ವಿಟ್ಲ ಠಾಣಾ ವ್ಯಾಪ್ತಿಯ ವಿಟ್ಲಪಡ್ನೂರು ಕೊಡುಂಗಾಯಿ ಶಿಕ್ಷಕರೊಬ್ಬರ ಮನೆಯ ಹಿಂಬದಿ ಬಾಗಿಲು ಮುರಿದು ಮತ್ತೆ ಕಳ್ಳರು ತಮ್ಮ ಕೈಚಳಕ ತೋರಿಸಿದ್ದು, 10 ಸಾವಿರ ನಗದು ದೋಚಿರುವ ಬಗ್ಗೆ ಶನಿವಾರ ದೂರು ದಾಖಲಾಗಿದೆ.
ವಿಟ್ಲಪಡ್ನೂರು ಕೊಡುಂಗಾಯಿ ನಿವಾಸಿ ಗೋಳ್ತಮಜಲು ಶಾಲಾ ಶಿಕ್ಷಕ ಪ್ರಭಾಕರ ಶೆಟ್ಟಿ ಎಂಬವರ ಮನೆಯಲ್ಲಿ ಯಾರೂ ಇಲ್ಲದ ಬೆಳಗಿನ ಸಮಯದಲ್ಲೇ ಕಳ್ಳತನ ಆಗಿದೆ. ಪತ್ನಿಯೂ ಶಿಕ್ಷಕಿಯಾಗಿದ್ದು, ಮಕ್ಕಳ ಶಾಲೆಗೆ ಹೋಗಿದ್ದರು. ಬೆಳಗ್ಗೆ ಹೋದವರು ಸಂಜೆ ಮನೆಗೆ ಹಿಂತಿರುಗಿದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ.
ಸ್ಥಳಕ್ಕೆ ವಿಟ್ಲ ಉಪನಿರೀಕ್ಷಕ ಯಲ್ಲಪ್ಪ ಅವರನ್ನೊಳಗೊಂಡ ತಂಡ ಬೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅ.23ರಂದು ವಿಟ್ಲ ಪತ್ರಕರ್ತ ರಮೇಶ್ ಕೆ ಅವರ ಬೊಬ್ಬೆಕೇರಿ ಬಾಡಿಗೆ ಮನೆಯಲ್ಲಿ ನಡೆದ ಕಳ್ಳತನಕ್ಕೂ ಈ ಪ್ರಕರಣಕ್ಕೂ ಸಾಮ್ಯತೆ ಇದೆ ಎನ್ನಲಾಗಿದೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…