ಬಂಟ್ವಾಳ

ಪೂಜಾರಿ ವಿರುದ್ಧ ಹೇಳಿಕೆ: ಕಠಿಣ ಕಾನೂನು ಕ್ರಮಕ್ಕೆ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ಒತ್ತಾಯ

ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಸಮಾಜಘಾತುಕ ಶಕ್ತಿಗಳ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಹಾಗೂ ಸಹಾಯಕ ಪೊಲೀಸ್ ಅಧೀಕ್ಷಕರಿಗೆ ಮಂಗಳವಾರ ಮನವಿ ಸಲ್ಲಿಸಿತು.


ಬಿಲ್ಲವ ಸಮಾಜ ಸೇವಾ ಸಂಘದ ವಿಶೇಷ ಕಾರ್ಯಕಾರಿ ಸಮಿತಿ ಸಭೆಯ ತೀರ್ಮಾನದಂತೆ ಈ ಮನವಿ ಸಲ್ಲಿಸಲಾಗಿದ್ದು ಕೇಂದ್ರದ ಮಾಜಿ ಸಚಿವ, ಬಿಲ್ಲವ ಸಮಾಜದ ಪ್ರಮುಖ ಮಾರ್ಗದರ್ಶಕರಾಗಿರುವ ಜನಾರ್ದನ ಪೂಜಾರಿಯವರ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ಸಾಮಾಜಿಕ ಜಾಲತಣದಲ್ಲಿ ಪ್ರಚಾರಮಾಡುತ್ತಿರುವಾತನನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸಮಿತಿ ಆಗ್ರಹಿಸಿದೆ.
ಈ ಸಂದರ್ಭ ಸಂಘದ ಅಧ್ಯಕ್ಷ ಸೇಸಪ್ಪ ಕೋಟ್ಯಾನ್, ಉಪಾಧ್ಯಕ್ಷ ರಾಘವ ಅಮೀನ್, ಪ್ರ.ಕಾರ್ಯದರ್ಶಿ ರಮೇಶ್ ಎಂ.ತುಂಬೆ, ಕೋಶಾಧಿಕಾರಿ ಉಮೇಶ್ ಸುವರ್ಣ, ಜತೆಕಾರ್ಯದರ್ಶಿ ಶಂಕರ್ ಕಾಯರ್‌ಮಾರ್, ಲೆಕ್ಕ ಪರಿಶೋಧಕ ಸತೀಶ್ ಬಿ., ಮಹಿಳಾ ಸಂಘದ ಅಧ್ಯಕ್ಷೆ ಜಯಲಕ್ಷ್ಮೀ ಮಾಜಿ ಅಧ್ಯಕ್ಷ ರಾಮಪ್ಪ ಪೂಜಾರಿ ಮೊದಲಾದವರು ಹಾಜರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ