ಬಂಟ್ವಾಳ

ಬಿಆರ್‌ಎಂಪಿ ಶಾಲೆ ವಾರ್ಷಿಕೋತ್ಸವ

ಮಕ್ಕಳು ಶಿಸ್ತು ಸನ್ನಡತೆಗಳನ್ನು ಅಳವಡಿಸಿಕೊಳ್ಳಲು ಪೋಷಕರು ಅವಕಾಶ ಮಾಡಿಕೊಡಬೇಕು. ವಿದ್ಯಾರ್ಥಿಗಳಿಗೆ ಶಿಕ್ಷಕರೇ ಮಾದರಿಯಾಗಿರುವ ಕಾರಣ ಶಿಕ್ಷಕರ ಪ್ರತೀ ನಡವಳಿಕೆಯೂ ಎಚ್ಚರಿಕೆಯಿಂದ ಕೂಡಿರಬೇಕು. ಸಚ್ಚಾರಿತ್ರ್ಯವುಳ್ಳ ಮಕ್ಕಳು ಸಮಾಜದ ಆಸ್ತಿಯಾಗುತ್ತಾರೆ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಶ್ರೀ ಮಹಾವೀರ ಜೈನ್ ಇಚ್ಲಂಪಾಡಿ ಹೇಳಿದರು.

ವಿದ್ಯಾಗಿರಿಯ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಯಲ್ಲಿ ನಡೆದ ಶಾಲಾ ವಾರ್ಷಿಕೋತ್ಸವದ ಸಭಾ ಕಾರ್‍ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಜಾಹೀರಾತು

ಫಲ ತುಂಬಿದ ಮರದ ಕೊಂಬೆ ಬಾಗುವಂತೆ ಬೆಳೆದಂತೆಲ್ಲಾ ಮಕ್ಕಳಿಗೆ ಬಾಗುವುದನ್ನು ಕಲಿಸಬೇಕು. ಗುರು ಹಿರಿಯರಿಗೆ ಬಾಗಿ ನಡೆಯುವುದನ್ನು ಕಲಿಸಿದರೆ, ಕಲಿತ ವಿದ್ಯೆಯು ಸಾರ್ಥಕವಾಗುತ್ತದೆ ಎಂದು ಅವರು ಹೇಳಿದರು.

ಜಾಹೀರಾತು

ಶಾಲಾ ಸಂಚಾಲಕ ಭಾಮಿ ವಿಠಲ್ ದಾಸ್ ಶೆಣೈ ಕಾರ್‍ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಪ್ರಾಂಶುಪಾಲೆ ರಮಾಶಂಕರ್ ಸಿ ವಾರ್ಷಿಕ ವರದಿ ವಾಚನ ಮಾಡಿದರು.

ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಸಂಪತ್ ಕುಮಾರ್ ಶೆಟ್ಟಿ, ಎಸ್.ವಿ.ಎಸ್ ವಿದ್ಯಾವರ್ಧಕ ಸಂಘದ ಸದಸ್ಯರಾದ ರವಿದಾಸ್ ಪೈ ಉಪಸ್ಥಿತರಿದ್ದರು.

ಜಾಹೀರಾತು

ವಿದ್ಯಾರ್ಥಿ ನಾಯಕ ತರುಣ್ ಹೊಳ್ಳ ಮತ್ತು ನಾಯಕಿ ಅಪೂರ್ವ ನಾಯಕ್ ಕಾರ್‍ಯಕ್ರಮ ನಿರ್ವಹಿಸಿದರು.

ಜಾಹೀರಾತು

ಶಿಕ್ಷಕಿ ಸುರೇಖಾ ಎಸ್ ರೈ ವಂದಿಸಿದರು. ಜಾನಪದ ಕೇಂದ್ರಿತವಾಗಿದ್ದ ಹಲವು ಸಾಂಸ್ಕೃತಿಕ ಕಾರ್‍ಯಕ್ರಮಗಳು ಜರುಗಿದವು.

ಜಾಹೀರಾತು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ