ಬಂಟ್ವಾಳ

ಅಗ್ರಾರ್ ಚರ್ಚ್‌ನಲ್ಲಿ ಸಭಾಂಗಣ ಉದ್ಘಾಟನೆ

ಅಗ್ರಾರ್ ನಲ್ಲಿ ನೂತನವಾಗಿ ನಿರ್ಮಾಣಗೊಂಡ ಹೋಲಿಸೇವಿಯರ್ ಸಭಾಂಗಣ ದ ಉದ್ಘಾಟನಾ ಸಮಾರಂಭವನ್ನು ಅಗ್ರಾರ್ ಚರ್ಚ್ ವಠಾರದಲ್ಲಿ ವಿಶ್ರಾಂತ ಬಿಷಪ್ ರಾದ ಅತಿವಂದನೀಯ ರೆ.ಡಾ.ಅಲೋಶಿಯಸ್ ಪಾವ್ಲ್ ಡಿಸೋಜ ರವರು ನೆರವೇರಿಸಿದರು.

ಜಾಹೀರಾತು

ಅವರು ಸಭಾಂಗಣ ಶುದ್ದೀಕರಣಗೊಳಿಸಿ ದೇವರ ಆಶೀರ್ವಾದಗಳು ಭಕ್ತಾದಿಗಳಿಗೆ ದೊರೆಯಲಿ ಎಂದು ಹರಸಿ ಸಭಾಂಗಣವು ಎಲ್ಲಾ ಕ್ಷೇತ್ರದವರಿಗೂ ಎಲ್ಲಾ ಧರ್ಮದವರಿಗೂ ಉಪಯುಕ್ತ ವಾಗಲೆಂದು ಹಾರೈಸಿದರು.

ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಸಚಿವ ಬಿ.ರಮಾನಾಥ ರೈ ನೆರವೇರಿಸಿ ಅತೀ ಕಡಿಮೆ ಸಮಯದ ಅವಧಿಯಲ್ಲಿ ನಿರ್ಮಾಣಗೊಂಡ ಸಭಾಂಗಣ ದ ಕೆಲಸಕಾರ್ಯಗಳನ್ನು ಶ್ಲಾಘಿಸಿದರು.

ಸಭಾಂಗಣದ ಕೆಲಸದಲ್ಲಿ ವಿವಿಧ ಗುತ್ತಿಗೆ ನಿರ್ವಹಿಸಿದವರಿಗೆ ಸನ್ಮಾನಿಸಿದ ಶಾಸಕ ರಾಜೇಶ್ ನಾಯಕ್ ಉಳಿಪಾಡಿಗುತ್ತು ಮಾತನಾಡಿ ಹಲವಾರು ಅಡಚಣೆಗಳಿದ್ದರೂ ದೈವಾನುಗ್ರಹದಿಂದ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ಹಾಗೂ ಶಾಸಕನಾಗಿ ಪ್ರಥಮ ವಾಗಿ ಇಲ್ಲಿ ಬರಲು ಸಾಧ್ಯವಾಯಿತು. ಶಾಂತಿ ಮತ್ತು ಅನ್ಯೋನ್ಯತೆ ಇದ್ದರೆ ಪ್ರಗತಿ ಸಾಧಿಸಲು ಸಾಧ್ಯ ಎಂದು ನುಡಿದರು.

ಜಾಹೀರಾತು

ವೇದಿಕೆಯಲ್ಲಿ ಮಂಗಳೂರಿನ ಎಸ್‌ಆರ್‌ಎ ಪ್ರೊವಿನ್ಸಿಯಲ್ ಸುಪೀರಿಯರ್ ವಂದನೀಯ ಭಗಿನಿ ಝೀನಾ ಡಿಸೋಜ , ಪುರಸಭಾ ಸದಸ್ಯ ಗಂಗಾಧರ ಪೂಜಾರಿ, ಕೋ-ಓರ್ಡಿನೇಟರ್ ಫೆಡ್ರಿಕ್ ಡಿಸೋಜ ಉಪಸ್ಥಿತರಿದ್ದರು. ಪಾಲನಾ ಮಂಡಳಿ ಉಪಾಧ್ಯಕ್ಷ ಪಿಯೂಸ್ ಎಲ್ ರೋಡ್ರಿಗಸ್ ಪ್ರಸ್ತಾವನೆಗೈದರು. ಧರ್ಮಗುರು ರೆ.ಫಾ.ಗ್ರೆಗರಿ ಡಿಸೋಜ ಸ್ವಾಗತಿಸಿದರು. ಪಾಲನಾ ಮಂಡಳಿ ಕಾರ್ಯದರ್ಶಿ ವಿನ್ಸೆಂಟ್ ಕಾರ್ಲೋ ವಂದಿಸಿದರು. ಇಗ್ನೇಷಿಯಸ್ ಡಿಸೋಜ ಮತ್ತು ಆಡ್ರಿನ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ