ಕಲ್ಲಡ್ಕ

ಟಿಪ್ಪು ಸುಲ್ತಾನ್ ಯಂಗ್ ಮೆನ್ಸ್ ವಾರ್ಷಿಕೋತ್ಸವ ಪ್ರಯುಕ್ತ ರಕ್ತದಾನ ಶಿಬಿರ

ಕಲ್ಲಡ್ಕ ಟಿಪ್ಪು ಸುಲ್ತಾನ್ ಯಂಗ್ ಮೆನ್ಸ್ ಇದರ ಮೂರನೇ ವಾರ್ಷಿಕೋತ್ಸವ ಪ್ರಯುಕ್ತ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಇದರ ಸಹಯೋಗದೊಂದಿಗೆ ಸಾರ್ವಜನಿಕ ರಕ್ತದಾನ ಶಿಬಿರ ಕಲ್ಲಡ್ಕ ಸರಕಾರಿ ಶಾಲಾ ವಠಾರದಲ್ಲಿ ನಡೆಯಿತು.

ಜಾಹೀರಾತು

ಎಸ್.ಡಿ.ಪಿ.ಐ. ಮಾಜಿ ಜಿಲ್ಲಾದ್ಯಕ್ಷ ಹನೀಫ್ ಖಾನ್ ಕೊಡಾಜೆ ಉದ್ಘಾಟಿಸಿದರು. ಬಂಟ್ವಾಳ ಎಪಿಎಂಸಿ ಅಧ್ಯಕ್ಷ ಕೆ. ಪದ್ಮನಾಭ ರೈ ಅಧ್ಯಕ್ಷತೆ ವಹಿಸಿದ್ದರು. ಪಿಎಫ್.ಐ ಕಲ್ಲಡ್ಕ ಡಿವಿಷನ್ ಅಧ್ಯಕ್ಷ ಝಕರಿಯಾ ಗೋಳ್ತಮಜಲು, ಕಾಂಗ್ರೆಸ್ ಮುಖಂಡ ರಾಜಾ ಮೋನಾಕ, ಪಿಎಫ್.ಐ ಬಂಟ್ವಾಳ ಸದಸ್ಯ ಅಬೂಬಕ್ಕರ್ ಸಿದ್ದೀಕ್ ಪನಾಮಾ, ಜೆಮ್ ಪಬ್ಲಿಕ್ ಶಾಲಾ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಹಮೀದ್ ಅಲಿ, ಗೋಳ್ತಮಜಲು ಗ್ರಾಮ ಪಂಚಾಯತು ಸದಸ್ಯ ಯೂಸುಫ್ ಹೈದರ್, ರಾಜ್ಯ ಮಟ್ಟದ ಕಬಡ್ಡಿ ಆಟಗಾರ ಉಮರುಲ್ ಫಾರೂಕ್, ಪ್ರಮುಖರಾದ  ಸಫ್ವಾನ್ ಸಾಬಿತ್ ಅಜ್ಜಿಕಲ್, ಮುಆದ್ ಜಿ.ಎಂ., ಬ್ಲಡ್ ಹೆಲ್ತ್ ಲೈನ್ ನ ಅಜಯ್, ಸಲೀಂ ಮುರ, ಪತ್ರಕರ್ತಲತೀಫ್ ನೇರಳಕಟ್ಟೆ ಮೊದಲಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಇದೇ ವೇಳೆ ಸತತ 50 ಬಾರಿ ರಕ್ತದಾನ ಮಾಡಿದ ಸಮಾಜ ಸೇವಕ ಅಬ್ದುಲ್ ಹಕೀಂ ಕಲ್ಲಡ್ಕ ಅವರನ್ನು ಸನ್ಮಾನಿಸಲಾಯಿತು. ಟಿಪ್ಪುಸುಲ್ತಾನ್ ಯಂಗ್ ಮನ್ಸ್ ನ ಅದ್ಯಕ್ಷ ಅಶ್ರಫ್ ಅರಬಿ ಸ್ವಾಗತಿಸಿ ವಂದಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ