ಬಂಟ್ವಾಳ

ಭಜನಾ ಮಂಡಳಿಗಳ ಸಮಾಲೋಚನಾ ಸಭೆ

ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್, ಬಂಟ್ವಾಳ ತಾಲೂಕು ಭಜನಾ ಪರಿಷತ್ ಮತ್ತು ತಾಲೂಕಿನ ಎಲ್ಲ ಭಜನಾ ಮಂಡಳಿಗಳು ಸಂಯುಕ್ತವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾರ್ಗದರ್ಶನದೊಂದಿಗೆ ತಾಲೂಕಿನ ಭಜನಾ ಮಂಡಳಿಗಳ ಸಮಾಲೋಚನಾ ಸಭೆ ಮತ್ತು ಬಂಟ್ಬಾಳ ತಾಲೂಕು ಭಜನಾ ಪರಿಷತ್ ಸಭೆಯು ಬಂಟ್ವಾಳದಲ್ಲಿ ಬುಧವಾರ ನಡೆಯಿತು.

ಜಾಹೀರಾತು

ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಅವರು ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಶ್ರದ್ಧೆ, ಭಕ್ತಿಯಿಂದ ಭಜನೆ ಮಾಡಿದಾಗ ನಮ್ಮ ಮನಸಿನಲ್ಲಿ ಪರಿವರ್ತನೆಯಾಗಳು ಸಾಧ್ಯ ಎಂದರು. ಮುಂದಿನ ದಿನಗಳಲ್ಲಿ ಡಾ.ವಿರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಧರ್ಮಸ್ಥಳ ದಲ್ಲಿ ಭಜನಾ ಸಭೆ ನಡೆಯಲಿದೆ ಎಂದರು.

ಭಜನಾ ಕರ್ತವ್ಯಗಳು, ಕ್ರಮ ಹಾಗೂ  ಸಂಸ್ಕೃತಿ  -ಸಂಸ್ಕಾರದ ಬಗ್ಗೆ ಮಾಹಿತಿ ನೀಡಿದರು. ಬಂಟ್ವಾಳ ತಾಲೂಕು ಭಜನಾ ಪರಿಷತ್ನ ಅಧ್ಯಕ್ಷ ಶಶಿಧರ್ ಅಧ್ಯಕ್ಷತೆ ವಹಿಸಿದ್ದರು.

ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಸಂಪನ್ಮೂಲಗಳ ವ್ಯಕ್ತಿಯಾಗಿ ಭಾಗವಹಿಸಿ ಮಾಹಿತಿ ನೀಡಿದರು. ಧರ್ಮಸ್ಥಳ ಭಜನಾ ಪರಿಷತ್ ನ ಅಧ್ಯಕ್ಷ ಬಾಲಕೃಷ್ಣ ಪಂಜ, ಸದಸ್ಯ ಶ್ರೀನಿವಾಸ್ ರಾವ್, ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಜಿಲ್ಲಾ ನಿರ್ದೇಶಕ ಚಂದ್ರಶೇಖರ್ ಕೆ., ಜನಜಾಗೃತಿ ವೇದಿಕೆ ಬಂಟ್ವಾಳ ತಾಲೂಕು ಅಧ್ಯಕ್ಷ ಪ್ರಕಾಶ್ ಕಾರಂತ, ಸದಸ್ಯ ಆನಂದ, ರವೀಂದ್ರ ಕಂಬಳಿ, ಹಿರಿಯ ವೈದ್ಯ ಬಿ.ವಿ.ವಸಂತ ಬಾಳಿಗ, ಕೇಂದ್ರ ಒಕ್ಕೂಟ ಸಮಿತಿಯ ಬಂಟ್ವಾಳ ತಾಲೂಕು ಅಧ್ಯಕ್ಷ ಸದಾನಂದ ನಾವೂರು, ಪುರಸಭಾ ಸದಸ್ಯ ಜನಾರ್ದನ ಚಂಡ್ತಿಮಾರ್ ಉಪಸ್ಥಿತರಿದ್ದರು.

ಬಂಟ್ವಾಳ ವಲಯದ ಯೋಜನಾಕಾರಿ ಜಯಾನಂದ ಪಿ. ಸ್ವಾಗತಿಸಿ, ಸಿದ್ಧಕಟ್ಟೆ ವಲಯದ ಮೇಲ್ವಿಚಾರಕಿ ಹರಿಣಾಕ್ಷಿ ವಂದಿಸಿದರು. ಮೇಲ್ವಿಚಾರಕ ಶಶಿಧರ್ ನಿರೂಪಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts