ಕರ್ನಾಟಕ ವಾರ್ತಾ ಮತ್ತು ಸಂಪರ್ಕ ಇಲಾಖೆಯ ಆಶ್ರಯದಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ, ಲೋಕೋಪಯೋಗಿ ಇಲಾಖೆಯ ಸಹಯೋಗದಲ್ಲಿ ಮಹಾತ್ಮಾ ಗಾಂಧೀಜಿಯವರ 150 ನೇ ಜನ್ಮಾಚರಣೆಯ ಅಂಗವಾಗಿ ರಾಜ್ಯಾದ್ಯಂತ ನಡೆಯುತ್ತಿರುವ ಗಾಂಧಿ 150 ರಂಗಪಯಣ ತಂಡ ಡಿ.12ರಿಂದ 15ರವರೆಗೆ ಬಂಟ್ವಾಳ ತಾಲೂಕಿನಲ್ಲಿ ಪ್ರದರ್ಶನ ನೀಡಲಿದೆ.

ಜಾಹೀರಾತು

ಬೊಳುವಾರು ಮಹಮ್ಮದ್ ಕುಞಿಯವರ ಪಾಪು ಗಾಂಧಿ ಬಾಪು ಆದ ಕಥೆ ಎಂಬ ಕೃತಿಯನ್ನು ಡಾ.ಶ್ರೀಪಾದ್ ಭಟ್ ನಿರ್ದೇಶನದಲ್ಲಿ ಪಾಪು-ಬಾಪುನಾಟಕವಾಗಿ ತಂಡ ಪ್ರದರ್ಶಿಸಲಿದೆ. ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಬಂಟ್ವಾಳ ರೋಟರಿ ಕ್ಲಬ್ ಆಯೋಜನೆಯಲ್ಲಿ ಈ ತಂಡ 12ರ ಬುಧವಾರ ಬೆಳಿಗ್ಗೆ 9.30 ಕ್ಕೆ ಪೂಂಜಾಲಕಟ್ಟೆ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ, ಅಪರಾಹ್ನ 2 ರಿಂದ ಸಿದ್ದಕಟ್ಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರದರ್ಶನ ನೀಡಲಿದೆ.

13ರಂದು ಗುರುವಾರ ಬೆಳಿಗ್ಗೆ 9.30 ಕ್ಕೆ ವಗ್ಗ ದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ , ಅಪರಾಹ್ನ 2.30ಕ್ಕೆ ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ, ದ.14 ರ ಶುಕ್ರವಾರ ಬೆಳಿಗ್ಗೆ 9.30ಕ್ಕೆ ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ಹಾಗೂ ಅಪರಾಹ್ನ 2 ರಿಂದ ಬಂಟ್ವಾಳ ಎಸ್‌ವಿಎಸ್ ಕಾಲೇಜಿನಲ್ಲಿ 15ರಂದು ಬೆಳಿಗ್ಗೆ 10 ಗಂಟೆಗೆ ಮೆಲ್ಕಾರ್ ಮಹಿಳಾ ಪದವಿ ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ ಹಾಗೂ ಸಂಜೆ 7 ಗಂಟೆಗೆ ಬಿ.ಸಿ.ರೋಡಿನ ರೋಟರಿ ಸಭಾಂಗಣದಲ್ಲಿ ಸಾರ್ವಜನಿಕ ಪ್ರದರ್ಶನ ಏರ್ಪಡಿಸಿದೆ ಎಂದು ರಂಗಪಯಣ ತಂಡದ ಜಿಲ್ಲಾ ಸಂಚಾಲಕ ಮೌನೇಶ ವಿಶ್ವಕರ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ