www.bantwalnews.com Editor: Harish Mambady
ಬಂಟ್ವಾಳನ್ಯೂಸ್ ವರದಿ:
ಗಟ್ಟಿ ಧ್ವನಿಯಲ್ಲಿ ನಮಗಿಂಥ ಶಿಕ್ಷಣ ಬೇಕು ಎಂದು ಪ್ರಜೆಗಳು ಹೇಳಿದರೆ ಅದನ್ನೇ ಸರಕಾರ ರೂಪಿಸುತ್ತದೆ. ತಮ್ಮ ಮಕ್ಕಳಿಗೆ ಯಾವ ಶಿಕ್ಷಣ ಬೇಕು ಎಂಬ ನಿರ್ಧಾರ ಪ್ರಜೆಗಳ ಕೈಯಲ್ಲಿದೆ. ಜ್ಞಾನಿಗಳಾಗಿ, ಧೈರ್ಯಶಾಲಿಗಳಾಗಿ, ರಾಷ್ಟ್ರಕ್ಕಾಗಿ ಬದುಕು ಸಾಗಿಸುವ ಬಲಾಢ್ಯ ಪ್ರಜೆಗಳನ್ನು ರೂಪಿಸಲು ವಿದ್ಯೆ ಅವಶ್ಯ. ಕನ್ನಡ ಭಾಷೆಯಲ್ಲಿ ಬೇಕೋ, ಇಂಗ್ಲೀಷ್ ಭಾಷೆಯಲ್ಲಿ ಬೇಕೋ ಎಂಬ ನಿರ್ಣಯವನ್ನು ಮಾಡುವವರು ನೀವೇ.
ರಾಜ್ಯಪಾಲರ ಭಾಷಣದ ಹೈಲೈಟ್ಸ್ ಇವು.
ಶುಭ ಹಾರೈಸಿದ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಮೂಡುನಡುಗೋಡು ಗ್ರಾಮವನ್ನು ಮದ್ಯವ್ಯಸನಮುಕ್ತವಾಗಿಸಲು ಹಾಗೂ ಆದರ್ಶ ಗ್ರಾಮವಾಗಿಸಲು ರಾಜ್ಯಪಾಲರ ಸೂಚನೆಯಂತೆ ಕಾರ್ಯಪ್ರವೃತ್ತರಾಗುತ್ತೇವೆ. ಕನ್ನಡ ಶಾಲೆಗಳು ಮುಚ್ಚುವ ಪರಿಸ್ಥಿತಿ ಇದ್ದಾಗ ಅದನ್ನು ಉಳಿಸಬಹುದು ಎಂಬ ನಂಬಿಕೆಯನ್ನು ಶಾಲೆ ಮಾಡಿದೆ ಎಂದು ಶ್ಲಾಘಿಸಿದರು.
ವಿಧಾನಪರಿಷತ್ತು ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಹೈಕೋರ್ಟು ನ್ಯಾಯವಾದಿ ರಾಜಶೇಖರ ಹಿಳಿಯೂರು ಮಾತನಾಡಿದರು. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅಧ್ಯಕ್ಷತೆ ವಹಿಸಿದ್ದರು. ಸರಕಾರಿ ಶಾಲೆ ಉಳಿಸಿ ಬೆಳೆಸಿ –ರಾಜ್ಯ ಸಮಿತಿ ಹಾಗೂ ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಕಾಶ್ ಅಂಚನ್ ಪ್ರಾಸ್ತಾವಿಕ ಮಾತನಾಡಿದರು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಡಿಡಿಪಿಐ ವೈ.ಶಿವರಾಮಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್, ಪ್ರಮುಖರಾದ ಸೇಸಪ್ಪ ಕೋಟ್ಯಾನ್, ಗೋವಿಂದ ಪ್ರಭು, ಸುಲೋಚನಾ ಭಟ್, ಪ್ರಭಾಕರ ಪ್ರಭು ಸಹಿತ ಹಲವರು ಈ ಸಂದರ್ಭ ಉಪಸ್ಥಿತರಿದ್ದರು. ಪುರುಷೋತ್ತಮ ಅಂಚನ್ ವಂದಿಸಿದರು. ಶಿಕ್ಷಕಿ ಹಿಲ್ಡಾ ಫರ್ನಾಂಡಿಸ್ ಕಾರ್ಯಕ್ರಮ ನಿರೂಪಿಸಿದರು.
ರಾಜ್ಯಪಾಲ ವಜೂಭಾಯಿವಾಲಾ ಅವರು ಮೊದಲ ಬಾರಿಗೆ ಬಂಟ್ವಾಳಕ್ಕೆ ಆಗಮಿಸುತ್ತಿದ್ದು, ಪ್ರವಾಸಿ ಬಂಗ್ಲೆಯಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಸ್ವಾಗತ ಕೋರಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…