ಪ್ರಮುಖ ಸುದ್ದಿಗಳು

ಸಿಪಿಸಿಆರ್ ಐ ಸ್ಥಳಾಂತರ ಬೇಡ: ಕೇಂದ್ರ ಸಚಿವರಿಗೆ ರೈ ಮನವಿ

ಕಡಬ ತಾಲೂಕಿನ ಬಿಳಿನೆಲೆ ಗ್ರಾಮದಲ್ಲಿರುವ ಐಸಿಎಆರ್ – ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ ಸಿಪಿಸಿಆರ್ ಐ ಸಂಶೋಧನಾ ಕೇಂದ್ರ ಮತ್ತು ಅಂತಾರಾಷ್ಟ್ರೀಯ ತೆಂಗು ವಂಶಾಭಿವೃದ್ಧಿ ಬ್ಯಾಂಕ್ ಮುಚ್ಚಬಾರದು ಮತ್ತು ಸ್ಥಳಾಂತರಗೊಳ್ಳಬಾರದು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಕೇಂದ್ರ ಕೃಷಿ ಸಚಿವ ರಾಧಾಮೋಹನ್ ಅವರಿಗೆ ಮನವಿ ಮಾಡಿದ್ದಾರೆ.

ಜಾಹೀರಾತು

ಬುಧವಾರ ಸಚಿವರನ್ನು ನವದೆಹಲಿಯಲ್ಲಿರುವ ಕಚೇರಿಯಲ್ಲಿ ಭೇಟಿಯಾದ ಅವರು, ಸಿಪಿಸಿಆರ್ ಐನ ಈ ಕೇಂದ್ರ ಕೃಷಿಕರಿಗೆ ವರದಾನವಾಗಿದೆ. ಮುಂದಿನ ತಲೆಮಾರಿಗಾಗಿ ಬೇರೆ ಬೇರೆ ದೇಶದ ಸುಮಾರು 455 ತೆಂಗಿನ ತಳಿಗಳನ್ನು ಸಂರಕ್ಷಿಸಲಾಗಿದ್ದು, ಇಲ್ಲಿ ರತಾಜ್ಯ, ರಾಷ್ಟ್ರೀಯ ಸಂಶೋಧನೆಗೆ ವಿದ್ಯಾರ್ಥಿಗಳಿಗೆ ಮತ್ತು ಕೃಷಿಕರಿಗೆ ನೆರವಾಗುತ್ತಿದೆ. ಈ ಸಂಸ್ಥೆಯನ್ನು ನಂಬಿದ ಸಾವಿರಾರು ಕೃಷಿಕರು ಬಿಳಿನೆಲೆ ಗ್ರಾಮದಲ್ಲಿ ಬದುಕು ಕಟ್ಟಿಕೊಂಡಿದ್ದು, ಇದು ನೂರಾರು ಕುಟುಂಬದ ಜೀವನಾಡಿಯಾಗಿದೆ. ಹೀಗಿದ್ದ ಸಂದರ್ಭ ಸ್ಥಳಾಂತರಗೊಂಡರೆ ಎಲ್ಲರಿಗೂ ಸಮಸ್ಯೆಯಾಗಲಿದೆ ಎಂದು ವಿವರಿಸಿದರು. ಇದೇ ಸಂದರ್ಭ ಲೋಕಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಸಹಿತ ಪ್ರಮುಖರು ಪ್ರತ್ಯೇಕವಾಗಿ ಕೃಷಿ ಸಚಿವರಿಗೆ ಮನವಿ ಮೂಲಕ ಕೇಂದ್ರ ಸ್ಥಳಾಂತರಗೊಳ್ಳದಂತೆ ಒತ್ತಾಯಿಸಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ