ಕ್ಯಾಂಟೀನ್ ಗೋಡೆಯಿಂದ ಪಾರ್ಕಿಂಗ್ ಗೆ ಸಮಸ್ಯೆ ಇಲ್ಲ: ರೈ

ಬಿ.ಸಿ.ರೋಡ್ ಮಿನಿ ವಿಧಾನಸೌಧದ ಪಕ್ಕದಲ್ಲಿ ಇಂದಿರಾ ಕ್ಯಾಂಟೀನ್ ಸುತ್ತ ಆವರಣಗೋಡೆ ನಿರ್ಮಿಸಿದರೆ ಪಾರ್ಕಿಂಗ್ ಗೆ ಯಾವುದೇ ತೊಂದರೆ, ಸಮಸ್ಯೆಗಳು ಉಂಟಾಗುವುದಿಲ್ಲ, ಬಡವರ ಕ್ಯಾಂಟೀನ್ ನಿರ್ಮಾಣವನ್ನು ವಿರೋಧಿಸುವವರು ಇದಕ್ಕೆ ಆಕ್ಷೇಪ ಸಲ್ಲಿಸುತ್ತಿದ್ದಾರೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಪ್ರತಿಕ್ರಿಯಿಸಿದ್ದಾರೆ.

ಜಾಹೀರಾತು

ಕ್ಯಾಂಟೀನ್ ಆವರಣ ಗೋಡೆ ಕುರಿತು ಎದ್ದಿರುವ ಆಕ್ಷೇಪದ ಹಿನ್ನೆಲೆಯಲ್ಲಿ ಪತ್ರಿಕೆಗೆ ಪ್ರತಿಕ್ರಿಯಿಸಿರುವ ಅವರು, ಬಡವರಿಗೆ ಸುಲಭ ದರದಲ್ಲಿ ಊಟ ಉಪಾಹಾರ ಒದಗಿಸಲು ಇಂದಿರಾ ಕ್ಯಾಂಟೀನ್ ಸಹಕಾರಿ. ಅದಕ್ಕೆ ಆವರಣ ಗೋಡೆ ನಿರ್ಮಿಸಿದರೆ ಪಾರ್ಕಿಂಗ್ ಗೆ ಅಡ್ಡಿಯಾಗುವುದಿಲ್ಲ. ಅದರ ಎದುರಿನಲ್ಲೇ ಅತಿಕ್ರಮಿತ ಜಾಗಗಳಿವೆ. ಅವುಗಳನ್ನು ತೆರವುಗೊಳಿಸಿದರೆ ಅಲ್ಲೇ ಪಾರ್ಕಿಂಗ್ ಮಾಡಲು ಸಾಧ್ಯವಿದೆ. ಅವುಗಳನ್ನು ತೆರವುಗೊಳಿಸಲು ಒತ್ತಾಯಿಸದೆ, ಬಡವರ ಕ್ಯಾಂಟೀನ್  ಆವರಣ ಗೋಡೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ ಎಂದು ಅವರು ಹೇಳಿದರು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಕ್ಯಾಂಟೀನ್ ಗೋಡೆಯಿಂದ ಪಾರ್ಕಿಂಗ್ ಗೆ ಸಮಸ್ಯೆ ಇಲ್ಲ: ರೈ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*