ಬಂಟ್ವಾಳ

ಸೂಕ್ತ ಜಾಗ ಗುರುತಿಸಿ, ಪ್ರಥಮ ಆದ್ಯತೆಯಲ್ಲಿ ಶೌಚಾಲಯ ನಿರ್ಮಿಸಿ: ಅಧಿಕಾರಿಗಳಿಗೆ ಸೂಚನೆ

ಬಂಟ್ವಾಳ ತಾಲೂಕಿನ ಸ್ವಚ್ಚತೆಯನ್ನು ಅದ್ಯತೆಯ ನೆಲೆಯಲ್ಲಿ  ಪರಿಗಣಿಸಬೇಕು, ಈ ನಿಟ್ಟಿನಲ್ಲಿ ಪ್ರಮುಖವಾಗಿ ಬಿ.ಸಿ.ರೋಡಿನಂತ ನಗರಪ್ರದೇಶದಲ್ಲಿ ಶೌಚಾಲಯ ನಿರ್ಮಾಣಕ್ಕೆ ತಕ್ಷಣ  ಜಾಗ ಗುರುತಿಸಿ ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಸೂಚಿಸಿದ್ದಾರೆ.

ಜಾಹೀರಾತು

ಸೋಮವಾರ ಬಂಟ್ವಾಳದಲ್ಲಿ ತಾಪಂ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ವಿಶ್ವ ಶೌಚಾಲಯ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ತಾಪಂ ಸ್ತಾಯಿಸಮಿತಿ ಅಧ್ಯಕ್ಷೆ ಧನಲಕ್ಷ್ಮಿ ಬಂಗೇರ ಅವರು  ಬಿ.ಸಿ.ರೋಡಿಗೆ ದಿನನಿತ್ಯ ತಮ್ಮ ಅಗತ್ಯದ ಕೆಲಸಕ್ಕಾಗಿ ಸಾವಿರಾರು ಮಂದಿ ನಾಗರಿಕರು ಬರುತ್ತಾರೆ.ಆದರೆ ಇಲ್ಲಿ ಅಗತ್ಯವಾದಸಾರ್ವಜನಿಕ ಶೌಚಾಲಯವಿಲ್ಲದಿರುವುದು ಮಾತ್ರ ವಿಷಾದನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಜಿಪಂಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಮಮತಾ ಗಟ್ಟಿ, ಮಂಜುಳಾ ಮಾವೆ, ಎಂ.ಎಸ್.ಮಹಮ್ಮದ್, ರವೀಂದ್ರ ಕಂಬಳಿ ಪದ್ಮಶೇಖರಜೈನ್, ಕಮಾಲಾಕ್ಷಿ ಪೂಜಾರಿ, ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ, ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್. ಎನ್ ತಾಪಂ ಸದಸ್ಯರು ಉಪಸ್ಥಿತರಿದ್ದರು. ತಾಪಂ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಸ್ವಾಗತಿಸಿದರು. ಪಿಡಿಒ ಶಿವಾನಂದ್ ಸ್ವಚ್ಚತಾ ಪ್ರತಿಜ್ಙೆ ಬೋಧಿಸಿದರು.ವಿಜಯಶಂಕರ ಆಳ್ವ ವಂದಿಸಿದರು.ಕಲಾವಿದ ಮಂಜುವಿಟ್ಲ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ