ಬಂಟ್ವಾಳ

ದೇಶಕ್ಕೆ ಒಳಿತು ಮಾಡುವ ಮನಸ್ಸಿದ್ದರೆ ಭಾರತ ನಂ.1: ಯು.ಟಿ.ಖಾದರ್

ದೇಶ ಹಾಗೂ ಸಮಾಜಕ್ಕೆ ಒಳತಾಗುವ ಕೆಲಸವನ್ನು ಮಾಡುವ ಮನಸ್ಸು ನಮ್ಮಲ್ಲಿದ್ದರೆ ಭಾರತ ವಿಶ್ವದಲ್ಲಿಯೇ ಅತ್ಯುನ್ನತ ಸ್ಥಾನಕ್ಕೆ ಏರಲು ಸಾಧ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಹೇಳಿದರು.

ಜಾಹೀರಾತು

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಮತ್ತು ಚಿಣ್ಣರ ಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ ಬಂಟ್ವಾಳ ಇದರ ಆಶ್ರಯದಲ್ಲಿ ನಡೆಯುತ್ತಿರುವ ಕರಾವಳಿ ಕಲೋತ್ಸವದ ಮೂರನೇ ದಿನದ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಜಾನಪದ, ಕಲೆ, ಆಚಾರ ವಿಚಾರ ಸಂಸ್ಕೃತಿಗಳನ್ನು ಉಳಿಸುವುದರ ಜೊತೆಗೆ  ಕಲೋತ್ಸವದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಪ್ರತಿಭೆಗಳಿಗೆ ಅವಕಾಶವನ್ನು ನೀಡುವ ಕಾರ್ಯವನ್ನು ಚಿಣ್ಣರ ಲೋಕ ಸೇವಾ ಟ್ರಸ್ಟ್ ಮಾಡಿಕೊಂಡು ಬರುತ್ತಿರುವುದು ಅಭಿನಂದನೀಯ ಎಂದರು.

ಕರಾವಳಿ ಕಲೋತ್ಸವದ ಅಧ್ಯಕ್ಷ ಸುದರ್ಶನ ಜೈನ್ ಸಭಾಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಜಗನ್ನಾಥ ಚೌಟ, ಜಿಲ್ಲಾ ಪಂಚಾಯತಿ ಸದಸ್ಯ ಶಾಹುಲ್ ಹಮೀದ್ತಹಶೀಲ್ದಾರ್ ಪುರಂದರ ಹೆಗ್ಡೆಗೋಲ್ಡನ್ ಪಾರ್ಕ್  ಅಸೋಸಿಯೇಟ್ಸ್ ಪಾಲುದಾರ ವಲ್ಲಬೇಶ್ ಶೆಣೈ, ಒಡಿಯೂರು ಗ್ರಾಮ ವಿಕಾಸ ಯೋಜನೆಯ ಪ್ರಧಾನ ಸಂಚಾಲಕ ತಾರಾನಾಥ ಕೊಟ್ಟಾರಿ, ವಕೀಲರ ಸಂಘದ ಮಾಜಿ ಅಧ್ಯಕ್ಷ ಉಮೇಶ್ ಕುಮಾರ್ ವೈ, ನವೋದಯ ಸ್ವಸಹಾಯ ಗುಂಪುಗಳ ಮುಖ್ಯ ಪ್ರಬಂಧಕಿ ಪೂರ್ಣಿಮ ಶೆಟ್ಟಿ, ಚಿತ್ರನಟಿ ವಿನುತಾ ಡಿಸೋಜಾ, ಬಾಲ ಪ್ರತಿಭೆ ದೀಕ್ಷಾ ಡಿ. ರೈ, ಕಾಮಿಡಿ ಕಿಲಾಡಿಯ ಧೀರಜ್ ನೀರುಮಾರ್ಗ , ಲಿಯೋ ಫೆರ್ನಾಂಡೀಸ್, ಅಶೋಕ್ ಶೆಟ್ಟಿ ಸರಪಾಡಿ, ರಿಯಾಝ್ ಬಂಟ್ವಾಳ ಮೊದಲಾದವರು ಹಾಜರಿದ್ದರು.

ವಿದ್ವಾನ್ ವೆಂಕಟಕೃಷ್ಣ ಭಟ್, ಬಾಲಕೃಷ್ಣ ಶೆಟ್ಟಿ ಮಂಚಿ, ಪ್ರಜ್ವಲ್ ಕುಮಾರ್ ಮಣ್ಣಗುಡ್ಡೆ, ಅರುಣ್ ಕುಮಾರ್ ಧರ್ಮಸ್ಥಳ, ಸುದೀಪ್ ಕೆರ್ಕರಾ ಅವರಿಗೆ ಗುರುವಂದನೆ ಸಲ್ಲಿಸಲಾಯಿತು.

ನಿರ್ದೇಶಕ ಲೋಕೇಶ್ ಸುವರ್ಣ ಸ್ವಾಗತಿಸಿದರು, ರಾಜೇಶ್ ಕೊಟ್ಟಾರಿ ನಿರೂಪಿಸಿದರು. ಪ್ರಧಾನ ಸಂಚಾಲಕ ಮೋಹನದಾಸ ಕೊಟ್ಟರಿ ಉಪಸ್ಥಿತರಿದ್ದರು. ಇದಕ್ಕ್ಕೂ ಮುಂಚೆ ರೋಟರಿ ಕ್ಲಬ್ ಬಂಟ್ವಾಳದ ಸಂಯುಕ್ತ ಆಶ್ರಯದಲ್ಲಿ ರಾಜ್ಯಮಟ್ಟದ ನೃತ್ಯ ಪ್ರದರ್ಶನ ನಡೆಯಿತು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

6 hours ago