ಭಜನಾ ಮಂಡಳಿಗಳ ಸಮಾಲೋಚನಾ ಸಭೆ

ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್, ಬಂಟ್ವಾಳ ತಾಲೂಕು ಭಜನಾ ಪರಿಷತ್ ಮತ್ತು ತಾಲೂಕಿನ ಎಲ್ಲ ಭಜನಾ ಮಂಡಳಿಗಳು ಸಂಯುಕ್ತವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾರ್ಗದರ್ಶನದೊಂದಿಗೆ ತಾಲೂಕಿನ ಭಜನಾ ಮಂಡಳಿಗಳ ಸಮಾಲೋಚನಾ ಸಭೆ ಮತ್ತು ಬಂಟ್ಬಾಳ ತಾಲೂಕು ಭಜನಾ ಪರಿಷತ್ ಸಭೆಯು ಬಂಟ್ವಾಳದಲ್ಲಿ ಬುಧವಾರ ನಡೆಯಿತು.

ಜಾಹೀರಾತು

ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಅವರು ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಶ್ರದ್ಧೆ, ಭಕ್ತಿಯಿಂದ ಭಜನೆ ಮಾಡಿದಾಗ ನಮ್ಮ ಮನಸಿನಲ್ಲಿ ಪರಿವರ್ತನೆಯಾಗಳು ಸಾಧ್ಯ ಎಂದರು. ಮುಂದಿನ ದಿನಗಳಲ್ಲಿ ಡಾ.ವಿರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಧರ್ಮಸ್ಥಳ ದಲ್ಲಿ ಭಜನಾ ಸಭೆ ನಡೆಯಲಿದೆ ಎಂದರು.

ಭಜನಾ ಕರ್ತವ್ಯಗಳು, ಕ್ರಮ ಹಾಗೂ  ಸಂಸ್ಕೃತಿ  -ಸಂಸ್ಕಾರದ ಬಗ್ಗೆ ಮಾಹಿತಿ ನೀಡಿದರು. ಬಂಟ್ವಾಳ ತಾಲೂಕು ಭಜನಾ ಪರಿಷತ್ನ ಅಧ್ಯಕ್ಷ ಶಶಿಧರ್ ಅಧ್ಯಕ್ಷತೆ ವಹಿಸಿದ್ದರು.

ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಸಂಪನ್ಮೂಲಗಳ ವ್ಯಕ್ತಿಯಾಗಿ ಭಾಗವಹಿಸಿ ಮಾಹಿತಿ ನೀಡಿದರು. ಧರ್ಮಸ್ಥಳ ಭಜನಾ ಪರಿಷತ್ ನ ಅಧ್ಯಕ್ಷ ಬಾಲಕೃಷ್ಣ ಪಂಜ, ಸದಸ್ಯ ಶ್ರೀನಿವಾಸ್ ರಾವ್, ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಜಿಲ್ಲಾ ನಿರ್ದೇಶಕ ಚಂದ್ರಶೇಖರ್ ಕೆ., ಜನಜಾಗೃತಿ ವೇದಿಕೆ ಬಂಟ್ವಾಳ ತಾಲೂಕು ಅಧ್ಯಕ್ಷ ಪ್ರಕಾಶ್ ಕಾರಂತ, ಸದಸ್ಯ ಆನಂದ, ರವೀಂದ್ರ ಕಂಬಳಿ, ಹಿರಿಯ ವೈದ್ಯ ಬಿ.ವಿ.ವಸಂತ ಬಾಳಿಗ, ಕೇಂದ್ರ ಒಕ್ಕೂಟ ಸಮಿತಿಯ ಬಂಟ್ವಾಳ ತಾಲೂಕು ಅಧ್ಯಕ್ಷ ಸದಾನಂದ ನಾವೂರು, ಪುರಸಭಾ ಸದಸ್ಯ ಜನಾರ್ದನ ಚಂಡ್ತಿಮಾರ್ ಉಪಸ್ಥಿತರಿದ್ದರು.

ಜಾಹೀರಾತು

ಬಂಟ್ವಾಳ ವಲಯದ ಯೋಜನಾಕಾರಿ ಜಯಾನಂದ ಪಿ. ಸ್ವಾಗತಿಸಿ, ಸಿದ್ಧಕಟ್ಟೆ ವಲಯದ ಮೇಲ್ವಿಚಾರಕಿ ಹರಿಣಾಕ್ಷಿ ವಂದಿಸಿದರು. ಮೇಲ್ವಿಚಾರಕ ಶಶಿಧರ್ ನಿರೂಪಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಭಜನಾ ಮಂಡಳಿಗಳ ಸಮಾಲೋಚನಾ ಸಭೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*