ತುಳು ಭಾಷೆ ಸಂವಿಧಾನದ ಎಂಟನೇ ಪರಿಚ್ಛೇದ ಸೇರ್ಪಡೆಗೆ ಪಕ್ಷಾತೀತ ನೆಲೆಯ ಹೋರಾಟ ಅಗತ್ಯ : ಡಾ.ಜಯಮಾಲ

jayamala speaking at tulu sammelana

ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಲ್ಲಿ ಸೇರ್ಪಡೆಗಾಗಿ ಮಾಡುತ್ತಿರುವ ಬೇಡಿಕೆಗೆ ದುಬೈಯಲ್ಲಿ ನಡೆದಿರುವ ವಿಶ್ವ ತುಳು ಸಮ್ಮೇಳನ ಹೆಚ್ಚಿನ ಬಲವನ್ನು ನೀಡಿದೆ ಎಂದು ಸಚಿವೆ ಡಾ.ಜಯಮಾಲ ಅವರು ಹೇಳಿದ್ದಾರೆ.
ದುಬೈಯ ಅಲ್ ನಾಸಿರ್ ಒಳಾಂಗಣ ಕ್ರೀಡಾಂಗಣದ ರಾಣಿ ಅಬ್ಬಕ್ಕ ಚಾವಡಿಯಲ್ಲಿ ನಡೆದ ವಿಶ್ವ ತುಳು ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಬೇಕೆಂಬ ತುಳುವರ ಬೇಡಿಕೆಗೆ ತುಳುನಾಡಿನಲ್ಲಿ ನಡೆದ ಅನೇಕ ಸಮ್ಮೇಳನಗಳು ಧ್ವನಿಯನ್ನು ಎತ್ತಿವೆ. ಈ ಧ್ವನಿ ಈಗ ಕಡಲಾಚೆಯ ಕೊಲ್ಲಿ ದೇಶದಲ್ಲೂ ಮಾರ್ಧನಿಸಿದೆ. ಈ ಸಮ್ಮೇಳನದಲ್ಲಿ
ಸೇರಿರುವ ಬಾರೀ ಸಂಖ್ಯೆಯ ತುಳುವರ ಉತ್ಸಾಹ ನೋಡಿದಾಗ ಖಂಡಿತವಾಗಿಯೂ ತಾಯ್ನಾಡಿನ ತುಳುವರ ಬೇಡಿಕೆಗೆ ಮತ್ತಷ್ಟು ಶಕ್ತಿ ಬಂದಿದೆ ಎಂದು ಡಾ.ಜಯಮಾಲ ಅವರು ಅಭಿಪ್ರಾಯ ಪಟ್ಟರು.

ಜಾಹೀರಾತು

ತುಳು ಭಾಷೆಗೆ ಸಂವಿಧಾನದ ಮಾನ್ಯತೆ ನೀಡುವ ವಿಚಾರದಲ್ಲಿ ಉಂಟಾಗಿರುವ ವಿಳಂಬದ ಬಗ್ಗೆ ವಸ್ತು ನಿಷ್ಟವಾಗಿ ಚರ್ಚೆಯಾಗಬೇಕಾಗಿದೆ ಜೊತೆಗೆ ಪಕ್ಷಾತೀತ ನೆಲೆಯಲ್ಲಿ ಆಗ್ರಹದ ಧ್ವನಿಯನ್ನು ಇಮ್ಮಡಿಗೊಳಿಸಬೇಕಾಗಿದೆ ಎಂದು ಸಚಿವೆ ಡಾ.ಜಯಮಾಲ ಹೇಳಿದರು.
ತುಳು ಭಾಷೆ ಹಾಗೂ ಸಂಸ್ಕೃತಿ ಸ್ವತಂತ್ರ ನೆಲೆಯಾಗಿರುವಂತಹದು, ತಳು ಭಾಷೆ ಯಾವುದೇ ಭಾಷೆಯ ಉಪ ಭಾಷೆಯಲ್ಲ. ,ತುಳು ಪ್ರಧಾನ ಭಾಷೆ ಹಾಗೂ ತುಳು ಸಂಸ್ಕೃತಿ ಪ್ರಧಾನ ಸಂಸ್ಕೃತಿಯಾಗಿದೆ . ತಾಯ್ನಾಡಿನಲ್ಲಿ ಮಾತ್ರವಲ್ಲದೆ ಜಗತ್ತಿನೆಲ್ಲೆಡೆ ತುಳು ಭಾಷಿಗರು ನೆಲೆಸಿದ್ದಾರೆ , ತುಳು ಭಾಷೆಯನ್ನು ಪಸರಿಸುತ್ತಿದ್ದಾರೆ ಅನ್ನುವ ವಿಚಾರವನ್ನು ಕೇಂದ್ರ ಸರಕಾರ ಗಮನಿಸಬೇಕಾಗಿದೆ ಎಂದು ಡಾ.ಜಯಮಾಲ ಅಭಿಪ್ರಾಯ ಪಟ್ಟರು.

ದುಬೈಯಲ್ಲಿ ನಡೆದ ವಿಶ್ವ ತುಳು ಸಮ್ಮೇಳನವು ತುಳುವರಿಗೆ ಹಾಗೂ ತುಳು ಭಾಷೆಗೆ ವಿಶ್ವ ಮಾನ್ಯತೆಯನ್ನು ತಂದು ಕೊಟ್ಟಿದೆ ಎಂದು ಡಾ.ಜಯಮಾಲ ಅವರು ಶ್ಲಾಘನೆ ವ್ಯಕ್ತಪಡಿಸಿದರು. ಕೊಲ್ಲಿ ರಾಷ್ಟ್ರದಲ್ಲಿ ತಮ್ಮ ದುಡಿಮೆಯ ಶ್ರಮದ ಜೊತೆಗೆ ಭಾಷಾ ಪ್ರೇಮವನ್ನು ಎತ್ತಿ ಹಿಡಿದಿರುವ ತುಳು ಸಂಘಟಕರನ್ನು ಸಚಿವೆ ಡಾ.ಜಯಮಾಲ ಅವರು ಅಭಿನಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ತುಳು ಭಾಷೆ ಸಂವಿಧಾನದ ಎಂಟನೇ ಪರಿಚ್ಛೇದ ಸೇರ್ಪಡೆಗೆ ಪಕ್ಷಾತೀತ ನೆಲೆಯ ಹೋರಾಟ ಅಗತ್ಯ : ಡಾ.ಜಯಮಾಲ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*