ಮೃತ್ಯುಕೂಪಗಳಿನ್ನು ಔಟ್ ಆಫ್ ಡೇಂಜರ್

ಲೋಕೋಪಯೋಗಿ ಇಲಾಖೆಯಿಂದ ರಸ್ತೆ ಅಭಿವೃದ್ಧಿ, ಕಲ್ಲಡ್ಕವೀರಕಂಭ ಮಧ್ಯೆ ರಸ್ತೆ ಸದೃಢ

ಜಾಹೀರಾತು

ಕಲ್ಲಡ್ಕದಿಂದ ಕೇರಳದ ಚೆರ್ಕಳವರೆಗಿನ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಅಗಲಗೊಳಿಸಲು ಇನ್ನೂ ಮುಹೂರ್ತ ಕೂಡಿಬಂದಿಲ್ಲ. ಅಲ್ಲಿಯವರೆಗೆ ಇದರ ನಿರ್ವಹಣೆ ಮಾಡುವ ಹೊಣೆ ಹೊತ್ತಿರುವ ಲೋಕೋಪಯೋಗಿ ಇಲಾಖೆ ಗಂಭೀರ ಸಮಸ್ಯೆ ಇದ್ದ ಜಾಗವನ್ನು ಅಪಾಯಮುಕ್ತಗೊಳಿಸಲು ಹೊರಟಿದೆ.

ಮಾಜಿ ಸಚಿವ ರಮಾನಾಥ ರೈ ಅವರು ಕಳೆದ ವರ್ಷ ಕೋಡಪದವು ಸಮೀಪ ಮಜ್ಜೋಣಿ ಎಂಬಲ್ಲಿ ತೀರಾ ಅಪಾಯದ ಸ್ಥಿತಿಯಲ್ಲಿ ಪ್ರಾಣಬಲಿಗೆ ಕಾದಿರುವಂತಿದ್ದ ರಸ್ತೆಯ ದುರಸ್ತಿಗೆ 1 ಕೋಟಿ ರೂ ಮತ್ತು ವೀರಕಂಭ ಕಲ್ಲಡ್ಕ ಮಧ್ಯೆ 2.5 ಕಿ.ಮೀ. ದೂರದ ರಸ್ತೆ ಅಭಿವೃದ್ಧಿಗೆ 3 ಕೋಟಿ ರೂ ಅನುದಾನವನ್ನು ಅಪೆಂಡಿಕ್ಸ್ ಮೂಲಕ ನಿಗದಿಗೊಳಿಸಿದ್ದರು. ಲೋಕೋಪಯೋಗಿ ಇಲಾಖೆ ಸಂಬಂಧ ಕೆಲಸಕಾರ್ಯಗಳನ್ನು ಆರಂಭಿಸಿತ್ತು.

ಇದೀಗ ಹಲವು ಅಪಘಾತಗಳ ಮೂಲಕ ಹಲವು ಪ್ರಾಣಗಳನ್ನು ಬಲಿ ತೆಗೆದುಕೊಂಡ ಕಲ್ಲಡ್ಕಕಾಂಞಂಗಾಡ್ ಹೆದ್ದಾರಿಯ ಮಜ್ಜೋಣಿಯಲ್ಲಿ ಬಂಡೆಗಳನ್ನು ಒಡೆದು ರಸ್ತೆ ವಿಸ್ತರಣೆ ಮಾಡುವ ಮೂಲಕ ರಸ್ತೆ ಸದೃಢವಾಗಿದೆ.

ಕಲ್ಲಡ್ಕಕಾಂಞಂಗಾಡ್ ಅಂತರಾಜ್ಯ ಹೆದ್ದಾರಿಯಲ್ಲಿ ಬರುವ ವಿಟ್ಲದಿಂದ ಕಿ.ಮೀ ದೂರದಲ್ಲಿರುವ ಮಜ್ಜೋನಿ ಎಂಬಲ್ಲಿ ಇರುವ ಕಿರಿದಾದ ರಸ್ತೆಯಲ್ಲಿ ಸುಗಮವಾಗಿ ವಾಹನಗಳು ಸಂಚಾರ ಮಾಡಲು ಸಾಧ್ಯವಾಗುತ್ತಿಲ್ಲ. ಒಂದು ಬದಿಯಲ್ಲಿ ಅರಣ್ಯ ಇಲಾಖೆಗೆ ಸಂಬಂಧಿಸಿದ ಕಾಡು ಅದರ ಸಮೀಪ ಬೃಹತಾಕಾರದ ಬಂಡೆಗಳು ಇನ್ನೊಂದು ಬದಿಯಲ್ಲಿ ಅಪಾಯಕಾರಿ ಪ್ರಪಾತ ಅದರ ಕೆಳಗಡೆ ಮನೆಗಳಿವೆ. ಇದರಿಂದ ರಸ್ತೆ ಕಿರಿದಾಗಿದ್ದು, ಏಕಮುಖವಾಗಿ ಸಂಚಾರ ಮಾಡಲಷ್ಟೇ ಸಾಧ್ಯವಾಗುತ್ತಿತ್ತು.

ಬದಲಾದ ರಸ್ತೆ:

ರಸ್ತೆ ಅಗಲಗೊಳಿಸಿ, ಗಟ್ಟಿಗೊಳಿಸುವ ಕಾರ್ಯ ಅಷ್ಟೊಂದು ಸುಲಭವಾಗಲಿಲ್ಲ. ಹೀಗಾಗಿ ಮೊದಲಿಗೆ ಬಂಡೆಗಳನ್ನು ಒಡೆಯುವ ಕಾಮಗಾರಿ ಪ್ರಾರಂಭಿಸಲಾಗಿತ್ತು. ಬಂಡೆ ಹೊಡೆದು ಅಲ್ಲಿ ಕಾಂಕ್ರೀಟ್ ಹಾಕಲಾಗಿತ್ತು. ಇದರ ನಡುವೆ ವಿಧಾನ ಸಭೆ ಚುನಾವಣೆ ಘೋಷಣೆಯಾಯಿತು. ಇದರಿಂದ ಕಾಮಗಾರಿ ಸ್ಥಗಿತಗೊಂಡಿತು. ಚುನಾವಣೆ ಮುಗಿಯುತ್ತಿದ್ದಂತೆ ಮಳೆ ಪ್ರಾರಂಭಗೊಂಡಿದ್ದರಿಂದ ಕಾಮಗಾರಿಗೆ ಅಡ್ಡಿಯಾಯಿತು. ಮಳೆ ನಿಲ್ಲುತ್ತಿದ್ದಂತೆ ಕಾಮಗಾರಿಗೆ ವೇಗ ದೊರಕಿತು. ರಸ್ತೆ ಬದಿಯ ೨ಮೀ ಅಗಲಗೊಳಿಸಿ ವಿಸ್ತರಿಸಲಾಯಿತು. ಮೀಟರ್ ಉದ್ದದ ವರೆಗೆ ಡಾಂಬರೀಕರಣ ನಡೆಸಲಾಯಿತು. ಇದೀಗ ಅಭಿವೃದ್ಧಿಗೊಂಡ ರಸ್ತೆ ಸುಗಮ ಸಂಚಾರಕ್ಕೆ ಸಿದ್ಧಗೊಂಡಿದೆ.

ಕಳೆದ ವರ್ಷ ಬಜೆಟ್ ಅನುಬಂಧಯಲ್ಲಿ ರಸ್ತೆಗೆ 1 ಕೋಟಿ ರೂ ಒದಗಿಸಲಾಗಿತ್ತು. ಬಂಡೆ ಒಡೆದು ತೆಗೆದು ರಸ್ತೆ ಲೆವೆಲ್ ಗಿಂತ ಬಂಡೆಯನ್ನು ತಗ್ಗಿಸಿ ಇಂಚು ಕಾಂಕ್ರೀಟ್ ಹಾಕಲಾಗಿದೆ. ರಾತ್ರಿ ಪ್ರಯಾಣಿಕರಿಗೆ ಸುರಕ್ಷತೆಗಾಗಿ ಕ್ಯಾಟ್ ಹಾಕಲಾಗುವುದು. ವೀರಕಂಭಕಲ್ಲಡ್ಕ ಮಧ್ಯೆ 2.5 ಕಿ.ಮೀ. ರಸ್ತೆ ಅಗಲೀಕರಣವನ್ನೂ ನಡೆಸಲಾಗುವುದು ಎನ್ನುತ್ತಾರೆ ಲೋಕೋಪಯೋಗಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ವೈ.ಉಮೇಶ್ ಭಟ್

 

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಮೃತ್ಯುಕೂಪಗಳಿನ್ನು ಔಟ್ ಆಫ್ ಡೇಂಜರ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*