ಬಂಟ್ವಾಳ

ಬಾಂಬಿಲ ಮುಬಾರಕ್ ಜುಮಾ ಮಸೀದಿ ವತಿಯಿಂದ ಸಾಮೂಹಿಕ ವಿವಾಹ

ಮುಬಾರಕ್ ಜುಮಾ ಮಸೀದಿ, ಬಾಂಬಿಲ ಇದರ ವತಿಯಿಂದ ದಾರುಸ್ಸಲಾಂ ಮದ್ರಸ ಮದ್ವಾ ಹಾಗೂ ಅನ್ಸಾರುಲ್ ಮುಸ್ಲಿಮೀನ್ ಇದರ ಜಂಟಿ ಆಶ್ರಯದಲ್ಲಿ ಬಡಹೆಣ್ಣುಮಕ್ಕಳ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮ . 6ರಂದು ಬೆಳಿಗ್ಗೆ 9ಕ್ಕೆ ಬಾಂಬಿಲ ಜಮಾಅತಿನ ಗೌರವಾಧ್ಯಕ್ಷ ಅಲ್ಹಾಜ್ ತ್ವಾಕ ಅಹ್ಮದ್ ಮುಸ್ಲಿಯಾರ್ ಅವರ ನೇತೃತ್ವದಲ್ಲಿ ಬಾಂಬಿಲ ಮಸೀದಿಯ ವಠಾರದಲ್ಲಿ ಜರಗಲಿದೆ ಎಂದು ಮಸೀದಿ ಆಡಳಿತದ ಅಧ್ಯಕ್ಷ ಬಿ.ಎಂ.ಬಾವ ಮುಸ್ಲಿಯಾರ್ ಹೇಳಿದ್ದಾರೆ.

ಜಾಹೀರಾತು

ಬುಧವಾರ ಬಿ.ಸಿ.ರೋಡಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಕೆಜೆಯು ಉಪಾಧ್ಯಕ್ಷ ಕೆ.ಪಿ.ಅಬ್ದುಲ್ ಜಬ್ಬಾರ್ ಉಸ್ತಾದ್ ಮಿತ್ತಬೈಲ್ ಅವರು ಅಧ್ಯಕ್ಷತೆ ವಹಿಸುವರು. . ಮತ್ತು ರಂದು ರಾತ್ರಿ ಧಾರ್ಮಿಕ ಮತಪ್ರಭಾಷಣ ನಡೆಯಲಿದೆ ಎಂದು ಹೇಳಿದರು.

ಬಾರಿ ಜಮಾಅತ್ ಮೂರು ಬಡ ಜೋಡಿಗಳನ್ನು ಗುರುತಿಸಿದ್ದೇವೆ. ವಧುವಿಗೆ ಪವನ್ ಚಿನ್ನ, ೩೦ ಸಾವಿರ ರೂ. ಮೌಲ್ಯದ ಉಡುಪು ಹಾಗೂ ವರನಿಗೆ ವಾಚ್, ಉಡುಪುಗಳನ್ನು ಆಡಳಿತ ಸಮಿತಿಯಿಂದ ಉಡುಗೊರೆಯಾಗಿ ನೀಡಲಿದ್ದೇವೆ. ಕಾರ್ಯಕ್ರಮಕ್ಕೆ ಸುಮಾರು ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆಯಿದ್ದು, ಮಧ್ಯಾಹ್ನ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದರು.

ಜಾಹೀರಾತು

ಬಾಂಬಿಲ ಕೇಂದ್ರ ಜುಮಾ ಮಸೀದಿಯ ಖತೀಬ್ ಎನ್.ಅಬ್ದುಲ್ ಬಶೀರ್ ಯಮಾನಿ ಕಾರ್ಯಕ್ರಮವನ್ನು ಉದ್ಘಾಟಿಸುವರು. ಮಿತ್ತಬೈಲ್ ಮಸೀದಿಯ ಖತೀಬ್ ಅಶ್ರಫ್ ಮುಖ್ಯ ಪ್ರಭಾಷಣ ಮಾಡುವರು. . ೫ರಂದು ಮಗರಿಬ್ ನಮಾಝಿನ ಬಳಿಕ ಪಯ್ಯಕ್ಕಿ ಉಸ್ತಾದ್ ಇಸ್ಲಾಮಿಕ್ ಅಕಾಡಮಿಶಮೀಮೇ ಮದೀನಾತಂಡದಿಂದ ಬುರ್ದಾ ಆಲಾಪನೆ ನಡೆಯಲಿದೆ. ಕಣ್ಣೂರು ಮಸೀರಿಯ ಮುದರ್ರಿಸ್ ಅನ್ಸಾರುದ್ದೀನ್ ಬುರ್ಹಾನಿ ಫೈಝಿ ಮುಖ್ಯ ಪ್ರಭಾಷಣ ಮಾಡುವರು ಎಂದು ಮಾಹಿತಿ ನೀಡಿದರು.

. ೬ರಂದು ಬೆಳಿಗ್ಗೆ ೯ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಕೇರಳದ ಎನ್.ಪಿ.ಎಂ.ಸೈಯದ್ ಜಲಾಲುದ್ದೀನ್ ತಂಙಳ್ ಏಝ್ಮಲ ಅವರು ದುಆಃ ನೆರವೇರಿಸುವರು. ಚೊಕ್ಕಬೆಟ್ಟುವಿನ ಯು.ಕೆ.ಅಬ್ದುಲ್ ಅಝೀಝ್ ದಾರಿಮಿ ಮುಖ್ಯ ಪ್ರಭಾಷಣ ಮಾಡುವರು ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮಸೀದಿ ಆಡಳಿತ ಸಮಿತಿಯ ಪದಾಧಿಕಾರಿಗಳಾದ ಬಿ.ಮುಸ್ತಫಾ, ಯೂಸುಫ್, ಆಸಿಫ್ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ