ಅಂಬರೀಶ್ ನಿಧನ: ಬಂಟ್ವಾಳದ ಇಂದಿರಾ ಕ್ಯಾಂಟೀನ್ ಉದ್ಘಾಟನೆ, 94ಸಿ ವಿತರಣೆ ಕಾರ್ಯಕ್ರಮ ಮುಂದಕ್ಕೆ

ನಟ-ಮಾಜಿ ಸಚಿವ ಅಂಬರೀಶ್ (1952-2018) ಶನಿವಾರ ಬೆಂಗಳೂರಿನಲ್ಲಿ ನಿಧನರಾಗಿರುವ ಹಿನ್ನೆಲೆಯಲ್ಲಿ ಮೂರು ದಿನ ಶೋಕಾಚರಣೆಯನ್ನು ಸರಕಾರ ಘೋಷಿಸಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲ ಸರಕಾರಿ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ.

ಇಂದು ಭಾನುವಾರ ಬೆಳಗ್ಗೆ 11.30ಕ್ಕೆ ತಾಲೂಕು ಕಚೇರಿ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬಂಟ್ವಾಳ ತಾಲೂಕು ಕಂದಾಯ ಇಲಾಖೆ ಮತ್ತು ಪುರಸಭೆ ಬಂಟ್ವಾಳ ಆಯೋಜನೆಯಲ್ಲಿ 94ಸಿ ಮತ್ತು 94ಸಿಸಿ ಹಕ್ಕುಪತ್ರ ವಿತರಣೆ ಸಮಾರಂಭ ಮತ್ತು ಇಂದಿರಾ ಕ್ಯಾಂಟೀನ್ ಉದ್ಘಾಟನಾ ಸಮಾರಂಭ ಕಾರ್ಯಕ್ರಮ ನಿಗದಿಯಾಗಿತ್ತು. ಕಂದಾಯ ಸಚಿವ ಆರ್.ವಿ.ದೇಶಪಾಂಡೆ, ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಸೇರಿದಂತೆ ಹಲವು ಜನಪ್ರತಿನಿಧಿಗಳು ಇಲ್ಲಿ ಭಾಗವಹಿಸುವವರಿದ್ದರು.

ಜಾಹೀರಾತು

ಆದರೆ ಅಂಬರೀಷ್ ನಿಧನ ಹಿನ್ನೆಲೆಯಲ್ಲಿ ಅವರ ಗೌರವಾರ್ಥ ಶೋಕಾಚರಣೆಯನ್ನು ಘೋಷಿಸಿದ ಕಾರಣ ಸರಕಾರಿ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ ಎಂದು ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಬಂಟ್ವಾಳನ್ಯೂಸ್ ಗೆ ತಿಳಿಸಿದ್ದಾರೆ.

ಅಂಬರೀಶ್ ಅವರ ಮೂಲ ಹೆಸರು ಅಮರನಾಥ್. ತಂದೆ ಹುಚ್ಚೇಗೌಡ. ತಾಯಿ ಪದ್ಮಾವತಮ್ಮ. ಅವರು ಜನಿಸಿದ್ದು ಮೇ 29, 1952ರಲ್ಲಿ. ಅವರು ಮಂಡ್ಯ ಜಿಲ್ಲೆಯ ದೊಡ್ಡರಸಿನಕೆರೆಯವರು. ಪುಟ್ಟಣ್ಣ ಕಣಗಾಲ್ ನಿರ್ದೇಶನದ ನಾಗರಹಾವು ಅವರ ಮೊದಲ ಚಿತ್ರ. ಈಚೆಗೆ ಬಿಡುಗಡೆಯಾದ ಅಂಬಿ ನಿಂಗ್ ವಯಸ್ಸಾಯ್ತೋ ಅವರ ಕೊನೆ ಸಿನಿಮಾ.

ಕೇಂದ್ರ ಸಚಿವರಾಗಿಯೂ ಸೇವೆ ಸಲ್ಲಿಸಿದ್ದ ಅಂಬರೀಶ್, ಕಾವೇರಿ ವಿವಾದದ ಸಂದರ್ಭದಲ್ಲಿ ರಾಜೀನಾಮೆ ನೀಡಿದ್ದರು. ಈ ಹಿಂದಿನ ಸಿದ್ದರಾಮಯ್ಯ ಸರಕಾರದಲ್ಲಿ ಸಚಿವರಾಗಿ ಕೆಲಸ ಮಾಡಿದ ಅವರು, ಈ ಬಾರಿ ವಿಧಾನಸಭೆಗೆ ಸ್ಪರ್ಧೆ ಮಾಡಿರಲಿಲ್ಲ.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಅಂಬರೀಶ್ ನಿಧನ: ಬಂಟ್ವಾಳದ ಇಂದಿರಾ ಕ್ಯಾಂಟೀನ್ ಉದ್ಘಾಟನೆ, 94ಸಿ ವಿತರಣೆ ಕಾರ್ಯಕ್ರಮ ಮುಂದಕ್ಕೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*