ಸದಸ್ಯೆ ಕಮಲಾಕ್ಷಿ ಪೂಜಾರಿ, ವಿಜಯ ರೈ, ಶ್ರೀಕಾಂತ್ ಶೆಟ್ಟಿ, ಗಣೇಶ್ ರೈ, ರಮಾನಾಥ ರೈ, ಸೀತಾರಾಮ ಪೂಜಾರಿ, ರವೀಂದ್ರ ಕಂಬಳಿ, ವಜ್ರನಾಥ ಕಲ್ಲಡ್ಕ, ತನಿಯಪ್ಪ ಗೌಡ, ಪುರುಷೋತ್ತಮ ಶೆಟ್ಟಿ, ಸಂತೋಷ್ ಕುಮಾರ್,ವಿಠಲ್ ನಾಯ್ಕ, ಗೋಪಾಲ್ ಸುವರ್ಣ, ಪ್ರಮೋದ್ ಕುಮಾರ್, ಗುರುದತ್ ನಾಯಕ್, ವಿರೇಂದ್ರ ಕುಲಾಲ್, ಪಂ.ಸಮಿತಿಯ ಅಧ್ಯಕ್ಷ ಕಾರ್ಯದರ್ಶಿಗಳು, ಪುರಸಭಾ ಸದಸ್ಯರುಗಳು ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಾ.30ರಂದು ಪದ್ಯಾಣಕ್ಕೆ ಏಕಾದಶ ತೀರ್ಥಗಳ ಭವ್ಯ ಮೆರವಣಿಗೆ:

| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…

19 hours ago

ಯಕ್ಷಗಾನದ ದಶಾವತಾರಿ ಸೂರಿಕುಮೇರು ಗೋವಿಂದ ಭಟ್ ಇನ್ನಿಲ್ಲ

ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…

3 days ago