ಬಂಟ್ವಾಳ

ಖಾಸಗಿ ಬಸ್ ಬಂದ್, ಸರ್ಕಾರಿ ಬಸ್ಸುಗಳ ಓಡಾಟ, ಎಂದಿನಂತೆ ಆಟೋ, ಟ್ಯಾಕ್ಸಿ

www.bantwalnews.com Editor: Harish Mambady

ಜಾಹೀರಾತು

ಬಂಟ್ವಾಳ ವರದಿ:

ಜಾಹೀರಾತು

ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಭಾರತ ಬಂದ್ ಗೆ ಬಂಟ್ವಾಳದಲ್ಲಿ ಮಂಗಳವಾರ ಬೆಳಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿವೆ. ಕೆಲವು ಅಂಗಡಿ, ಮುಂಗಟ್ಟುಗಳು ಸಮಯ ಸಂದರ್ಭ ನೋಡಿ ತೆರೆಯುವ ನೀತಿ ಅನುಸರಿಸಿದರೆ, ಮೆಡಿಕಲ್ ಶಾಪ್ ಸಹಿತ ಹಲವು ಅಂಗಡಿ, ಮಳಿಗೆಗಳು ತೆರೆದಿದ್ದು, ವಹಿವಾಟು ಆರಂಭಿಸಿವೆ.

ಆದರೆ ಸದಾ ಗಿಜಿಗುಡುತ್ತಿರುವ ಖಾಸಗಿ ಬಸ್ ನಿಲ್ಲುವ ಬಿ.ಸಿ.ರೋಡಿನ ಪುರಸಭಾ ವಾಣಿಜ್ಯ ಸಂಕೀರ್ಣದಲ್ಲಿ ಜನಸಂಚಾರವೂ ವಿರಳವಾಗಿತ್ತು. ಕಾರಣ, ಖಾಸಗಿ ಬಸ್ಸುಗಳು ರಸ್ತೆಗಿಳಿಯಲಿಲ್ಲ. ಮಂಗಳೂರು, ಪುತ್ತೂರುಗಳಿಗೆ ತೆರಳುವ ಕೆಎಸ್ಸಾರ್ಟಿಸಿ ಬಸ್ಸುಗಳು ಎಂದಿನಂತೆಯೇ ಸಂಚಾರ ನಡೆಸುತ್ತಿದ್ದವು. ಆಟೋ ಸ್ಟ್ಯಾಂಡ್ ಗಳಲ್ಲಿ ರಿಕ್ಷಾಗಳು ಪ್ರಯಾಣಿಕರಿಗೆ ಎಂದಿನಂತೆಯೇ ಕಾಯುತ್ತಿದ್ದ ದೃಶ್ಯ ಕಂಡುಬಂತು. ಮೊದಲೇ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿದ ಕಾರಣ ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಅವರನ್ನು ಕರೆದೊಯ್ಯುತ್ತಿದ್ದವಾಹನಗಳು ರಸ್ತೆಗಿಳಿಯಲಿಲ್ಲ. ಖಾಸಗಿ ಬಸ್ಸುಗಳು ಓಡಾಟ ನಡೆಸದ ಕಾರಣ, ಕಚೇರಿ ಕರ್ತವ್ಯಗಳಿಗೆ ತೆರಳುವವರು, ಹಳ್ಳಿ ಪ್ರದೇಶದ ಜನರು ತೊಂದರೆಗೊಳಗಾದರು. ಖಾಸಗಿ ವಾಹನಗಳನ್ನು ಆಶ್ರಯಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ