ಬಂಟ್ವಾಳ

ಟ್ಯಾಂಕರ್ ಡಿಕ್ಕಿ: ಆಟೋ ಚಾಲಕ ಮೃತ್ಯು

ರಸ್ತೆ ಬದಿ ಆಟೊ ನಿಲ್ಲಿಸಿ ಸಮೀಪದ ಮಳಿಗೆಗೆ ಹೋಗಿ, ಮರಳಿ ಆಟೊ ಹತ್ತಲು ಹೊರಟ ವೇಳೆ ಟ್ಯಾಂಕರ್ ಒಂದು ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಬಿ.ಸಿ.ರೋಡ್ ಮಿತ್ತಬೈಲು ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಘಟನೆಯಿಂದ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಚಾಲಕ ರವೀಂದ್ರ (44) ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಮೃತಪಟ್ಟಿದ್ದಾರೆ.

ಜಾಹೀರಾತು

ಬಿ.ಸಿ.ರೋಡ್ ಮಿತ್ತಬೈಲು ಪೆಟ್ರೋಲ್ ಬಂಕ್ ಸಮೀಪ ಘಟನೆ ನಡೆದಿದೆ. ತೀವ್ರ ವಾಹನದಟ್ಟಣೆ ಇರುವ ಈ ಪ್ರದೇಶದಲ್ಲಿ ಆಟೋ ನಿಲ್ಲಿಸಿ ರವೀಂದ್ರ ಸಮೀಪದ ಅಂಗಡಿಗೆ ಹೋಗಿದ್ದರು. ಅಲ್ಲಿಂದ ಮರಳುವಾಗ ಮಂಗಳೂರಿನಿಂದ ಬಿ.ಸಿ.ರೋಡ್ ಕಡೆಗೆ ಹೋಗುತ್ತಿದ್ದ ಟ್ಯಾಂಕರ್ ಬಡಿದಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆದೊಯ್ಯಲಾಯಿತು. ಆದರೆ ತಲೆಗೆ ಏಟಾದ ಕಾರಣ ಬದುಕುಳಿಯಲಿಲ್ಲ. ಅವರು ಪತ್ನಿ, ಇಬ್ಬರು ಗಂಡುಮಕ್ಕಳನ್ನು ಅಗಲಿದ್ದಾರೆ. ಕೈಕಂಬ, ಪರ್ಲಿಯಾ, ಬಿ.ಸಿ.ರೋಡ್ ಪರಿಸರದಲ್ಲಿ ಆಟೋ ಚಾಲನೆ ಮಾಡುತ್ತಿದ್ದ ಇವರು ಸೌಮ್ಯ ಸ್ವಭಾವದವರಾಗಿದ್ದರು. ಬಂಟ್ವಾಳ ಟ್ರಾಫಿಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.