ವಿಟ್ಲ

ಹದಗೆಟ್ಟ ರಸ್ತೆಯಲ್ಲಿ ಸಂಚರಿಸಿತು 22 ಚಕ್ರದ ಲಾರಿ: ವಶಕ್ಕೆ ಪಡೆದ ವಿಟ್ಲ ಪೊಲೀಸರು

ಮೊದಲೇ ರಸ್ತೆ ಹದಗೆಟ್ಟಿದೆ, ಸಣ್ಣ ವಾಹನಗಳೇ ಕಷ್ಟದಲ್ಲಿ ಸಂಚರಿಸುತ್ತವೆ ಹೀಗಿದ್ದರೂ 22 ಚಕ್ರದ ಲಾರಿಯೊಂದು ವಿಟ್ಲ ಮೂಲಕ ಪೆರ್ಲ ಮಾರ್ಗದಲ್ಲಿ ಸಂಚರಿಸಿದ್ದು, ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಸಾರಡ್ಕದಲ್ಲಿ ವಶಕ್ಕೆಪಡೆದುಕೊಳ್ಳಲಾಯಿತು.

ಜಾಹೀರಾತು

ಕಲ್ಲಡ್ಕ ವಿಟ್ಲ ಸಾರಡ್ಕ ರಸ್ತೆಯ ಬದಿ ಹಲವು ಕಡೆಯಲ್ಲಿ ಕುಸಿತವಾಗಿದ್ದು, ಘನ ಲಾರಿಗಳ ಸಂಚಾರಕ್ಕೆ ಯೋಗ್ಯವಾಗಿಲ್ಲ. ಹೀಗಿದ್ದರೂ ನಿತ್ಯ ನೂರಾರು ಜಲ್ಲಿ ಲಾರಿಗಳು ಈ ರಸ್ತೆಯಲ್ಲಿ ಸಂಚರಿಸುತ್ತಿವೆ. ಈಗ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸಬೇಕಾದ 22ಚಕ್ರದ ಲಾರಿಗಳು ಯಾವುದೇ ಅಡೆ ತಡೆ ಇಲ್ಲದೆ ಸಂಚಾರ ಆರಂಭಿಸಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ತಮಿಳುನಾಡು ಮೂಲದ ಲಾರಿ ಕೇರಳದ ಉಕ್ಕಿನಡ್ಕದಲ್ಲಿ ನಡೆಯುವ ಕಾಮಗಾರಿಗೆ ಕಬ್ಬಿಣವನ್ನು ಸಾಗಾಟ ಮಾಡುತ್ತಿದೆ ಎನ್ನಲಾಗಿದೆ. ಲಾರಿಯನ್ನು ವಶಕ್ಕೆ ಪಡೆದ ವಿಟ್ಲ ಪೊಲೀಸರು, ಬಂಟ್ವಾಳ ಆರ್ ಟಿ ಒ ಕಚೇರಿಗೆ ಹಸ್ತಾಂತರ ಮಾಡಿದ್ದಾರೆ. ಈ ಹಿಂದೆಯೂ ಇದೇ ರಸ್ತೆಯಲ್ಲಿ ಘನ ಲಾರಿಗಳು ಸಂಚರಿಸಿರುವ ಕುರಿತು ದೂರುಗಳು ಕೇಳಿಬಂದಿದ್ದವು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ