ಬಂಟ್ವಾಳ ತಾಲೂಕಿನ ಹಲವೆಡೆ ವಿಜಯಾ ಬ್ಯಾಂಕ್ ಎದುರು ಕಾಂಗ್ರೆಸ್ ಧರಣಿ

ಬಂಟ್ವಾಳನ್ಯೂಸ್ ವರದಿ:

ವಿಜಯಾ ಬ್ಯಾಂಕ್ ಜೊತೆ ಇತರ ಬ್ಯಾಂಕ್ ವಿಲೀನ ವಿರೋಧಿಸಿ ಸರಪಾಡಿಯ ಅಲ್ಲಿಪಾದೆಯಲ್ಲಿ ಬ್ಯಾಂಕ್ ಮುಂಭಾಗ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು. ಪ್ರಮುಖರಾದ ನಾವೂರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗುಲಾಬಿ ಚಂದಪ್ಪ, ತಾಲೂಕು ಪಂಚಾಯತ್ ಸದಸ್ಯರಾದ ಸ್ವಪ್ನ ವಿಶ್ವನಾಥ್ ಪೂಜಾರಿ, ವಲಯ ಅಧ್ಯಕ್ಷರುಗಳಾದ ಆದಂ ಕುಂಞ, ಜಿಪಂ ಸದಸ್ಯ ಪದ್ಮಶೇಖರ್ ಜೈನ್, ದಯಾನಂದ ಶೆಟ್ಟಿ ಅಮೈ, ಪ್ರಮುಖರಾದ ಸಂಪತ್ ಕುಮಾರ್ ಶೆಟ್ಟಿ, ವಿನ್ಸೆಂಟ್ ಪಿಂಟೊ ,ಸುವರ್ಣ ಕುಮಾರ್ ಜೈನ್, ಶಿವಪ್ಪ ಪೂಜಾರಿ, ಅಸುಂತ ಮರಿಯ, ಶಿವರಾಮ್ ಆಳ್ವ, ಹುಸೈನ್ ಪೆರಿಯಪಾದೆ, ಡೆನ್ಜಿಲ್ ಅಲ್ಲಿಪಾದೆ, ನಾರಾಯಣ ಸಾಲಿಯಾನ್, ಫಾರುಕ್, ಪುವಪ್ಪ ಪೂಜಾರಿ, ಆಗ್ನೇಲ್ ಜೆರೋಮ್ ಮತ್ತಿತರರು ಉಪಸ್ಥಿತರಿದ್ದರು.

ಬಂಟ್ವಾಳ ವಿಜಯಾ ಬ್ಯಾಂಕ್ ಎದುರು ಬ್ಯಾಂಕ್ ವಿಲೀನ ಕುರಿತು ನಡೆದ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿದರು. ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪ್ರಮುಖರಾದ ವೆಂಕಪ್ಪ ಪೂಜಾರಿ, ಮಲ್ಲಿಕಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಬಿ.ಸಿ.ರೋಡ್ ವಿಜಯಾ ಬ್ಯಾಂಕ್ ಶಾಖೆ ಎದುರು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ವತಿಯಿಂದ ಬ್ಯಾಂಕ್ ವಿಲೀನ ವಿರೋಧಿಸಿ ಪ್ರತಿಭಟನೆ ನಡೆಯಿತು. ಈ ಸಂದರ್ಭ ಮಾಜಿ ಸಚಿವ ಬಿ.ರಮಾನಾಥ ರೈ, ಜಿಪಂ ಸದಸ್ಯ ಚಂದ್ರಪ್ರಕಾಶ ಶೆಟ್ಟಿ ತುಂಬೆ, ತಾಪಂ ಉಪಾಧ್ಯಕ್ಷ ಅಬ್ಬಾಸ್ ಆಲಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಪ್ರಮುಖರಾದ ಸದಾಶಿವ ಬಂಗೇರ, ಲುಕ್ಮಾನ್, ಜಯಂತಿ ಪೂಜಾರಿ, ಜೆಸಿಂತ ಡಿಸೋಜ, ಮಧುಸೂಧನ ಶೆಣೈ, ಪ್ರಶಾಂತ್ ಕುಲಾಲ್,  ಚಿತ್ತರಂಜನ್ ಶೆಟ್ಟಿ, ಮತ್ತಿತರರಿದ್ದರು.

ಬ್ಯಾಂಕ್ ಆಫ್ ಬರೋಡದೊಂದಿಗೆ ವಿಜಯಾ ಬ್ಯಾಂಕ್ ನ್ನು ವಿಲೀನಗೊಳಿಸುವ ಕೇಂದ್ರ ಸರಕಾರದ ವಿರುದ್ಧ ಕರಾಳ ದಿನಾಚರಣೆ ಹಾಗೂ ಪ್ರತಿಭಟನೆ ಕಲ್ಲಡ್ಕ ವಿಜಯಾ ಬ್ಯಾಂಕ್ ಆವರಣದಲ್ಲಿ ನಡೆಯಿತು. ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ ಕೇಂದ್ರ ಸರಕಾರದ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ದೂರಿದರು. ಈ ಸಂದರ್ಭ ವಲಯಾಧ್ಯಕ್ಷ ದಿನೇಶ್ ಶೆಣೈ, ಎಪಿಎಂಸಿ ಉಪಾಧ್ಯಕ್ಷ ಚಂದ್ರಶೇಖರ ಪೂಜಾರಿ, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ.ಇದಿನಬ್ಬ, ಪ್ರಮುಖರಾದ ಅಲ್ಬರ್ಟ್ ಮೆನೆಜಸ್, ಚಂದ್ರಶೇಖರ ರೈ ನಾರ್ಸ, ನಿಶಾಂತ್ ರೈ ವೀರಕಂಭ, ಗಣೇಶ್ ಶೆಟ್ಟಿ ಗೋಳ್ತಮಜಲು, ರಮೇಶ್ ನೆಟ್ಲ, ರಾಮಚಂದ್ರ ವೀರಕಂಭ, ಅಬೂಬಕ್ಕರ್ ಮುರಬೈಲು, ಭಟ್ಯಪ್ಪ ಶೆಟ್ಟಿ ನೆಟ್ಲ, ವಸಂತಿ, ಯೂಸುಫ್ ಕರಂದಾಡಿ ಆಯಿಷಾ, ಮಹಮ್ಮದ್ ಅಮ್ಟೂರು, ಪೂರ್ಣೀಮಾ ರಾವ್ ನೆಟ್ಲ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಂಟ್ವಾಳ ತಾಲೂಕಿನ ಹಲವೆಡೆ ವಿಜಯಾ ಬ್ಯಾಂಕ್ ಎದುರು ಕಾಂಗ್ರೆಸ್ ಧರಣಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*