ಬಂಟ್ವಾಳ

ಕಾರ್ಪೋರೇಟ್ ಜಗತ್ತಿಗೆ ಸಹಾಯ ಮಾಡಲು ಬ್ಯಾಂಕ್ ವಿಲೀನ: ರೈ ಆರೋಪ

ಲಾಭದಲ್ಲಿರುವ ವಿಜಯಾ ಬ್ಯಾಂಕ್ ಅನ್ನು ನಷ್ಟದಲ್ಲಿರುವ ಬ್ಯಾಂಕ್ ಗಳ ಜೊತೆ ವಿಲೀನ ಮಾಡುವುದರ ಹಿಂದೆ ಕಾರ್ಪೊರೇಟ್ ಜಗತ್ತಿಗೆ ಸಹಾಯ ಮಾಡುವ ಉದ್ದೇಶ ಅಡಗಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಆರೋಪಿಸಿದ್ದಾರೆ.

ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಶುಕ್ರವಾರ ಬಿ.ಸಿ.ರೋಡ್ ವಿಜಯಾ ಬ್ಯಾಂಕ್ ಮುಂಭಾಗ  ಬ್ಯಾಂಕು ವಿಲೀನ ಪ್ರಕ್ರಿಯೆ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ಅವರ ಸೂಚನೆ ಮೇರೆಗೆ ಈ ಎಲ್ಲ ಪ್ರಕ್ರಿಯೆಗಳು ನಡೆಯುತ್ತಿದೆ, ಬಡವರಿಗೆ ಸಹಾಯವಾಗುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಬ್ಯಾಂಕ್ ಹೆಸರನ್ನೇ ಅಳಿಸಿಹಾಕುವ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿದರು.

ಜಾಹೀರಾತು

ಸೋಲಲಿ ಗೆಲ್ಲಲಿ ಕೆಲಸ ನಿಲ್ಲುವುದಿಲ್ಲ:

ನಾನು ಸೋಲಲಿ, ಗೆಲ್ಲಲಿ ನನ್ನ ಕಾಲದಲ್ಲಿ ಆರಂಭಗೊಂಡ ಅಭಿವೃದ್ಧಿ ಕಾರ್ಯ ನಿಲ್ಲಲು ಬಿಡುವುದಿಲ್ಲ. ಈಗಿನ ಶಾಸಕರ ಎಲ್ಲ ಕಾರ್ಯಗಳಿಗೂ ನಾನು ಅಡ್ಡಗಾಲು ಹಾಕುತ್ತಿದ್ದೇನೆಂದು ಕೆಲವರು ಆರೋಪಿಸುತ್ತಿದ್ದಾರೆ. ಆದರೆ ಖಾಸಗಿ ಬಸ್ ನಿಲ್ದಾಣ, ಪಡೀಲ್ ಜಿಲ್ಲಾ ಸಂಕೀರ್ಣ, ಕುಡಿಯುವ ನೀರು ಯೋಜನೆ ಅನುಷ್ಠಾನ, ಬೆಂಜನಪದವು ಕ್ರೀಡಾಂಗಣ ಸಹಿತ ತಾನು ಆರಂಭಿಸಿದ ಎಲ್ಲ ಕಾರ್ಯಗಳೂ ಸಂಪನ್ನಗೊಳ್ಳಬಾರದು ಎಂದು ಅಡ್ಡಗಾಲು ಹಾಕುವುದು ಯಾರು ಎಂದು ಪ್ರಶ್ನಿಸಿದ ರೈ, ಇಂದಿರಾ ಕ್ಯಾಂಟೀನ್ ನಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರನ್ನು ಬೈದು, ಕಾಂಪೌಂಡ್ ಒಡೆಯಲು ಹೋಗುವ ಕೆಲಸವನ್ನು ನಾವು ಮಾಡುತ್ತಿಲ್ಲ ಎಂದು ಹೇಳಿದರು.

ಈ ಸಂದರ್ಭ ಜಿಲ್ಲಾ ಪಂಚಾಯತ್ ಸದಸ್ಯರಾದ ಎಂ.ಎಸ್.ಮಹಮ್ಮದ್, ತುಂಬೆ ಚಂದ್ರಪ್ರಕಾಶ್ ಶೆಟ್ಟಿ, ಮಂಜುಳಾ ಮಾಧವ ಮಾವೆ, ಬಿ.ಪದ್ಮಶೇಖರ ಜೈನ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ತಾಪಂ ಉಪಾಧ್ಯಕ್ಷ ಅಬ್ಬಾಸ್ ಆಲಿ, ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ಪಕ್ಷ ಪ್ರಮುಖರಾದ ಮಾಯಿಲಪ್ಪ ಸಾಲಿಯಾನ್, ಸಂಜೀವ ಪೂಜಾರಿ, ಪ್ರಶಾಂತ್ ಕುಲಾಲ್, ಮಾಧವ  ಮಾವೆ, ಲುಕ್ಮಾನ್, ಮುಹಮ್ಮದ್ ನಂದರಬೆಟ್ಟು, ಗಂಗಾಧರ ಪೂಜಾರಿ, ಪರಮೇಶ್ವರ ಮೂಲ್ಯ, ರಾಮಕೃಷ್ಣ ಆಳ್ವ, ಚಿತ್ತರಂಜನ್ ಶೆಟ್ಟಿ ಬೊಂಡಾಲ, ಧನಲಕ್ಷ್ಮೀ ಬಂಗೇರ, ಮುಹಮ್ಮದ್ ನಂದಾವರ, ಸದಾಶಿವ ಬಂಗೇರ, ಸಿದ್ದೀಕ್ ಗುಡ್ಡೆಯಂಗಡಿ, ಹಸೈನಾರ್, ಸಂಪತ್ ಕುಮಾರ್ ಶೆಟ್ಟಿ, ಶರೀಫ್, ಶಾಂತಿಯಂಗಡಿ, ವಾಸು ಪೂಜಾರಿ, ವಿಜಯ್ ಬ್ಯಾಂಕ್ ನ ಶೇಖರ ಮೂಲ್ಯ ಉಪಸ್ಥಿತರಿದ್ದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.