ವಿಟ್ಲ

ವಿಟ್ಲದಲ್ಲಿ ಮತ್ತೆ ಕಳ್ಳರ ಕೈಚಳಕ, ಬಾಗಿಲು ಮುರಿದು ನಗದು ದೋಚಿದ ಚೋರರು

ವಿಟ್ಲ ಠಾಣಾ ವ್ಯಾಪ್ತಿಯ ವಿಟ್ಲಪಡ್ನೂರು ಕೊಡುಂಗಾಯಿ ಶಿಕ್ಷಕರೊಬ್ಬರ ಮನೆಯ ಹಿಂಬದಿ ಬಾಗಿಲು ಮುರಿದು ಮತ್ತೆ ಕಳ್ಳರು ತಮ್ಮ ಕೈಚಳಕ ತೋರಿಸಿದ್ದು, 10 ಸಾವಿರ ನಗದು ದೋಚಿರುವ ಬಗ್ಗೆ ಶನಿವಾರ ದೂರು ದಾಖಲಾಗಿದೆ.

ಜಾಹೀರಾತು

ವಿಟ್ಲಪಡ್ನೂರು ಕೊಡುಂಗಾಯಿ ನಿವಾಸಿ ಗೋಳ್ತಮಜಲು ಶಾಲಾ ಶಿಕ್ಷಕ ಪ್ರಭಾಕರ ಶೆಟ್ಟಿ ಎಂಬವರ ಮನೆಯಲ್ಲಿ ಯಾರೂ ಇಲ್ಲದ ಬೆಳಗಿನ ಸಮಯದಲ್ಲೇ ಕಳ್ಳತನ ಆಗಿದೆ. ಪತ್ನಿಯೂ ಶಿಕ್ಷಕಿಯಾಗಿದ್ದು, ಮಕ್ಕಳ ಶಾಲೆಗೆ ಹೋಗಿದ್ದರು. ಬೆಳಗ್ಗೆ ಹೋದವರು ಸಂಜೆ ಮನೆಗೆ ಹಿಂತಿರುಗಿದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ.

ಸ್ಥಳಕ್ಕೆ ವಿಟ್ಲ ಉಪನಿರೀಕ್ಷಕ ಯಲ್ಲಪ್ಪ ಅವರನ್ನೊಳಗೊಂಡ ತಂಡ ಬೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅ.23ರಂದು ವಿಟ್ಲ ಪತ್ರಕರ್ತ ರಮೇಶ್ ಕೆ ಅವರ ಬೊಬ್ಬೆಕೇರಿ ಬಾಡಿಗೆ ಮನೆಯಲ್ಲಿ ನಡೆದ ಕಳ್ಳತನಕ್ಕೂ ಈ ಪ್ರಕರಣಕ್ಕೂ ಸಾಮ್ಯತೆ ಇದೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ