25ರಂದು ಟೈಲರ್ಸ್ ಎಸೋಸಿಯೇಶನ್ ಮಹಾಸಭೆ, ಅಭಿನಂದನಾ ಕಾರ್ಯಕ್ರಮ

ಕರ್ನಾಟಕ ಸ್ಟೇಟ್ ಟೈಲರ್ಸ್ ಎಸೋಸಿಯೇಷನ್  ಇದರ ಬಂಟ್ವಾಳ ಕ್ಷೇತ್ರ ಸಮಿತಿಯ ಮಹಾಸಭೆ ಹಾಗೂ ಅಭಿನಂದನಾ ಕಾರ್ಯಕ್ರಮ ನ.25ರಂದು ಭಾನುವಾರ ಬಿ.ಸಿ.ರೋಡಿನ ಲಯನ್ಸ್ ಕ್ಲಬ್‌ನಲ್ಲಿ ಬೆಳಿಗ್ಗೆ 9.30ಕ್ಕೆ ನಡೆಯಲಿದೆ ಎಂದು  ಎಸೋಸಿಯೇಷನ್‌ನ ರಾಜ್ಯ ಸಮಿತಿ ಉಪಾಧ್ಯಕ್ಷ ಸುರೇಶ್ ಸಾಲ್ಯಾನ್ ತಿಳಿಸಿದ್ದಾರೆ.

ಜಾಹೀರಾತು

ಗುರುವಾರ ಸಂಜೆ ಬಿ.ಸಿ.ರೋಡಿನ ಪ್ರೆಸ್‌ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು  ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷ ಈಶ್ವರ್ ಕುಲಾಲ್ ಅಧ್ಯಕ್ಷತೆ ವಹಿಸಲಿದ್ದು  ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ದೀಪ ಪ್ರಜ್ವಲನೆ ಮಾಡಲಿದ್ದಾರೆ. ರಾಜ್ಯ ಸಮಿತಿ ಅಧ್ಯಕ್ಷ ಕೆ.ಎಸ್. ಆನಂದ ಪ್ರಾಸ್ತವಿಕ ಭಾಷಣ ಮಾಡಲಿದ್ದು ಮುಖ್ಯ ಅತಿಥಿಗಳಾಗಿ ತಹಶೀಲ್ದಾರ್ ಪುರಂದರ ಹೆಗ್ಡೆ, ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವಸಂತ, ಜಿಲ್ಲಾಧ್ಯಕ್ಷ ಪ್ರಜ್ವಲ್ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ, ಕಾರ್ಯಕ್ರಮದಲ್ಲಿ  ಶಾಸಕರು, ತಹಶೀಲ್ದಾರ್ ಮತ್ತು ಏಳು ವಲಯದ ಹಿರಿಯ ವೃತ್ತಿ ಬಾಂಧವರನ್ನು ಗೌರವಿಸಿ ಅಭಿನಂದಿಸಲಾಗುವುದು ಎಂದು ತಿಳಿಸಿದರು.

ಸಾಮಾಜಿಕ ಭದ್ರತೆ ಇಲ್ಲ:

ರಾಜ್ಯಾದ್ಯಂತ 10 ಲಕ್ಷಕ್ಕಿಂತಲೂ ಅಧಿಕ ಸಂಖ್ಯೆಯಲ್ಲಿರುವ ಹೊಲಿಗೆ ವೃತ್ತಿಯವರಿಗೆ ಯಾವುದೇ ಸಾಮಾಜಿಕ ಭದ್ರತೆಯಿಲ್ಲದೇ ಇದ್ದು ದರ್ಜಿಗಳ ಮೂಲಭೂತ ಅಗತ್ಯತೆಗಳನ್ನು ಈಡೇರಿಸುವಲ್ಲಿ ಸರಕಾರ ಜಾಣ ಕುರುಡು ಪ್ರದರ್ಶಿಸುತ್ತಿದೆ ಎಂದು ಆರೋಪಿಸಿದ ಅವರು ನೆರೆಯ ಕೇರಳ ರಾಜ್ಯದಲ್ಲಿರುವಂತೆ  ಟೈಲರಿಂಗ್ ವರ್ಕರ್ಸ್ ವೆಲ್‌ಫೇರ್ ಫಂಡ್ ಬೋರ್ಡು ಸ್ಥಾಪಿಸಿ ಆ ಮೂಲಕ ಹೊಲಿಗೆ ಕೆಲಸಗಾರರಿಗೆ  ಕ್ಷೇಮನಿಧಿ, ಕುಟುಂಬ ಪಿಂಚಣಿ, ಹೆರಿಗೆ ಭತ್ಯೆ, ಅಪಘಾತ ಪರಿಹಾರ, ವಿದ್ಯಾರ್ಥಿ ವೇತನ, ವಿವಾಹ ಧನ ಸೌಲಭ್ಯಗಳನ್ನು ನೀಡಬೇಕೆನ್ನುವುದು ಕೆಎಸ್‌ಟಿಎಯ ಬಹುಕಾಲದ ಬೇಡಿಕೆಯಾಗಿದೆ ಎಂದರು.

ಜಾಹೀರಾತು

ಬಡತನ, ಶಿಕ್ಷಣದ ಕೊರತೆಯಿಂದ ಉಪಮಾರ್ಗವಾಗಿ ಹೊಲಿಗೆ ವೃತ್ತಿಯನ್ನು ಅವಲಂಭಿಸಿದವರೇ ಹೆಚ್ಚು, ಇತ್ತೀಚಿನ ವರ್ಷಗಳಲ್ಲಿ ಮಾರುಕಟ್ಟೆಯನ್ನು ಪ್ರವೇಶಿಸಿರುವ ಕಡಿಮೆ ಗುಣಮಟ್ಟ ಹಾಗೂ ಅಲ್ಪ ಬಾಳಿಕೆಯ ಬಟ್ಟೆಗಳಿಂದಾಗಿ ದರ್ಜಿ ವೃತ್ತಿಯನ್ನು ಅವಲಂಬಿಸಿದವರಿಗೆ ತೀರಾ ಕೆಡುಕುಂಟಾಗಿದೆ. ಕುಳಿತು ಮಾಡುವ ಕೆಲಸದಿಂದಾಗಿ ದೇಹಕ್ಕೆ ಸರಿಯಾದ ವ್ಯಾಯಮ ಇಲ್ಲದೆ ಅನಾರೋಗ್ಯಗಳು ದರ್ಜಿ ವೃತ್ತಿಯವರನ್ನು ಸುಲಭವಾಗಿ ಆವರಿಸಿಕೊಳ್ಳುತ್ತಿದೆ  ಇಷ್ಟು ಸವಾಲುಗಳ ಮಧ್ಯೆ ವೃತ್ತಿ ನಿರತ ದರ್ಜಿಗಳಿಗೆ ಕನಿಷ್ಟ ಸೌಲಭ್ಯವನ್ನು ಒದಗಿಸುವ ವಿಷಯದಲ್ಲಿ ಸರಕಾರ ಸೋತಿದೆ ಎಂದು ಅವರು ಆರೋಪಿಸಿದರು.

ವಿವಿಧ ಅವಧಿಯಲ್ಲಿ ಸರಕಾರ ಜಾರಿಗೆ ತಂದ  ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ,  ಪ್ರೊವಿಡೆಂಟ್ ಫಂಡ್ ಜಾರಿ, ಸ್ಮಾರ್ಟ್ ಕಾರ್ಡ್ ಯೋಜನೆ, ಅಂಬೇಡ್ಕರ್ ಸಹಾಯ ಹಸ್ತ ಯೋಜನೆಗಳು ಸರಿಯಾಗಿ ಅನುಷ್ಠಾನವಾಗದೆ  ಟೈಲರ್‍ಸ್‌ಗಳ ಬೇಡಿಕೆಗೆ ಸರಕಾರ ಆಲಸ್ಯ ವಹಿಸಿರುವುದರಿಂದ ರಾಜ್ಯ ಸಮಿತಿಯ ಜೊತೆ ಸೇರಿಕೊಂಡು ಹೋರಾಟ ನಡೆಸುವುದಾಗಿ ಅವರು ಈ ಸಂದರ್ಭ ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷ ಈಶ್ವರ್ ಕುಲಾಲ್, ಕಾರ್ಯದರ್ಶಿ ಎಂ.ನಾಗೇಶ್, ಕೋಶಾಧಿಕಾರಿ ಯಾದೇಶ್ ತುಂಬೆ, ಜಿಲ್ಲಾ ಸಮಿತಿ ಸದಸ್ಯ ಸತೀಶ್, ಸುರೇಶ್  ಹಾಜರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "25ರಂದು ಟೈಲರ್ಸ್ ಎಸೋಸಿಯೇಶನ್ ಮಹಾಸಭೆ, ಅಭಿನಂದನಾ ಕಾರ್ಯಕ್ರಮ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*