ನಾಟಕ

ಗಾಂಧಿ 150 – ಬಂಟ್ವಾಳ ತಾಲೂಕಿನಾದ್ಯಂತ ನಾಟಕ ಯಶಸ್ವಿ ಪ್ರದರ್ಶನ

ರೋಟರಿ ಕ್ಲಬ್ ಬಂಟ್ವಾಳ ಸುವರ್ಣವರ್ಷಾಚರಣೆ ನಿಮಿತ್ತ ಬೊಳುವಾರು ಮಹಮ್ಮದ್ ಕುಞಿಯವರ ಪಾಪು ಗಾಂಧಿ ಬಾಪು ಆದ ಕಥೆ ಎಂಬ ಕೃತಿಯನ್ನು ಡಾ.ಶ್ರೀಪಾದ್ ಭಟ್ ನಿರ್ದೇಶನದಲ್ಲಿ ಪಾಪು-ಬಾಪುನಾಟಕವನ್ನು ತಾಲೂಕಿನಾದ್ಯಂತ ಪ್ರದರ್ಶಿಸಿತು.

ಜಾಹೀರಾತು

ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಈ ತಂಡ ಪೂಂಜಾಲಕಟ್ಟೆ ಸರ್ಕಾರಿ ಪದವಿಪೂರ್ವ ಕಾಲೇಜು, ಸಿದ್ದಕಟ್ಟೆ ಸರ್ಕಾರಿ ಪ್ರೌಢಶಾಲೆ, ವಗ್ಗದ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜು ಸಭಾಂಗಣ, ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆ, ಬಂಟ್ವಾಳ ಎಸ್‌ವಿಎಸ್ ಕಾಲೇಜಿನಲ್ಲಿ ಮತ್ತು ಮೇಲ್ಕಾರ್ ಪದವಿಪೂರ್ವ ಕಾಲೇಜಿನಲ್ಲಿ ಮತ್ತು ಬಿ.ಸಿ.ರೋಡಿನ ರೋಟರಿ ಸಭಾಂಗಣದಲ್ಲಿ ಪ್ರದರ್ಶನ ನೀಡಿತು.

ಜಾಹೀರಾತು

ಕೊನೆಯ ಪ್ರದರ್ಶನವನ್ನು ಬಿ.ಸಿ.ರೋಡಿನ ರೋಟರಿ ಸಭಾಂಗಣದಲ್ಲಿ ನೀಡಿತು. ದ.ಕ.ಜಿಲ್ಲೆ ಮತ್ತು ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಸಹಯೋಗದಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ಹಿರಿಯ ರಂಗಕರ್ಮಿ, ನಿವೃತ್ತ ಮುಖ್ಯೋಪಾಧ್ಯಾಯ ಮಹಾಬಲೇಶ್ವರ ಹೆಬ್ಬಾರ್ ಚಾಲನೆ ನೀಡಿದರು.

ಈ ಸಂದರ್ಭ ರೋಟರಿ ಕ್ಲಬ್ ಬಂಟ್ವಾಳ ಸುವರ್ಣ ವರ್ಷಾಚರಣೆ ಸಮಿತಿ ಅಧ್ಯಕ್ಷ ಡಾ. ರಮೇಶಾನಂದ ಸೋಮಯಾಜಿ, ರೋಟರಿ ಕ್ಲಬ್ ಬಂಟ್ವಾಳ ಅಧ್ಯಕ್ಷ ಮಂಜುನಾಥ ಆಚಾರ್ಯ, ರೋಟರಿ ಕ್ಲಬ್ ಕಾರ್ಯದರ್ಶಿ ಶಿವಾನಿ ಬಾಳಿಗಾ, ಆ್ಯನ್ಸ್ ಅಧ್ಯಕ್ಷೆ ವಿದ್ಯಾ ಎ.ರೈ, ರಂಗಾಸಕ್ತ ಸುಂದರ ರಾವ್, ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹರೀಶ ಮಾಂಬಾಡಿ, ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮಶಾಲಾ ಆಡಳಿತಾಧಿಕಾರಿ ಸಿ.ಶ್ರೀಧರ್, ಉಪಸ್ಥಿತರಿದ್ದರು. ಗಾಂಧಿ ರಂಗಪಯಣದ ದಕ್ಷಿಣ ಕನ್ನಡ ಜಿಲ್ಲೆಯ ಸಂಚಾಲಕ, ರಂಗನಿರ್ದೇಶಕ ಮೌನೇಶ ವಿಶ್ವಕರ್ಮ ಕಾರ್ಯಕ್ರಮದ ಉದ್ದೇಶವನ್ನು ಹೇಳಿದರು.

ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲಾ ವಿದ್ಯಾರ್ಥಿಗಳಿಂದ, ಮೌನೇಶ ವಿಶ್ವಕರ್ಮ ನಿರ್ದೇಶನದ ಡಿಜಿಟಲ್ ಮಾಯೆ ಹಾಗೂ ವಾರ್ತಾ ಇಲಾಖೆಯ ಗಾಂಧಿ ರಂಗಪಯಣ 150 ತಂಡದಿಂದ ಗಾಂಧಿ ಬದುಕಿನ ಘಟ್ಟಗಳನ್ನು ಮನವರಿಕೆ ಮಾಡುವ ಛಾಯಾಚಿತ್ರಗಳ ಪ್ರದರ್ಶನವನ್ನೂ ಏರ್ಪಡಿಸಲಾಗಿತ್ತು.

ಜಾಹೀರಾತು

ಕರ್ನಾಟಕ ವಾರ್ತಾ ಮತ್ತು ಸಂಪರ್ಕ ಇಲಾಖೆಯ ಆಶ್ರಯದಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ, ಲೋಕೋಪಯೋಗಿ ಇಲಾಖೆಯ ಸಹಯೋಗದಲ್ಲಿ ರಾಜ್ಯಾದ್ಯಂತ ಗಾಂಧಿ 150 ರಂಗಪಯಣ ತಂಡ ಪ್ರದರ್ಶನ ನೀಡುತ್ತಿದೆ. ಗಾಂಧೀ ಬಾಲ್ಯದಲ್ಲಿನ ತುಂಟಾಟ..ಸುಳ್ಳುತನ..ನಂತರ ದ ಆಫ್ರಿಕಕ್ಕೆ ಅಧ್ಯಯನಕ್ಕೆ ತೆರಳಿದ್ದು..ಅಲ್ಲಿನ ಸಂಸ್ಕೃತಿಗೆ ಆಕರ್ಷಿತನಾಗಿ ಅದನ್ನ ಅನುಸರಿಸಿದ ವಿಚಾರ, ಅಸ್ಪೃಶ್ಯತೆಯ ಅರಿವು, ದೇಶವಿಭಜನೆ ವಿಚಾರದಲ್ಲಿನ ಅಸಹಾಯಕತೆಯನ್ನು ನಾಟಕ ತೋರಿಸಿಕೊಟ್ಟಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ