ಜಿಲ್ಲಾ ಸುದ್ದಿ

ಮರಳುಶಿಲ್ಪದಲ್ಲಿ ಬ್ರಾಂಡ್ ಮಂಗಳೂರು

ಬ್ರಾಂಡ್ ಮಂಗಳೂರು ಎಂಬ ಪರಿಕಲ್ಪನೆಯಡಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನಾನಾ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಹಾಗು ಸಂಘದ ಸದಸ್ಯರು ಮಂಗಳೂರಿನ ಇಮೇಜ್ ಗೆ ಧಕ್ಕೆಯಾಗದಂತೆ ವರ್ತಿಸಲು ಸಾರ್ವಜನಿಕ, ರಾಜಕೀಯ ಸಂಘ, ಸಂಸ್ಥೆಗಳಿಗೆ ವಿನಂತಿಸುತ್ತಿರುವುದು ನಡೆದೇ ಇದೆ. ಸುದ್ದಿಮಾಡುವುದರಲ್ಲೂ ಸ್ವಯಂಶಿಸ್ತು ರೂಪಿಸಿರುವ ಪತ್ರಕರ್ತರ ಕ್ರಮ ಸಾರ್ವತ್ರಿಕವಾಗಿ ಶ್ಲಾಘನೆಗೆ ಒಳಗಾಗಿರುವಂತೆಯೇ ಕರಾವಳಿ ಉತ್ಸವದಲ್ಲೂ ಇದಕ್ಕೆ ಪ್ರೋತ್ಸಾಹಕವಾಗಿ ಮರಳು ಶಿಲ್ಪ ರಚನೆಗೊಂಡಿದೆ.

ಜಾಹೀರಾತು

ಪಣಂಬೂರು ಕಡಲ ಕಿನಾರೆಯಲ್ಲಿ ನಡೆಯುತ್ತಿರುವ ಬೀಚ್ ಉತ್ಸವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಬ್ರ್ಯಾಂಡ್ ಮಂಗಳೂರು ಪರಿಕಲ್ಪನೆಯ ಕೋಮು ಸೌಹಾರ್ದತೆ ಸಾರುವ ಮರಳು ಶಿಲ್ಪ ಕಲಾಕೃತಿ ಗಮನ ಸೆಳೆಯಿತು. ಸಂದೇಶ ಮಡಪಾಡಿ, ರವಿ ಹಿರೇಬೆಟ್ಟು ಹಾಗೂ ಪುರಂದರ ತೊಟ್ಟಮ್ ಮರಳಿನ ಕಲಾಕೃತಿ ರಚಿಸಿದ್ದಾರೆ. ಆರು ಗಂಟೆಗಳ ಕಾಲ ಶ್ರದ್ಧೆಯಿಂದ ರೂಪಿಸಿದ ಈ ಮರಳುಶಿಲ್ಪವೀಗ ಆಕರ್ಷಣೆಯ ಕೇಂದ್ರ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts