ಗಾಂಧಿ 150 ರಂಗಪಯಣ

ಕರ್ನಾಟಕ ವಾರ್ತಾ ಮತ್ತು ಸಂಪರ್ಕ ಇಲಾಖೆಯ ಆಶ್ರಯದಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ, ಲೋಕೋಪಯೋಗಿ ಇಲಾಖೆಯ ಸಹಯೋಗದಲ್ಲಿ ಮಹಾತ್ಮಾ ಗಾಂಧೀಜಿಯವರ 150 ನೇ ಜನ್ಮಾಚರಣೆಯ ಅಂಗವಾಗಿ ರಾಜ್ಯಾದ್ಯಂತ ನಡೆಯುತ್ತಿರುವ ಗಾಂಧಿ 150 ರಂಗಪಯಣ ತಂಡ ಡಿ.12ರಿಂದ 15ರವರೆಗೆ ಬಂಟ್ವಾಳ ತಾಲೂಕಿನಲ್ಲಿ ಪ್ರದರ್ಶನ ನೀಡಲಿದೆ.

ಜಾಹೀರಾತು

ಬೊಳುವಾರು ಮಹಮ್ಮದ್ ಕುಞಿಯವರ ಪಾಪು ಗಾಂಧಿ ಬಾಪು ಆದ ಕಥೆ ಎಂಬ ಕೃತಿಯನ್ನು ಡಾ.ಶ್ರೀಪಾದ್ ಭಟ್ ನಿರ್ದೇಶನದಲ್ಲಿ ಪಾಪು-ಬಾಪುನಾಟಕವಾಗಿ ತಂಡ ಪ್ರದರ್ಶಿಸಲಿದೆ. ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಬಂಟ್ವಾಳ ರೋಟರಿ ಕ್ಲಬ್ ಆಯೋಜನೆಯಲ್ಲಿ ಈ ತಂಡ 12ರ ಬುಧವಾರ ಬೆಳಿಗ್ಗೆ 9.30 ಕ್ಕೆ ಪೂಂಜಾಲಕಟ್ಟೆ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ, ಅಪರಾಹ್ನ 2 ರಿಂದ ಸಿದ್ದಕಟ್ಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರದರ್ಶನ ನೀಡಲಿದೆ.

13ರಂದು ಗುರುವಾರ ಬೆಳಿಗ್ಗೆ 9.30 ಕ್ಕೆ ವಗ್ಗ ದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ , ಅಪರಾಹ್ನ 2.30ಕ್ಕೆ ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ, ದ.14 ರ ಶುಕ್ರವಾರ ಬೆಳಿಗ್ಗೆ 9.30ಕ್ಕೆ ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ಹಾಗೂ ಅಪರಾಹ್ನ 2 ರಿಂದ ಬಂಟ್ವಾಳ ಎಸ್‌ವಿಎಸ್ ಕಾಲೇಜಿನಲ್ಲಿ 15ರಂದು ಬೆಳಿಗ್ಗೆ 10 ಗಂಟೆಗೆ ಮೆಲ್ಕಾರ್ ಮಹಿಳಾ ಪದವಿ ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ ಹಾಗೂ ಸಂಜೆ 7 ಗಂಟೆಗೆ ಬಿ.ಸಿ.ರೋಡಿನ ರೋಟರಿ ಸಭಾಂಗಣದಲ್ಲಿ ಸಾರ್ವಜನಿಕ ಪ್ರದರ್ಶನ ಏರ್ಪಡಿಸಿದೆ ಎಂದು ರಂಗಪಯಣ ತಂಡದ ಜಿಲ್ಲಾ ಸಂಚಾಲಕ ಮೌನೇಶ ವಿಶ್ವಕರ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಗಾಂಧಿ 150 ರಂಗಪಯಣ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*