ಬೇಡಿಕೆ ಈಡೇರಿಕೆ ಆಗ್ರಹಿಸಿ ಬೀಡಿ ಕಾರ್ಮಿಕರಿಂದ ಹಕ್ಕೊತ್ತಾಯ

ಕನಿಷ್ಠ ವೇತನ ಹಾಗೂ ತುಟ್ಟಿಭತ್ತೆ ಅತೀ ಶೀಘ್ರ ಪಾಲಿಗೆ ಆಗ್ರಹಿಸಿ ಬೀಡಿ ಕಾರ್ಮಿಕರಿಂದ ಹಕ್ಕೊತ್ತಾಯ ಎಐಟಿಯುಸಿ ಮತ್ತು ಸಿಐಟಿಯು ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಬೀಡಿ ಕಚೇರಿ ಎದುರು ನಡೆಯಿತು.

ಜಾಹೀರಾತು

ಕರ್ನಾಟಕ ರಾಜ್ಯ ಸರಕಾರ  ಕನಿಷ್ಠ ವೇತನ ಕಾಯ್ದೆ  ಸೆಕ್ಷನ್ 5(1)(ಎ) ಅಡಿಯಲ್ಲಿ ರಚಿಸಿಲಾದ ತ್ರಿಪಕ್ಷೀಯ ಸಮಿತಿ ಸಭೆಯಲ್ಲಿ ಸರ್ವಾನುಮತದಿಂದ ಘೋಷಿಸಲ್ಪಟ್ಟ ಕನಿಷ್ಠ  ಕೂಲಿ ಸಾವಿರ ಬೀಡಿಗೆ ರೂ.210 ನ್ನು ಬೀಡಿ ಮಾಲಕರು 2018 ಎಪ್ರಿಲ್ 1 ರಿಂದ  ಬೀಡಿ ಕಾರ್ಮಿಕರಿಗೆ ನೀಡಬೇಕಿತ್ತು. ಆದರೆ ಮಾಲಿಕರು 8 ತಿಂಗಳು ಕಳೆದರೂ ತಾವು ಸ್ವತಃ ಸಹಿ ಮಾಡಿ ಒಪ್ಪಿರುವ ಈ ಕೂಲಿಯನ್ನು ನೀಡಲು ಮೀನ ಮೇಷ ಎಣಿಸುತ್ತಿರುವುದು ಖಂಡನೀಯ.ಈ ಹಿನ್ನೆಲೆಯಲ್ಲಿ ಬೀಡಿ ಮಾಲಿಕರು ಕಾರ್ಮಿಕರ ನೈಜ ಸ್ಥಿತಿಯನ್ನು ಅರ್ಥೈಸಿಕೊಂಡು ಕೂಡಲೇ ಕನಿಷ್ಠ  ವೇತನ ನೀಡಬೇಕು ಎಂದು ಎಐಟಿಯುಸಿ ಜಿಲ್ಲಾ ಉಪಾಧ್ಯಕ್ಷ ಬಿ.ಶೇಖರ್ ಈ ಸಂದರ್ಭ ಒತ್ತಾಯಿಸಿದರು.

ಕನಿಷ್ಠ ವೇತನ ಜ್ಯಾರಿಗಾಗಿ ಜಿಲ್ಲೆಯ ಕಾರ್ಮಿಕ ಸಂಘಟನೆಗಳು ಹಲವಾರು ಹಂತದ ಹೋರಾಟಗಳನ್ನು ಮಾಡಿದೆ. ವಾಹನ ಜಾಥಾ, ಮುಷ್ಕರ, ಧರಣಿ ಸತ್ಯಾಗ್ರಹ ನಡೆಸಿ ಮಾಲಕರನ್ನು ಒತ್ತಾಯಿಸಲಾಗಿದೆ. ಆದರೂ ಮಾಲಿಕರು ತನ್ನ ಹಠಮಾರಿ ಧೋರಣೆ ಕೈಬಿಡದೇ ಕಾರ್ಮಿಕರನ್ನು ಕಡೆಗಣಿಸುತ್ತಿರುದನ್ನು ಮನಗಂಡು ಎಲ್ಲಾ ಬೀಡಿ ಕಂಪೆನಿಗಳ ಮುಂದೆ ಈ ಹಕ್ಕೊತ್ತಾಯ ಚಳವಳಿ ನಿರಂತರವಾಗಿ ನಡೆಯಲಿದೆ ಎಂದರು.

ಕನಿಷ್ಠ ವೇತನ ಜ್ಯಾರಿಗೊಳಿಸಲು ಉಪ ಕಾರ್ಮಿಕ ಆಯುಕ್ತರ ಮಧ್ಯಸ್ಥಿಕೆಯಲ್ಲಿ ನಡೆದ ಮೂರೂ ಸಭೆಗಳಲ್ಲೂ ಮಾಲಿಕರು ವಿವಿಧ ರೀತಿಯ ನೆಪವೊಡ್ಡಿ ಕಾಲಾಹರಣ ಮಾಡುತ್ತಿರುವುದು ಬೀಡಿ ಮಾಲಿಕರ ಕಾರ್ಮಿಕ ವಿರೋಧಿ ಧೋರಣೆಯೇ ಸರಿ ಈ ನಿಟ್ಟಿನಲ್ಲಿ ಬೀಡಿ ಕಾರ್ಮಿಕರನ್ನು ಅನಗತ್ಯ ಸತಾಯಿಸದೇ ಕಾನೂನಾತ್ಮಕವಾಗಿ ನೀಡಬೇಕಾದ ಮಜೂರಿ ನೀಡಲು ಒತ್ತಾಯಿಸಿದರು. ಸಿಐಟಿಯು ಜಿಲ್ಲಾ ಮುಂದಾಳು ಜೆ.ಬಾಲಕೃಷ್ಣ ಶೆಟ್ಟಿ  ಮಾತಾಡಿದರು.ನೇತೃತ್ವವನ್ನು ಎಐಟಿಯುಸಿ ಮುಖಂಡರಾದ ಬಾಬು ಭಂಡಾರಿ, ಕೆ.ಈಶ್ವರ, ಸರಸ್ವತಿ ಕೆ., ಲತಾ ಬರಿಮಾರು, ಚಂದಪ್ಪ ನಾವುರ, ಹಾಗೂ ಸಿಐಟಿಯು ಮುಖಂಡರಾದ ರಾಮಣ್ಣ ವಿಟ್ಲ, ಸಂಜೀವ ಬಂಗೇರ, ಲೋಲಾಕ್ಷಿ ವಹಿಸಿದ್ದರು. ಎಐಟಿಯುಸಿ ಜಿಲ್ಲಾ ಮುಖಂಡ ಸುರೇಶ್ ಕುಮಾರ್ ಬಂಟ್ವಾಳ್ ಸ್ವಾಗತಿಸಿ ಸಿಐಟಿಯು ಮುಖಂಡ ಉದಯ ಕುಮಾರ್ ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬೇಡಿಕೆ ಈಡೇರಿಕೆ ಆಗ್ರಹಿಸಿ ಬೀಡಿ ಕಾರ್ಮಿಕರಿಂದ ಹಕ್ಕೊತ್ತಾಯ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*