ಬಂಟ್ವಾಳ

ವಿ.ಗ.ನಾಯಕ ಅವರಿಗೆ ನೀರ್ಪಾಜೆ ಪ್ರಶಸ್ತಿ ಪ್ರದಾನ

ಹಿರಿಯ ಕವಿ, ಸಾಹಿತಿ ವಿಮರ್ಶಕ ವಿ.ಗ.ನಾಯಕ ಅವರಿಗೆ ಕನ್ನಡದ ಕಲ್ಹಣ ದಿ.ನೀರ್ಪಾಜೆ ಭೀಮ ಭಟ್ಟ ಅಭಿಮಾನಿ ಬಳಗ, ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ಶನಿವಾರ ಬಂಟ್ವಾಳದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡದ ಕಲ್ಹಣ ದಿ.ನೀರ್ಪಾಜೆ ಭೀಮ ಭಟ್ಟ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಜಾಹೀರಾತು

ಪ್ರಶಸ್ತಿ ಪ್ರದಾನ ಮಾಡಿ, ಸನ್ಮಾನ ನೆರವೇರಿಸಿ ಮಾತನಾಡಿದ ಮಾಜಿ ಸಚಿವ ಬಿ.ರಮಾನಾಥ ರೈ, ದಿ.ನೀರ್ಪಾಜೆ ಭೀಮ ಭಟ್ಟರೊಂದಿಗಿನ ಸಾಮಾಜಿಕ ಚಟುವಟಿಕೆಗಳ ಒಡನಾಟವನ್ನು ಸ್ಮರಿಸಿದರು. ಬಂಟ್ವಾಳದಲ್ಲಿ ಪಂಜೆ ಮಂಗೇಶರಾಯರ ಭವನಕ್ಕೆ ತನ್ನ ಅವಧಿಯಲ್ಲಿ ೫ ಕೋಟಿ ರೂ ಮಂಜೂರಾಗಿದ್ದು, ಹೆಚ್ಚುವರಿಯಾಗಿ 3 ಕೋಟಿ ರೂಗಳನ್ನು ಒದಗಿಸುವಂತೆ ತಾನು ಈಗಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಲ್ಲಿ ಕೇಳಿಕೊಂಡಿದ್ದೇನೆ ಎಂದು ಅವರು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಸಾಪ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು ಮಾತನಾಡಿ, ಸಾಹಿತ್ಯ ಕ್ಷೇತ್ರದ ಸಾಧಕರ ಸ್ಮರಣೆ ನಿರಂತರವಾಗಿರಬೇಕು. ಕಾಲೇಜು ವಿದ್ಯಾರ್ಥಿಗಳಿಗೆ ಇಂಥ ಕಾರ್ಯಕ್ರಮಗಳು ತಲುಪಬೇಕು. ಅದಕ್ಕಾಗಿ ಇಂಥ ಕಾರ್ಯಕ್ರಮಗಳಿಗೆ ಕಾಲೇಜುಗಳು ವೇದಿಕೆಯೊದಗಿಸಬೇಕಾಗಿದ್ದು, ಯುವ ಪೀಳಿಗೆ ಹಿರಿಯರ ಬಗ್ಗೆ ತಿಳಿಯುವ ಕೆಲಸವಾಗಬೇಕು ಎಂದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ವಿ.ಗ.ನಾಯಕ, ತಾನು ಹೊರಜಿಲ್ಲೆಯವನಾದರೂ ದ.ಕ.ಜಿಲ್ಲೆಯವನೇ ಆಗಿ ಬೆಳೆಯಲು ಅಡ್ಯನಡ್ಕದ ಡಾ. ವಾರಣಾಶಿ ಸುಬ್ರಾಯ ಭಟ್ಟರು, ಸಾಯ ಕೃಷ್ಣ ಭಟ್ಟರು ಮತ್ತು ದಿ.ನೀರ್ಪಾಜೆ ಭೀಮ ಭಟ್ಟರ ಒಡನಾಟ, ಪ್ರೋತ್ಸಾಹ ಕಾರಣವಾಗಿದೆ. ತನ್ನ ಜೀವನದುದ್ದಕ್ಕೂ ಸಾಹಿತ್ಯಾಭಿಮಾನಿಗಳು ಪ್ರೋತ್ಸಾಹ ನೀಡಿದ್ದು ಸಂತೃಪ್ತಿ ತಂದಿದೆ ಎಂದರು.

ಜಾಹೀರಾತು

ಸನ್ಮಾನಿತರ ಪರಿಚಯವನ್ನು ಮಾಡಿದ ಬೇ.ಸಿ.ಗೋಪಾಲಕೃಷ್ಣ, ವಿ.ಗ.ನಾಯಕರು ವಿದ್ಯಾರ್ಥಿಗಳಿಗೆ ಮತ್ತು ಸಾಹಿತ್ಯಪ್ರಿಯರನ್ನು ಬೆಳೆಸುವ ಕಾರ್ಯ ಮಾಡಿದರು. ಸೂಕ್ಷ್ಮ ಅವಲೋಕನದೃಷ್ಟಿ ಹೊಂದಿರುವ ನಾಯಕರು, ಕಿರಿಯರನ್ನು ಪ್ರೋತ್ಸಾಹಿಸುವವರು ಎಂದರು.
19ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷ ಪ್ರೊ.ತುಕಾರಾಮ ಪೂಜಾರಿ ಮಾತನಾಡಿ ನೀರ್ಪಾಜೆ ಅವರ ಕುರಿತು ಕಡೇಶಿವಾಲಯ ಶಾಲೆಯಲ್ಲಿ ಪ್ರಬಂಧ ಸ್ಪರ್ಧೆ ಆಯೋಜನೆಗೆ ತನ್ನ ಕೊಡುಗೆಯನ್ನು ಪ್ರಕಟಿಸಿ, ಪ್ರತಿ ವರ್ಷವೂ ಇಂಥ ಕಾರ್ಯಕ್ರಮಗಳು ನಡೆಯಬೇಕು ಎಂದರು. ಕೈಯೂರು ನಾರಾಯಣ ಭಟ್ ಸನ್ಮಾನಪತ್ರ ವಾಚಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್, ಕನ್ನಡದ ಕಲ್ಹಣ ದಿ.ನೀರ್ಪಾಜೆ ಭೀಮ ಭಟ್ಟ ಅಭಿಮಾನಿ ಬಳಗದ ಕೋಶಾಧಿಕಾರಿ ಕೊಳಕೆ ಗಂಗಾಧರ ಭಟ್ ಮತ್ತು ದಿ.ನೀರ್ಪಾಜೆ ಅವರ ಪತ್ನಿ ಶಂಕರಿ ಉಪಸ್ಥಿತರಿದ್ದರು. ಕನ್ನಡದ ಕಲ್ಹಣ ದಿ.ನೀರ್ಪಾಜೆ ಭೀಮ ಭಟ್ಟ ಅಭಿಮಾನಿ ಬಳಗದ ಅಧ್ಯಕ್ಷ ಬಿ.ತಮ್ಮಯ್ಯ ಸ್ವಾಗತಿಸಿದರು. ಕಸಾಪ ತಾಲೂಕು ಅಧ್ಯಕ್ಷ ಕೆ.ಮೋಹನ ರಾವ್ ವಂದಿಸಿದರು. ಉಪನ್ಯಾಸಕರಾದ ಡಿ.ಬಿ.ಅಬ್ದುಲ್ ರಹಮಾನ್ ಮತ್ತು ವಿ.ಸು.ಭಟ್ ಕಾರ್ಯಕ್ರಮ ನಿರೂಪಿಸಿದರು. ಇದಕ್ಕೂ ಮೊದಲು ಡಾ.ಪ್ರಮೀಳಾ ಕೊಳಕೆ ಮತ್ತು ಪಂಚಮಿ ಅವರಿಂದ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ