ಕಡೇಶಿವಾಲಯ ಹೈಸ್ಕೂಲಿನ 10ನೇ ತರಗತಿ ವಿದ್ಯಾರ್ಥಿನಿ ಯಶಸ್ವಿ ರಾಜಸ್ತಾನದ ಜೈಪುರದಲ್ಲಿ ನಡೆದ 21ನೇ ರಾಷ್ಟ್ರೀಯ ಸೀನಿಯರ್ ಮತ್ತು ಜ್ಯೂನಿಯರ್ ಚೆಸ್ ಚಾಂಪಿಯನ್ ಶಿಪ್ ಫಾರ್ ಡೆಫ್ ನಲ್ಲಿ ಮೊದಲನೇ ಸ್ಥಾನ ಗಳಿಸಿದ್ದಾಳೆ.
ಶ್ರವಣಶಕ್ತಿ ದೋಷ ಉಳ್ಳವರಿಗಾಗಿ ಡಿ.1ರಿಂದ ೫ರವರೆಗೆ ಈ ಪಂದ್ಯಾಕೂಟ ನಡೆದಿತ್ತು. ಇಂಗ್ಲೆಂಡ್ ನ ಮ್ಯಾಂಚೆಸ್ಟರ್ ನಲ್ಲಿ ಶ್ರವಣಶಕ್ತಿಯ ಕೊರತೆ ಇರುವವರಿಗಾಗಿ ನಡೆದ ಅಂತಾರಾಷ್ಟ್ರೀಯ ಚೆಸ್ ಟೂರ್ನಿಯ ಮಹಿಳಾ ವಿಭಾಗದಲ್ಲಿ ಭಾಗವಹಿಸಿದ ಪುತ್ತೂರು ಜೀನಿಯಸ್ ಚೆಸ್ ಸ್ಕೂಲ್ ವಿದ್ಯಾರ್ಥಿನಿಯಾಗಿರುವ ಈಕೆ ಕಂಚಿನ ಪದಕ ಗಳಿಸಿದ್ದಳು.ಬಂಟ್ವಾಳ ಎಸ್.ವಿ.ಎಸ್. ಕಾಲೇಜಿನ ಪ್ರಾಣಿಶಾಸ್ತ್ರ ವಿಭಾಗದ ಲ್ಯಾಬ್ ಅಸಿಸ್ಟೆಂಟ್ ತಿಮ್ಮಪ್ಪ ಮೂಲ್ಯ ಮತ್ತು ಬಂಟ್ವಾಳ ತಾಲೂಕಿನ ಸರಕಾರಿ ಶಾಲಾ ಶಿಕ್ಷಕಿ ಯಶೋಧಾ ದಂಪತಿಯ ಇಬ್ಬರು ಹೆಣ್ಣುಮಕ್ಕಳಲ್ಲಿ ಎರಡನೆಯವಳು. ಈಕೆ ಕುರಿತು ಬಂಟ್ವಾಳನ್ಯೂಸ್ ವಿವರವಾದ ಲೇಖನ ಪ್ರಕಟಿಸಿತ್ತು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…