ಬಂಟ್ವಾಳ

ಕ್ಯಾಂಟೀನ್ ಗೋಡೆಯಿಂದ ಪಾರ್ಕಿಂಗ್ ಗೆ ಸಮಸ್ಯೆ ಇಲ್ಲ: ರೈ

ಬಿ.ಸಿ.ರೋಡ್ ಮಿನಿ ವಿಧಾನಸೌಧದ ಪಕ್ಕದಲ್ಲಿ ಇಂದಿರಾ ಕ್ಯಾಂಟೀನ್ ಸುತ್ತ ಆವರಣಗೋಡೆ ನಿರ್ಮಿಸಿದರೆ ಪಾರ್ಕಿಂಗ್ ಗೆ ಯಾವುದೇ ತೊಂದರೆ, ಸಮಸ್ಯೆಗಳು ಉಂಟಾಗುವುದಿಲ್ಲ, ಬಡವರ ಕ್ಯಾಂಟೀನ್ ನಿರ್ಮಾಣವನ್ನು ವಿರೋಧಿಸುವವರು ಇದಕ್ಕೆ ಆಕ್ಷೇಪ ಸಲ್ಲಿಸುತ್ತಿದ್ದಾರೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಪ್ರತಿಕ್ರಿಯಿಸಿದ್ದಾರೆ.

ಜಾಹೀರಾತು

ಕ್ಯಾಂಟೀನ್ ಆವರಣ ಗೋಡೆ ಕುರಿತು ಎದ್ದಿರುವ ಆಕ್ಷೇಪದ ಹಿನ್ನೆಲೆಯಲ್ಲಿ ಪತ್ರಿಕೆಗೆ ಪ್ರತಿಕ್ರಿಯಿಸಿರುವ ಅವರು, ಬಡವರಿಗೆ ಸುಲಭ ದರದಲ್ಲಿ ಊಟ ಉಪಾಹಾರ ಒದಗಿಸಲು ಇಂದಿರಾ ಕ್ಯಾಂಟೀನ್ ಸಹಕಾರಿ. ಅದಕ್ಕೆ ಆವರಣ ಗೋಡೆ ನಿರ್ಮಿಸಿದರೆ ಪಾರ್ಕಿಂಗ್ ಗೆ ಅಡ್ಡಿಯಾಗುವುದಿಲ್ಲ. ಅದರ ಎದುರಿನಲ್ಲೇ ಅತಿಕ್ರಮಿತ ಜಾಗಗಳಿವೆ. ಅವುಗಳನ್ನು ತೆರವುಗೊಳಿಸಿದರೆ ಅಲ್ಲೇ ಪಾರ್ಕಿಂಗ್ ಮಾಡಲು ಸಾಧ್ಯವಿದೆ. ಅವುಗಳನ್ನು ತೆರವುಗೊಳಿಸಲು ಒತ್ತಾಯಿಸದೆ, ಬಡವರ ಕ್ಯಾಂಟೀನ್  ಆವರಣ ಗೋಡೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ ಎಂದು ಅವರು ಹೇಳಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.