ಬಂಟ್ವಾಳದಲ್ಲಿಲ್ಲ ಲೋ ಓಲ್ಟೇಜ್ – ರಾಜೇಶ್ ನಾಯ್ಕ್ ಪ್ರಶ್ನೆಗೆ ಸಿಎಂ ಉತ್ತರ

www.bantwalnews.com

ಬಂಟ್ವಾಳ ತಾಲೂಕಿನಲ್ಲಿ ಲೋ ಓಲ್ಟೇಜ್ ಸಮಸ್ಯೆ ಇರುವುದಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಜಾಹೀರಾತು

ಬೆಳಗಾವಿ ವಿಧಾನಮಂಡಲದಲ್ಲಿ ಬಂಟ್ವಾಳ ಶಾಸಕ ಯು.ರಾಜೇಶ್ ನಾಯ್ಕ್ ಉಳಿಪಾಡಿ ಅವರ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಮುಖ್ಯಮಂತ್ರಿ, ವಿದ್ಯುತ್ ವಿತರಣಾ ಜಾಲದ ಬಲವರ್ಧನೆಗಾಗಿ ಮತ್ತು ಗುಣಮಟ್ಟದ ನಿರಂತರ ವಿದ್ಯುತ್ ಪಿಉರೈಕೆಗಾಗಿ ಸುಧಾರಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದ್ದಾರೆ. ರೈತರ ನೀರಾವರಿ ಪಂಪ್ ಸೆಟ್ ಕಾಮಗಾರಿಗಳಿಗೆ ಅವಶ್ಯಕತೆ ಇರುವ ಸಾಮಾಗ್ರಿಗಳನ್ನು ಸಕಾಲದಲ್ಲಿ ಖರೀದಿಸಿ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಉಪಪ್ರಶ್ನೆಗೆ ಉತ್ತರಿಸಿದರು.

 461.31 ಲಕ್ಷ ರೂ.ವಿನ ಕಾಮಗಾರಿ ಮಂಜೂರು: 

ಜಾಹೀರಾತು

ಬಂಟ್ವಾಳ ತಾಲೂಕಿನಲ್ಲಿ ದೀನ್ ದಯಾಳ್ ಉಪಾಧ್ಯಾಯ ಗ್ರಾಮಜ್ಯೋತಿಯೋಜನೆಯಡಿ ಗ್ರಾಮೀಣ ಮನೆಗಳ ವಿದ್ಯುದ್ದೀಕರಣಕ್ಕೆ 461.31 ಲಕ್ಷ ರೂ.ವಿನ ಕಾಮಗಾರಿಯ ವಿಸ್ತೃತ ಯೋಜನಾ ವರದಿಗೆ ಮಂಜೂರಾತಿ ದೊರೆತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ ಎಂದು ಮುಖ್ಯಂಮತ್ರಿ ಎಚ್.ಡಿ.ಕುಮಾರ್ ಸ್ವಾಮಿ ಅವರು ಶಾಸಕರ ಮತ್ತೊಂದು ಪ್ರಶ್ನೆಗೆ ಲಿಖಿತ ಉತ್ತರ ನೀಡಿದರು.

ಯೋಜನೆಯಡಿ ಗ್ರಾಮಿಉಣ ಮನೆಗಳ ವಿದ್ಯದ್ದೀಕರಣಕ್ಕೆ 233 ಫಲಾನುಭವಿಗಳನ್ನು ಗುರುತಿಸಲಾಗಿದ್ದು,231 ಫಲಾನುಭವಿಗಳಮನೆಗೆ ಈಗಾಗಲೇ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ.ಯೋಜನೆ ಮುಕ್ತಾಯ ಹಂತದಲ್ಲಿದ್ದು,ಡಿ.31 ರ ಒಳಗೆ ಪೂರ್ಣ ಗೊಳಿಸಲಾಗುವುದು ಎಂದು ಸಿಎಂ ಅವರು ಶಾಸಕ ರಾಜೇಶ್ ನಾಯ್ಕ್ ಅವರ ಪ್ರಶ್ನೆಗೆ ಉತ್ತರಿಸಿದ್ದಾರೆ.

ಪಿಲಾತಬೆಟ್ಡು ಪ.ಪೂ.ಕಾಲೇಜಿನ ಉಪನ್ಯಾಸಕರ ಹುದ್ದೆ :

ಜಾಹೀರಾತು

ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಪ.ಪೂ.ಕಾಲೇಜಿನ ಉಪನ್ಯಾಸಕರ ಹುದ್ದೆ ಸಹಿತ ಸ್ಥಳಾಂತರಿಸಿರುವುದು  ಸರಕಾರದ ಗಮನದಲ್ಲಿದ್ದು, ಪ್ರಸ್ತುತ ಇಂಗ್ಲೀಷ್ ಮತ್ತು ಅರ್ಥ ಶಾಸ್ತ್ರದ ಉಪನ್ಯಾಸಕರು ಬಿ.ಇಡಿ ವ್ಯಾಸಂಗಕ್ಕೆ ತೆರಳಿದ್ದಾರೆ. ಈ ವ್ಯಾಸಂಗ ಮುಗಿದ ಬಳಿಕ ಕಾಲೇಜಿನ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಶಾಸಕ ರಾಜೇಶ್ ನಾಯ್ಕ್ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ್ದಾರೆ.ಕನ್ನಡ ,ರಾಜ್ಯಶಾಸ್ತ್ರ ಮತ್ತುವಾಣಿಜ್ಯಶಾಸ್ತ್ರ ಉಪನ್ಯಾಸಕರ ಹುದ್ದೆಗಳಿಗೆ ಕಾಲೇಜು ಅಭಿವೃದ್ದಿ ಸಮಿತಿ ಉಪನ್ಯಾಸಕರನ್ನು ನೇಮಕಮಾಡಿದ್ದು,ವಿದ್ಯಾರ್ಥಿಗಳ ಪಾಠ ಪ್ರವಚನಗಳಿಗೆ ತೊಂದರೆಯಾಗದಂತೆ ಕ್ರಮ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಶಾಸಕರ ಪ್ರಶ್ನೆಗೆ ಉತ್ತರಿಸಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಂಟ್ವಾಳದಲ್ಲಿಲ್ಲ ಲೋ ಓಲ್ಟೇಜ್ – ರಾಜೇಶ್ ನಾಯ್ಕ್ ಪ್ರಶ್ನೆಗೆ ಸಿಎಂ ಉತ್ತರ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*