ಬಂಟ್ವಾಳ

13ರಂದು ಬಂಟರ ಸಂಘ ಬಂಟ್ವಾಳ ವಾರ್ಷಿಕೋತ್ಸವ

www.bantwalnews.com Editor: Harish Mambady

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಪಕ್ಕ ತುಂಬೆ ವಳವೂರಿನಲ್ಲಿರುವ ಬಂಟವಾಳದ ಬಂಟರ ಭವನದಲ್ಲಿ ಜನವರಿ 13ರಂದು ಬಂಟರ ಸಂಘ, ಬಂಟವಾಳ ತಾಲೂಕಿನ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಅಧ್ಯಕ್ಷ ನಗ್ರಿಗುತ್ತು ವಿವೇಕ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು

ಬೆಳಗ್ಗೆ 10 ರಿಂದ ಬಂಟೆರೆ ಕಲಾ ಪಂಥ ನಡೆಯಲಿದ್ದು, ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ಪ್ರಸಿದ್ಧ ಯಕ್ಷಗಾನ ಭಾಗವತ ಪಟ್ಲ ಸತೀಶ ಶೆಟ್ಟಿ ಮಾರ್ಗದರ್ಶನ ನೀಡಲಿದ್ದಾರೆ.

ಇದರಲ್ಲಿ ಕಾವೂರು, ಪುತ್ತೂರು, ಕಾರ್ಕಳ, ಜಪ್ಪು, ಸುರತ್ಕಲ್, ಗುರುಪುರ, ಸುಳ್ಯ, ಉಳ್ಳಾಲ, ಕಾಸರಗೋಡು, ನೀರುಮಾರ್ಗ ಮತ್ತು ಪಡುಬಿದ್ರಿ ಬಂಟರ ಸಂಘದ ತಂಡಗಳು ಭಾಗವಹಿಸಲಿವೆ. ಬಂಟರ ಸಂಘ ಬಂಟವಾಳ ತಾಲೂಕು ಸದಸ್ಯರಿಂದ ಭಾರತ ದರ್ಶನ ಮತ್ತು ಜರ್ನಿ ಆಫ್ ಇಂಡಿಯನ್ ಸಿನಿಮಾಸ್ ಎಂಬ ಕಾರ್ಯಕ್ರಮ ಪ್ರಮೋದ್ ಆಳ್ವ ಮತ್ತು ಋಗ್ವೇದ್ ಬೇಂದ್ರೆ ಮಾರ್ಗದರ್ಶನದಲ್ಲಿ ನಡೆಯಲಿವೆ. ಸಂಜೆ .೩೦ಕ್ಕೆ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಗ್ರಿಗುತ್ತು ವಿವೇಕ್ ಶೆಟ್ಟಿ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಉದ್ಯಮಿ ಕೆ.ಪ್ರಕಾಶ ಶೆಟ್ಟಿ ಮತ್ತು ರತ್ನಾಕರ ಶೆಟ್ಟಿ ಮುಂಡ್ಕೂರು ಭಾಗವಹಿಸಲಿದ್ದಾರೆ. ಸಮಾಜ ಬಾಂಧವರು ಸಾಂಪ್ರದಾಯಿಕ ಉಡುಗೆಗಳಾದ ಸೀರೆ, ಶರ್ಟ್, ಪಂಚೆ ಶಾಲುಗಳಲ್ಲಿ ಮಿಂಚಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

 

 

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.