ಬಂಟ್ವಾಳ

ಆದಿ ಶಂಕರಾಚಾರ್ಯ ಚಿಂತನೆ ಸಾರ್ವಕಾಲಿಕ ಪ್ರೇರಕ: ಬೊಳ್ಳಾವ ಸತ್ಯಶಂಕರ

ಆದಿ ಶಂಕರಾಚಾರ್ಯರ ಚಿಂತನೆಗಳು ಸಾರ್ವಕಾಲಿಕವಾಗಿ ಸಮಾಜವನ್ನು ಒಗ್ಗೂಡಿಸುವುದಕ್ಕೆ ಪ್ರೇರಕವಾಗಿವೆ. ಆತ್ಮ ಉನ್ನತಿಗಾಗಿ ಜ್ಞಾನದ ಅರಿವು ಅಗತ್ಯವಾಗಿದೆ ಎಂದು ಶ್ರೀ ಶಂಕರ ಮಠ ಕೋಟೆಕಾರ್ ಧರ್ಮಾಧಿಕಾರಿ ಬೊಳ್ಳಾವ ಸತ್ಯಶಂಕರ ಹೇಳಿದರು.

ಜಾಹೀರಾತು

ಬಿ.ಸಿ.ರೋಡಿನ ಶ್ರೀ ಅನ್ನಪೂರ್ಣೇಶ್ವರಿ ಸನ್ನಿಧಿಯಲ್ಲಿ ಶ್ರೀ ಶಂಕರ ಸೇವಾ ಪ್ರತಿಷ್ಠಾನ ಮಂಗಳೂರು, ಶ್ರೀ ಶೃಂಗೇರಿ ಶಂಕರ ಮಠ ಕೋಟೆಕಾರು, ಶ್ರೀ ಶಂಕರ ಸೇವಾ ಪ್ರತಿಷ್ಠಾನ ಬಂಟ್ವಾಳ ಇದರ ತಾಲೂಕು ಘಟಕದ ವಾರ್ಷಿಕೋತ್ಸವವನ್ನು ದೀಪ ಬೆಳಗಿಸಿ ಉದ್ಘಾಟಿಸಿ, ಮಾತನಾಡಿದರು.

ಬಂಟ್ವಾಳ ಘಟಕದ ಅಧ್ಯಕ್ಷ ಕೈಯ್ಯೂರು ನಾರಾಯಣ ಭಟ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶ್ರೀ ಅನ್ನಪೂರ್ಣೇಶ್ವರೀ ದೇವಸ್ಥಾನದ ಪ್ರಧಾನ ಅರ್ಚಕ ಎಂ. ಈಶ್ವರ ಭಟ್ ಕೈಯ್ಯೂರು , ಡಾ| ವಿಶ್ವನಾಥ ನಾಯಕ್ ಪಾಣೆಮಂಗಳೂರು ಉಪಸ್ಥಿತರಿದ್ದರು.

ಅಶೋಕ್ ರಾವ್ ಬಿ. ಪುತ್ತೂರು ಮಾತನಾಡಿ ಜನೌಷಧಿ, ಆರೋಗ್ಯ ಕಾರ್ಡ್, ಸ್ವಚ್ಚತೆ ಹಾಗೂ ಸಾರ್ವಜನಿಕ ಪಿಂಚಣಿ ಬಗ್ಗೆ ಮಾಹಿತಿ ನೀಡಿದರು.

ಜಾಹೀರಾತು

ಸಂಚಾಲಕ ಎ. ಕೃಷ್ಣ ಶರ್ಮ ಬಿ.ಸಿ.ರೋಡ್ ಸ್ವಾಗತಿಸಿ, ಪ್ರಸ್ತಾವನೆಗೈದರು. ಪ್ರಧಾನ ಕಾರ್ಯದರ್ಶಿ ರಾಜಾರಾಮ ಐತಾಳ ಕಂದೂರು ವಂದಿಸಿದರು. ಜೊತೆ ಕಾರ್ಯದರ್ಶಿ ವಿ. ಸುಬ್ರಹ್ಮಣ್ಯ ಭಟ್ ಕಾರ್ಯಕ್ರಮ ನಿರೂಪಿಸಿದರು. ಇದೇ ಸಂದರ್ಭ  ಪುರುಷೋತ್ತಮ ಭಟ್ ನಿಡುವಜೆ ಭಾಗವತಿಕೆಯಲ್ಲಿ ಶರಸೇತು ಬಂಧನ ಯಕ್ಷಗಾನ ತಾಳಮದ್ದಳೆ ಜರಗಿತು. ಅರ್ಥದಾರಿಗಳಾಗಿ ಜಯರಾಮ ಶೆಟ್ಟಿ, ಕೈಯ್ಯೂರು ನಾರಾಯಣ ಭಟ್, ಪ್ರಶಾಂತ್ ಕುಮಾರ್ ಮುಡಿಪು ಭಾಗವಹಿಸಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ