ಪ್ರಮುಖ ಸುದ್ದಿಗಳು

ತೋಟಗಾರಿಕಾ ಬೆಳೆಗಳಿಗೆ ಪರಿಹಾರ: ಕೇಂದ್ರಕ್ಕೆ ಪ್ರಸ್ತಾವನೆ

ರಾಜ್ಯದಲ್ಲಿ ಅತಿವೃಷ್ಠಿಯಿಂದ ಹಾನಿಯಾದ ಅಡಕೆಬೆಳೆ ಸಹಿತ ಇತರ ತೋಟಗಾರಿಕಾ ಬೆಳೆಗಳಿಗೆ ಪರಿಹಾರ ಒದಗಿಸಲು17,527 ಲಕ್ಷ ರೂ. ಪ್ರಸ್ತಾವನೆಯನ್ನು ಕೇಂದ್ರಕ್ಕೆ ಸಲ್ಲಿಸಲಾಗಿದೆ ಎಂದು ತೋಟಗಾರಕಾ ಸಚಿವ ಎಂ.ಸಿ.ಮನಗೂಳಿ ತಿಳಿಸಿದ್ದಾರೆ.

ಜಾಹೀರಾತು

ಬೆಳಗಾವಿ ಅಧಿವೇಶನದಲ್ಲಿ  ಬಂಟ್ವಾಳ ಶಾಸಕ ಯು.ರಾಜೇಶ್ ನಾಯ್ಕ್ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವರು, ದ.ಕ.ಜಿಲ್ಲೆಯಲ್ಲಿ ಅಡಕೆ ಕೊಳೆರೋಗದ ಬಗ್ಗೆ ಸರಕಾರದ ಗಮನಕ್ಕೂ ಬಂದಿದ್ದು, ಇದನ್ನು ತಡೆಗಟ್ಟಲು ಇಲಾಖೆ ಸೂಕ್ತ ನಿಯಂತ್ರಣ ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದ್ದಾರೆ.

ಅಡಕೆಬೆಳೆ ಸಹಿತ ಇತರ ತೋಟಗಾರಿಕಾ ಬೆಳೆಗಳ ರೋಗಕ್ಕೆ  ಸಸ್ಯ ಸಂರಕ್ಷಣೆ ಔಷಧಿ ಖರೀದಿಸಿದ ರೈತರಿಗೆ ವಿವಿಧ ಯೋಜನೆಯಡಿ ಸಹಾಯಧನ ನೀಡಲಾಗುತ್ತಿದೆ ಎಂದು ಸಚಿವರು ಶಾಸಕ ರಾಜೇಶ್ ನಾಯ್ಕ್ ಅವರ ಉಪ ಪ್ರಶ್ನೆಗೆ ಉತ್ತರಿಸಿದ್ದಾರೆ. ಜಿಲ್ಲೆಯಲ್ಲಿ ಸರ್ವೇ ಕಾರ್ಯ ನಡೆದಿದ್ದು,56474 ಅಡಕೆ ಬೆಳೆಗಾರರ ಶೇ.33 ಕ್ಕಿಂತಲೂ ಹೆಚ್ಚು ಹಾನಿಯಾಗಿದ್ದು,ಕೃಷಿಕರ ವಿವರವನ್ನು ಪರಿಹಾರ ತಂತ್ರಾಂಶದಲ್ಲಿ ದಾಖಲಿಸುವ ಕಾರ್ಯ ನಡೆಯತ್ತಿದೆ ಎಂದು ಸಚಿವ ಎಂ.ಸಿ.ಮನಗೂಳಿ ಅವರು ಶಾಸಕರಿಗೆ ಮಾಹಿತಿ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ